AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿದ್ದ ರೈಲಿಗೆ ಹತ್ತುವಾಗ ಜಾರಿ ಬಿದ್ದ ವ್ಯಕ್ತಿ; ಕೂಡಲೇ ಎಂಟ್ರಿ ಕೊಟ್ಟ ಆಪದ್ಬಾಂಧವ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಚಲಿಸುತ್ತಿದ್ದ ರೈಲಿಗೆ ಹತ್ತುವಾಗ ಜಾರಿ ಬಿದ್ದ ವ್ಯಕ್ತಿ; ಕೂಡಲೇ ಎಂಟ್ರಿ ಕೊಟ್ಟ ಆಪದ್ಬಾಂಧವ
ರೈಲಿನಿಂದ ಕಾಲು ಜಾರಿ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿImage Credit source: RPF India
TV9 Web
| Edited By: |

Updated on:Sep 12, 2022 | 3:47 PM

Share

ತಮ್ಮ ಜೀವವನ್ನು ಲೆಕ್ಕಿಸದೆ ರೈಲು ಹತ್ತಿದರೆ ಸಾಕು ಎಂಬ ಮನಸ್ಥಿತಿಯಿಂದ ಕೆಲವು ಪ್ರಯಾಣಿಕರು ರೈಲು ಚಲಿಸುತ್ತಿರುವಾಗಲೇ ಹತ್ತುತ್ತಾರೆ. ಇದರಿಂದ ಅಲ್ಲೊಂದು ಇಲ್ಲೊಂದು ಅವಗಢಗಳು ಸಂಬವಿಸುತ್ತಿರುತ್ತವೆ. ಇದಕ್ಕೆ ಸಂಬಂಧಿಸಿದ ಅನೇಕ ವಿಡಿಯೋಗಳು ಈ ಹಿಂದೆ ವೈರಲ್ ಆಗಿದ್ದವು. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಚಲಿಸುತ್ತಿರುವ ರೈಲಿ ಹಿಂಬದಿ ಬೋಗಿ ಹತ್ತಲು ಮುಂದಾದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದಾಗ ಪೊಲೀಸ್ ಸಿಬ್ಬಂದಿ ರಕ್ಷಣೆ ಮಾಡುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್​ಫಾರ್ಮ್​ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್​ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ ಮಾಡಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯ ಪಾಲಿಗೆ ಆಪದ್ಬಾಂಧವನಾಗಿ ಪೊಲೀಸ್ ಸಿಬ್ಬಂದಿ ರಾಜೇಂದ್ರ ಸಿಂಗ್ ಅವರು ಬಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಶ್ಲಾಘಿಸಿದ ಆರ್​ಪಿಎಫ್, ಎಎಸ್​ಐ ರಾಜೇಂದ್ರ ಸಿಂಗ್ ಅವರು ದುರಂತವೊಂದನ್ನು ತಪ್ಪಿಸಿದರು, ಗಾಜಿಯಾಬಾದ್ ರೈಲ್ವೇ ನಿಲ್ದಾಣದಲ್ಲಿ ಚಲಿಸುವ ರೈಲಿನೊಂದಿಗೆ ಹತ್ತುತ್ತಿರುವಾಗ ಜಾರಿಬಿದ್ದ ಪ್ರಯಾಣಿಕನಿಗೆ ಹೊಸ ಜೀವನ ನೀಡಿದರು ಎಂದು ಹೇಳಿದ್ದಾರೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Mon, 12 September 22

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?