AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್

ಕುತ್ತಿಗೆಯಿಂದ  ಸುರಿಯುತ್ತಿರುವ ರಕ್ತ, ಒಂದು ಕೈಯಲ್ಲಿ ಚಾಕು, ಇನ್ನೊಂದರಲ್ಲಿ ಪಿಸ್ತೂಲ್​​ ಹಿಡಿದು ಫಯರ್​​ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. 

ರಸ್ತೆಯಲ್ಲಿ ಕತ್ತು ಸೀಳಿ, ಪಿಸ್ತೂಲಿನಿಂದ ಫಯರ್​​ ಮಾಡಿಕೊಂಡು ಓಡಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್
ಸಿಸಿಟಿವಿ ದೃಶ್ಯಾವಳಿImage Credit source: Twitter
ಅಕ್ಷತಾ ವರ್ಕಾಡಿ
|

Updated on: Mar 18, 2023 | 6:05 PM

Share

ಕುತ್ತಿಗೆಯಿಂದ  ಸುರಿಯುತ್ತಿರುವ ರಕ್ತ, ಒಂದು ಕೈಯಲ್ಲಿ ಚಾಕು, ಇನ್ನೊಂದರಲ್ಲಿ ಪಿಸ್ತೂಲ್​​ ಹಿಡಿದು ಫಯರ್​​ ಮಾಡಿಕೊಂಡು ವ್ಯಕ್ತಿಯೊಬ್ಬ ರಸ್ತೆಯಲ್ಲಿ ಓಡಾಡುತ್ತಿರುವ ವಿಡಿಯೋ ವೈರಲ್​ ಆಗಿದೆ. ಇಂತಹ ಆಘಾತಕಾರಿ ಘಟನೆ ಮಾರ್ಚ್ 16 ರಂದು ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಾಥು ಕಾಲೋನಿ ಚೌಕ್ ಬಳಿ ವ್ಯಕ್ತಿ ಕತ್ತು ಸೀಳಿಕೊಂಡು ಜನದಟ್ಟನೆ ಇರುವ ಪ್ರದೇಶದಲ್ಲಿ ಓಡಿಕೊಂಡು ಬರುತ್ತಿರುವುದು ಹತ್ತಿರದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈತನನ್ನು ಕಂಡು ಜನರು ಹೆದರಿ ಓಡಿಹೋಗುತ್ತಿರುವುದನ್ನು ಕಾಣಬಹುದು. ಕೆಲ ಹೊತ್ತಿನ ನಂತರ ಇತನನ್ನು ಪೊಲೀಸರು ಬಂಧಿಸಿ, ಆತನ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ.

ಎಎನ್‌ಐ ಟ್ಟಿಟರ್​​ ಖಾತೆಯಲ್ಲಿ ಹಂಚಿಕೊಂಡ ಆಘಾತಕಾರಿ ಘಟನೆಯ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: RRR ಚಿತ್ರಕ್ಕೂ ಟಾಮ್​ ಆ್ಯಂಡ್​ ಜೆರ್ರಿಗೂ ಏನು ಸಂಬಂಧ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್​​​​​​ ಕಹಾನಿ

ಆರೋಪಿ ಕ್ರಿಶನ್ ಶೇರ್ವಾಲ್(29) ಎಂದು ಗುರುತಿಸಲಾಗಿದೆ. ಈತ ತನ್ನ ಹೆಂಡತಿಯಿಂದ ವಿಚ್ಛೇದನ ಪಡೆದುಕೊಂಡಿದ್ದು, ಇದೇ ಕಾರಣಕ್ಕಾಗಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಾನೆ ಎಂದು ಪೊಲೀಸರ ವಿಚಾರಣೆಯ ವೇಳೆಗೆ ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಈ ವ್ಯಕ್ತಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪಿಸಿಆರ್ ವ್ಯಾನ್ ಸ್ಥಳಕ್ಕೆ ಧಾವಿಸಿದೆ. ಆತನ ಕೈಯಿಂದ ಪಿಸ್ತೂಲ್​ ಚಾಕು ವಶಪಡಸಿಕೊಳ್ಳುವ ವೇಳೆ ಪೊಲೀಸ್​​​ ಸಿಬ್ಬಂದಿಯೊಬ್ಬರಿಗೆ ಗಾಯವಾಗಿದೆ. ಶೇರ್ವಾಲ್ ವಿರುದ್ಧ ಐಪಿಸಿ ಸೆಕ್ಷನ್ 307, 394, 397, 186, 353 ಮತ್ತು 27 ಅಡಿಯಲ್ಲಿ ಎಂಎಸ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?