AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್

Jaipur Flood: ರಾಜಸ್ಥಾನದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜೈಪುರ ಏರ್​ಪೋರ್ಟ್​ ಅಕ್ಷರಶಃ ನದಿಯಂತಾಗಿದೆ. ವಿಮಾನ ನಿಲ್ದಾಣದ ಹೊರಗೆ ಮತ್ತು ಒಳಗೆ ಕೆಂಪನೆಯ ಮಳೆನೀರು ಹರಿಯುತ್ತಿದೆ. ಈ ಪ್ರವಾಹದ ನಡುವೆ ಪೈಲಟ್ ಲಗೇಜ್ ಟ್ರಾಲಿಯಲ್ಲಿ ಜೈಪುರ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿರುವ ವಿಡಿಯೋ ವೈರಲ್ ಆಗಿದೆ.

Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್
ಲಗೇಜ್ ಟ್ರಾಲಿಯಲ್ಲಿ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿರುವ ಪೈಲಟ್
ಸುಷ್ಮಾ ಚಕ್ರೆ
|

Updated on: Aug 01, 2024 | 10:14 PM

Share

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಭಾರೀ ಮಳೆಯಿಂದ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿದೆ. ಇದರಿಂದ ವಿಮಾನಗಳ ಸಂಚಾರ ವ್ಯತ್ಯಯವಾಗಿದ್ದು, ಮಳೆಯ ನೀರು ತುಂಬಿದ ಏರ್​ಪೋರ್ಟ್ ಒಳಗೆ ಕೂರಲಾಗದೆ, ನಿಲ್ಲಲಾಗದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ವೇಳೆ ವಿಮಾನದ ಪೈಲಟ್ ಕೂಡ ಲಗೇಜ್ ಟ್ರಾಲಿಯ ಮೇಲೆ ನಿಂತು ವಿಮಾನ ನಿಲ್ದಾಣದ ಒಳಗೆ ದಾಟಿರುವ ವಿಡಿಯೋ ವೈರಲ್ ಆಗಿದೆ.

ಜೈಪುರದಲ್ಲಿ ಇಂದು ಭಾರೀ ಮಳೆಯಾಗಿದ್ದು, ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಜೆಐಎ) ಸೇರಿದಂತೆ ಹಲವು ಭಾಗಗಳು ಜಲಾವೃತಗೊಂಡಿದೆ. ಇದರಿಂದ ಮಳೆಯಲ್ಲಿ ಜನರು ಸಿಲುಕಿಕೊಂಡಿದ್ದಾರೆ. ಮಳೆಯ ನಡುವೆ, ಪೈಲಟ್ ಒಬ್ಬರು ವಿಮಾನ ನಿಲ್ದಾಣಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಪೈಲಟ್ ನೀರು ತುಂಬಿದ ಹೊರಭಾಗದಲ್ಲಿ ಟ್ರಾಲಿಯ ಸಹಾಯದಿಂದ ದಾಟಿದ್ದಾರೆ. ಲಗೇಜ್ ಟ್ರಾಲಿ ಮೇಲೆ ನಿಂತ ಅವರನ್ನು ವಿಮಾನ ನಿಲ್ದಾಣದ ಸಿಬ್ಬಂದಿ ತಳ್ಳಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

“ಇದು ಜೈಪುರ ಅದಾನಿ ವಿಮಾನ ನಿಲ್ದಾಣ. ಇಲ್ಲಿ ಪೈಲಟ್‌ಗಳು ವಿಮಾನ ಹತ್ತುವ ಮುನ್ನವೇ ಹಾರುತ್ತಾರೆ. ಟ್ರಾಲಿಯೇ ಅವರಿಗೆ ಹಾರಲು ಸಾಕು” ಎಂದು ಎಕ್ಸ್ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ.

ಈ ವೀಡಿಯೊವನ್ನು ಇಂದು ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದ ನಂತರ, ಇದು 7,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್