AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ

ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋ ಇಲ್ಲಿದೆ ನೋಡಿ.

Viral Video: ಪಿಎಚ್‌ಡಿ ಮಾಡುತ್ತಲೇ ಬೀದಿಬದಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಕುಟುಂಬಕ್ಕೆ ನೆರವಾಗುತ್ತಿರುವ ಯುವಕ
ಅಕ್ಷತಾ ವರ್ಕಾಡಿ
|

Updated on: Sep 08, 2024 | 11:56 AM

Share

ಚೆನ್ನೈ: ವಿದ್ಯಾಭ್ಯಾಸದ ಜೊತೆಗೆ ಪಾರ್ಟ್ ಟೈಂ ಕೆಲಸ ಮಾಡುತ್ತಾ ಕುಟುಂಬಕ್ಕೆ ನೆರವಾಗುತ್ತಿರುವ ತಮಿಳುನಾಡಿನ ಯುವಕನೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಪಿಎಚ್‌ಡಿ ಮಾಡುತ್ತಿರುವ ತರುಲ್ ರಾಯನ್ ಸಂಜೆಯ ಹೊತ್ತಿನಲ್ಲಿ ಬೀದಿ ಬದಿಯಲ್ಲಿ ಸಣ್ಣ ಫುಡ್​​​ ಸ್ಟಾಲ್​ ಇಟ್ಟುಕೊಂಡು ಆರ್ಥಿಕವಾಗಿ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದಾರೆ.

ಅಮೆರಿಕದ ಖ್ಯಾತ ವ್ಲಾಗರ್‌ ಕ್ರಿಸ್ಟೋಫರ್ ಲೂಯಿಸ್ ಗೂಗಲ್ ಮ್ಯಾಪ್‌ ಸಹಾಯದಿಂದ ತರುಲ್ ರಾಯನ್ ನಡೆಸುತ್ತಿದ್ದ ಫುಡ್​​​ ಸ್ಟಾಲ್​​ಗೆ ಭೇಟಿ ಕೊಟ್ಟಿದ್ದು, ಈ ಯುವಕ ಪಿಎಚ್‌ಡಿ ವಿದ್ಯಾರ್ಥಿ ಎಂದು ತಿಳಿದು ಲೂಯಿಸ್ ಆಶ್ಚರ್ಯಚಕಿತರಾಗಿದ್ದಾರೆ. ಸದ್ಯ ವ್ಲಾಗರ್‌ ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದು, ವಿಡಿಯೋ ನೆಟ್ಟಿಗರ ಮನ ಗೆದ್ದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವ್ಯಾಪಾರಿಯ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ದೋಚಿ ಪರಾರಿಯಾದ ಖದೀಮರು; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ವಿಡಿಯೋದಲ್ಲಿ ಯುವಕ “ನೀವು ನನ್ನ ಹೆಸರನ್ನು ಗೂಗಲ್ ಮಾಡಿದರೆ, ನನ್ನ ಸಂಶೋಧನಾ ಲೇಖನಗಳು ಸಿಗುತ್ತವೆ” ಎಂದು ಹೇಳಿರುವುದು ಸೆರೆಯಾಗಿದೆ. ಎಸ್‌ಆರ್‌ಎಂ ವಿಶ್ವವಿದ್ಯಾನಿಲಯದಲ್ಲಿ ಬಯೋಟೆಕ್ನಾಲಜಿಯಲ್ಲಿ ರಾಯನ್ ಪಿಎಚ್‌ಡಿ ಮಾಡುತ್ತಿದ್ದು, ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲು ಪಾರ್ಟ್ ಟೈಂ ಫುಡ್​​​ ಸ್ಟಾಲ್​ ಇಟ್ಟುಕೊಂಡಿರುವುದಾಗಿ ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ