AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿದ್ದ ರೈಲಿಗೆ ಹತ್ತುವಾಗ ಜಾರಿ ಬಿದ್ದ ವ್ಯಕ್ತಿ; ಕೂಡಲೇ ಎಂಟ್ರಿ ಕೊಟ್ಟ ಆಪದ್ಬಾಂಧವ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ರಕ್ಷಣೆ ಮಾಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಚಲಿಸುತ್ತಿದ್ದ ರೈಲಿಗೆ ಹತ್ತುವಾಗ ಜಾರಿ ಬಿದ್ದ ವ್ಯಕ್ತಿ; ಕೂಡಲೇ ಎಂಟ್ರಿ ಕೊಟ್ಟ ಆಪದ್ಬಾಂಧವ
ರೈಲಿನಿಂದ ಕಾಲು ಜಾರಿ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿImage Credit source: RPF India
TV9 Web
| Edited By: Rakesh Nayak Manchi|

Updated on:Sep 12, 2022 | 3:47 PM

Share

ತಮ್ಮ ಜೀವವನ್ನು ಲೆಕ್ಕಿಸದೆ ರೈಲು ಹತ್ತಿದರೆ ಸಾಕು ಎಂಬ ಮನಸ್ಥಿತಿಯಿಂದ ಕೆಲವು ಪ್ರಯಾಣಿಕರು ರೈಲು ಚಲಿಸುತ್ತಿರುವಾಗಲೇ ಹತ್ತುತ್ತಾರೆ. ಇದರಿಂದ ಅಲ್ಲೊಂದು ಇಲ್ಲೊಂದು ಅವಗಢಗಳು ಸಂಬವಿಸುತ್ತಿರುತ್ತವೆ. ಇದಕ್ಕೆ ಸಂಬಂಧಿಸಿದ ಅನೇಕ ವಿಡಿಯೋಗಳು ಈ ಹಿಂದೆ ವೈರಲ್ ಆಗಿದ್ದವು. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ಚಲಿಸುತ್ತಿರುವ ರೈಲಿ ಹಿಂಬದಿ ಬೋಗಿ ಹತ್ತಲು ಮುಂದಾದ ವ್ಯಕ್ತಿಯೊಬ್ಬರು ಕಾಲು ಜಾರಿ ಬಿದ್ದಾಗ ಪೊಲೀಸ್ ಸಿಬ್ಬಂದಿ ರಕ್ಷಣೆ ಮಾಡುವುದನ್ನು ವೈರಲ್ ವಿಡಿಯೋ ತೋರಿಸುತ್ತದೆ.

ಪೂರ್ಣಗಿರಿ ಜನಶತಾಬ್ದಿ ರೈಲು ನಿಲ್ದಾಣದಿಂದ ಹೊರಟಿದೆ. ಈ ವೇಳೆ ರೈಲು ಹತ್ತಲು ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ. ಇನ್ನೇನು ಕೊನೆಯ ಬೋಗಿಯೂ ತಪ್ಪಿಬಿಡುತ್ತದೆ ಎಂದು ಅವಸರವಾಗಿ ಹತ್ತಿದ್ದಾರೆ. ಈ ವೇಳೆ ಕಾಲು ಜಾರಿ ಫ್ಲಾಟ್​ಫಾರ್ಮ್​ಗೆ ಬಿದಿದ್ದು, ರೈಲು ಅವರನ್ನು ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಸಹಾಯಕ ಸಬ್​ಇನ್ಸ್ಪೆಕ್ಟರ್, ಕೂಡಲೇ ಅವರನ್ನು ಎಳೆದು ರಕ್ಷಣೆ ಮಾಡಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.

ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಯ ಪಾಲಿಗೆ ಆಪದ್ಬಾಂಧವನಾಗಿ ಪೊಲೀಸ್ ಸಿಬ್ಬಂದಿ ರಾಜೇಂದ್ರ ಸಿಂಗ್ ಅವರು ಬಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಶ್ಲಾಘಿಸಿದ ಆರ್​ಪಿಎಫ್, ಎಎಸ್​ಐ ರಾಜೇಂದ್ರ ಸಿಂಗ್ ಅವರು ದುರಂತವೊಂದನ್ನು ತಪ್ಪಿಸಿದರು, ಗಾಜಿಯಾಬಾದ್ ರೈಲ್ವೇ ನಿಲ್ದಾಣದಲ್ಲಿ ಚಲಿಸುವ ರೈಲಿನೊಂದಿಗೆ ಹತ್ತುತ್ತಿರುವಾಗ ಜಾರಿಬಿದ್ದ ಪ್ರಯಾಣಿಕನಿಗೆ ಹೊಸ ಜೀವನ ನೀಡಿದರು ಎಂದು ಹೇಳಿದ್ದಾರೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 3:47 pm, Mon, 12 September 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ