AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್

Jaipur Flood: ರಾಜಸ್ಥಾನದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಜೈಪುರ ಏರ್​ಪೋರ್ಟ್​ ಅಕ್ಷರಶಃ ನದಿಯಂತಾಗಿದೆ. ವಿಮಾನ ನಿಲ್ದಾಣದ ಹೊರಗೆ ಮತ್ತು ಒಳಗೆ ಕೆಂಪನೆಯ ಮಳೆನೀರು ಹರಿಯುತ್ತಿದೆ. ಈ ಪ್ರವಾಹದ ನಡುವೆ ಪೈಲಟ್ ಲಗೇಜ್ ಟ್ರಾಲಿಯಲ್ಲಿ ಜೈಪುರ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿರುವ ವಿಡಿಯೋ ವೈರಲ್ ಆಗಿದೆ.

Viral Video: ನದಿಯಂತಾದ ಜೈಪುರ ವಿಮಾನ ನಿಲ್ದಾಣ; ಲಗೇಜ್ ಟ್ರಾಲಿ ಮೇಲೆ ನಿಂತ ಪೈಲಟ್ ವಿಡಿಯೋ ವೈರಲ್
ಲಗೇಜ್ ಟ್ರಾಲಿಯಲ್ಲಿ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿರುವ ಪೈಲಟ್
ಸುಷ್ಮಾ ಚಕ್ರೆ
|

Updated on: Aug 01, 2024 | 10:14 PM

Share

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಭಾರೀ ಮಳೆಯಿಂದ ವಿಮಾನ ನಿಲ್ದಾಣದೊಳಗೆ ನೀರು ನುಗ್ಗಿದೆ. ಇದರಿಂದ ವಿಮಾನಗಳ ಸಂಚಾರ ವ್ಯತ್ಯಯವಾಗಿದ್ದು, ಮಳೆಯ ನೀರು ತುಂಬಿದ ಏರ್​ಪೋರ್ಟ್ ಒಳಗೆ ಕೂರಲಾಗದೆ, ನಿಲ್ಲಲಾಗದೆ ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ವೇಳೆ ವಿಮಾನದ ಪೈಲಟ್ ಕೂಡ ಲಗೇಜ್ ಟ್ರಾಲಿಯ ಮೇಲೆ ನಿಂತು ವಿಮಾನ ನಿಲ್ದಾಣದ ಒಳಗೆ ದಾಟಿರುವ ವಿಡಿಯೋ ವೈರಲ್ ಆಗಿದೆ.

ಜೈಪುರದಲ್ಲಿ ಇಂದು ಭಾರೀ ಮಳೆಯಾಗಿದ್ದು, ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಜೆಐಎ) ಸೇರಿದಂತೆ ಹಲವು ಭಾಗಗಳು ಜಲಾವೃತಗೊಂಡಿದೆ. ಇದರಿಂದ ಮಳೆಯಲ್ಲಿ ಜನರು ಸಿಲುಕಿಕೊಂಡಿದ್ದಾರೆ. ಮಳೆಯ ನಡುವೆ, ಪೈಲಟ್ ಒಬ್ಬರು ವಿಮಾನ ನಿಲ್ದಾಣಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಪೈಲಟ್ ನೀರು ತುಂಬಿದ ಹೊರಭಾಗದಲ್ಲಿ ಟ್ರಾಲಿಯ ಸಹಾಯದಿಂದ ದಾಟಿದ್ದಾರೆ. ಲಗೇಜ್ ಟ್ರಾಲಿ ಮೇಲೆ ನಿಂತ ಅವರನ್ನು ವಿಮಾನ ನಿಲ್ದಾಣದ ಸಿಬ್ಬಂದಿ ತಳ್ಳಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Viral Video: ವ್ಯಕ್ತಿಯ ಕುತ್ತಿಗೆಗೆ ಸುತ್ತಿಕೊಂಡು ನುಂಗಲೆತ್ನಿಸಿದ 15 ಅಡಿ ಉದ್ದದ ಹೆಬ್ಬಾವು; ಶಾಕಿಂಗ್ ವಿಡಿಯೋ ವೈರಲ್

“ಇದು ಜೈಪುರ ಅದಾನಿ ವಿಮಾನ ನಿಲ್ದಾಣ. ಇಲ್ಲಿ ಪೈಲಟ್‌ಗಳು ವಿಮಾನ ಹತ್ತುವ ಮುನ್ನವೇ ಹಾರುತ್ತಾರೆ. ಟ್ರಾಲಿಯೇ ಅವರಿಗೆ ಹಾರಲು ಸಾಕು” ಎಂದು ಎಕ್ಸ್ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ.

ಈ ವೀಡಿಯೊವನ್ನು ಇಂದು ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದ ನಂತರ, ಇದು 7,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ