AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆ ನೋವಾಗಿದ್ದ ನೌಕರಿ ಬಿಟ್ಟ ಬಳಿಕ ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿ ಹೊರಟ ಸಿಬ್ಬಂದಿ

ಗೌರವವಿಲ್ಲದ ಕಡೆ ಕೆಲಸ ಮಾಡಬಾರದು ಎಂದು ವ್ಯಕ್ತಿಯೊಬ್ಬ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ನೌಕರಿ ತೊರೆದು, ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡುತ್ತಾ ಮನೆಗೆ ತೆರಳಿರುವ ವಿಚಿತ್ರ ಘಟನೆ ನಡೆದಿದೆ.

ತಲೆ ನೋವಾಗಿದ್ದ ನೌಕರಿ ಬಿಟ್ಟ ಬಳಿಕ ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿ ಹೊರಟ ಸಿಬ್ಬಂದಿ
ವೈರಲ್ ಸುದ್ದಿ
ನಯನಾ ರಾಜೀವ್
|

Updated on:Apr 26, 2024 | 12:37 PM

Share

ಹಲವು ಬಾರಿ  ಕೆಲಸ ಮಾಡುವ ಸ್ಥಳದಲ್ಲಿ ಗೌರವ ಸಿಗದಿದ್ದರೂ,  ನೋವಿದ್ದರೂ, ಕೆಲಸದಲ್ಲಿ ಅತೃಪ್ತಿ ಇದ್ದರೂ, ನಿಮ್ಮ ಬಾಸ್​ ಜತೆ ನಿಮ್ಮ ಬಾಂಧವ್ಯ ಅಷ್ಟು ಸರಿ ಇಲ್ಲದಿದ್ದರೂ ಮುಂದಿನ ಭವಿಷ್ಯ ಅಥವಾ ಹಣದ ಕಾರಣದಿಂದಾಗಿ ಅಲ್ಲೇ ಉಳಿದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಯುವಕ ತನಗಿಷ್ಟವಿಲ್ಲದ ಕೆಲಸವನ್ನು ಬಿಟ್ಟ ಬಳಿಕ ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡಿ ತನಗೆ ತನೇ ಬೀಳ್ಕೊಡುಗೆ ಮಾಡಿಕೊಂಡು ಹೊರಟ ಘಟನೆ ಪುಣೆಯಲ್ಲಿ ನಡೆದಿದೆ.

ಅನಿಕೇತ್ ಎಂಬಾತ ಮೂರು ವರ್ಷಗಳಿಂದ ಈ ಕಂಪನಿಯಲ್ಲಿ ಸೇಲ್ಸ್​ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿದ್ದ. ವೇತನದಲ್ಲಿ ಹೆಚ್ಚಳವಿಲ್ಲದೆ ನಿರಾಸೆಗೊಂಡಿದ್ದ. ಕೊನೆಗೆ ಕೆಲಸ ಬಿಟ್ಟಿದ್ದ, ಕೆಲಸದ ಕೊನೆಯ ದಿನ ಸ್ನೇಹತರೊಂದಿಗೆ ಡೋಲು ಬಾರಿಸುತ್ತಾ, ಬಾಸ್​ ಎದುರು ನೃತ್ಯ ಮಾಡಿದ್ದಾರೆ., ಕೊನೆಗೆ ಬಾಸ್ ಅವರನ್ನು ಹೊರಹೋಗುವಂತೆ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

View this post on Instagram

A post shared by Anish Bhagat (@anishbhagatt)

ಮೂರು ವರ್ಷಗಳಲ್ಲಿ ಬಾಸ್​ ನಮ್ಮನ್ನು ಗೌರವಪೂರ್ವಕವಾಗಿ ನಡೆಸಿಕೊಂಡಿಲ್ಲ ಎಂದು ಅನಿಕೇತ್ ಹೇಳಿದ್ದಾರೆ. ಈ ವಿಡಿಯೋವನ್ನು ಇನ್​​ಸ್ಟಾಗ್ರಾಂನಲ್ಲಿ ಅನಿಕೇತ್​ನ ಸ್ನೇಹಿತರೊಬ್ಬರು ಹಂಚಿಕೊಂಡಿದ್ದು, ಬಹಳಷ್ಟು ಮಂದಿ ತಮ್ಮ ಕಂಪನಿಯಲ್ಲಿ ಅನಿಕೇತ್​ ಅನುಭವಿಸಿದಂತಹ ಹಲವು ಸಮಸ್ಯೆಗಳನ್ನು ಅನುಭವಿಸಿರುತ್ತಾರೆ.

ಮತ್ತಷ್ಟು ಓದಿ: ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ!

ಆದರೆ ಆ ಸಮಸ್ಯೆಗಳನ್ನು ದೂರ ಮಾಡಿ, ಖುಷಿಯಾಗಿರುವುದು ಹೇಗೆ ಎಂಬುದನ್ನು ಅನಿಕೇತ್ ತೋರಿಸಿಕೊಟ್ಟಿದ್ದಾರೆ ಎಂದು ಅವರು ಬರೆದಿದ್ದಾರೆ. ಇದಕ್ಕೆ ಇನ್​ಸ್ಟಾಗ್ರಾಂ ಬಳಕೆದಾರರೊಬ್ಬರು ಕಮೆಂಟ್​ ಮಾಡಿದ್ದು, ಅವರ ನೃತ್ಯ ನನಗೆ ತೃಪ್ತಿ ತಂದಿದೆ. ಜೀವನದಲ್ಲಿ ನಕಾರಾತ್ಮಕತೆಗಿಂತ ಧನಾತ್ಮಕತೆಗೆ ಹೆಚ್ಚು ಪ್ರೋತ್ಸಾಹಿಸಬೇಕು ಎಂದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:36 pm, Fri, 26 April 24

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ