AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆ ನೋವಾಗಿದ್ದ ನೌಕರಿ ಬಿಟ್ಟ ಬಳಿಕ ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿ ಹೊರಟ ಸಿಬ್ಬಂದಿ

ಗೌರವವಿಲ್ಲದ ಕಡೆ ಕೆಲಸ ಮಾಡಬಾರದು ಎಂದು ವ್ಯಕ್ತಿಯೊಬ್ಬ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ ನೌಕರಿ ತೊರೆದು, ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡುತ್ತಾ ಮನೆಗೆ ತೆರಳಿರುವ ವಿಚಿತ್ರ ಘಟನೆ ನಡೆದಿದೆ.

ತಲೆ ನೋವಾಗಿದ್ದ ನೌಕರಿ ಬಿಟ್ಟ ಬಳಿಕ ಡೋಲು ಬಡಿಯುತ್ತಾ, ಬಾಸ್​ ಎದುರು ಡ್ಯಾನ್ಸ್​ ಮಾಡಿ ಹೊರಟ ಸಿಬ್ಬಂದಿ
ವೈರಲ್ ಸುದ್ದಿ
ನಯನಾ ರಾಜೀವ್
|

Updated on:Apr 26, 2024 | 12:37 PM

Share

ಹಲವು ಬಾರಿ  ಕೆಲಸ ಮಾಡುವ ಸ್ಥಳದಲ್ಲಿ ಗೌರವ ಸಿಗದಿದ್ದರೂ,  ನೋವಿದ್ದರೂ, ಕೆಲಸದಲ್ಲಿ ಅತೃಪ್ತಿ ಇದ್ದರೂ, ನಿಮ್ಮ ಬಾಸ್​ ಜತೆ ನಿಮ್ಮ ಬಾಂಧವ್ಯ ಅಷ್ಟು ಸರಿ ಇಲ್ಲದಿದ್ದರೂ ಮುಂದಿನ ಭವಿಷ್ಯ ಅಥವಾ ಹಣದ ಕಾರಣದಿಂದಾಗಿ ಅಲ್ಲೇ ಉಳಿದುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಯುವಕ ತನಗಿಷ್ಟವಿಲ್ಲದ ಕೆಲಸವನ್ನು ಬಿಟ್ಟ ಬಳಿಕ ಡೋಲು ಬಡಿಯುತ್ತಾ ಬಾಸ್​ ಎದುರು ನೃತ್ಯ ಮಾಡಿ ತನಗೆ ತನೇ ಬೀಳ್ಕೊಡುಗೆ ಮಾಡಿಕೊಂಡು ಹೊರಟ ಘಟನೆ ಪುಣೆಯಲ್ಲಿ ನಡೆದಿದೆ.

ಅನಿಕೇತ್ ಎಂಬಾತ ಮೂರು ವರ್ಷಗಳಿಂದ ಈ ಕಂಪನಿಯಲ್ಲಿ ಸೇಲ್ಸ್​ ಅಸೋಸಿಯೇಟ್​ ಆಗಿ ಕೆಲಸ ಮಾಡುತ್ತಿದ್ದ. ವೇತನದಲ್ಲಿ ಹೆಚ್ಚಳವಿಲ್ಲದೆ ನಿರಾಸೆಗೊಂಡಿದ್ದ. ಕೊನೆಗೆ ಕೆಲಸ ಬಿಟ್ಟಿದ್ದ, ಕೆಲಸದ ಕೊನೆಯ ದಿನ ಸ್ನೇಹತರೊಂದಿಗೆ ಡೋಲು ಬಾರಿಸುತ್ತಾ, ಬಾಸ್​ ಎದುರು ನೃತ್ಯ ಮಾಡಿದ್ದಾರೆ., ಕೊನೆಗೆ ಬಾಸ್ ಅವರನ್ನು ಹೊರಹೋಗುವಂತೆ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು.

View this post on Instagram

A post shared by Anish Bhagat (@anishbhagatt)

ಮೂರು ವರ್ಷಗಳಲ್ಲಿ ಬಾಸ್​ ನಮ್ಮನ್ನು ಗೌರವಪೂರ್ವಕವಾಗಿ ನಡೆಸಿಕೊಂಡಿಲ್ಲ ಎಂದು ಅನಿಕೇತ್ ಹೇಳಿದ್ದಾರೆ. ಈ ವಿಡಿಯೋವನ್ನು ಇನ್​​ಸ್ಟಾಗ್ರಾಂನಲ್ಲಿ ಅನಿಕೇತ್​ನ ಸ್ನೇಹಿತರೊಬ್ಬರು ಹಂಚಿಕೊಂಡಿದ್ದು, ಬಹಳಷ್ಟು ಮಂದಿ ತಮ್ಮ ಕಂಪನಿಯಲ್ಲಿ ಅನಿಕೇತ್​ ಅನುಭವಿಸಿದಂತಹ ಹಲವು ಸಮಸ್ಯೆಗಳನ್ನು ಅನುಭವಿಸಿರುತ್ತಾರೆ.

ಮತ್ತಷ್ಟು ಓದಿ: ಕೈಗಳಿಲ್ಲದಿದ್ದರೂ, ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್​​ ಲೈಸೆನ್ಸ್​​​ ಪಡೆದ ಏಷ್ಯಾದ ಮೊದಲ ಮಹಿಳೆ!

ಆದರೆ ಆ ಸಮಸ್ಯೆಗಳನ್ನು ದೂರ ಮಾಡಿ, ಖುಷಿಯಾಗಿರುವುದು ಹೇಗೆ ಎಂಬುದನ್ನು ಅನಿಕೇತ್ ತೋರಿಸಿಕೊಟ್ಟಿದ್ದಾರೆ ಎಂದು ಅವರು ಬರೆದಿದ್ದಾರೆ. ಇದಕ್ಕೆ ಇನ್​ಸ್ಟಾಗ್ರಾಂ ಬಳಕೆದಾರರೊಬ್ಬರು ಕಮೆಂಟ್​ ಮಾಡಿದ್ದು, ಅವರ ನೃತ್ಯ ನನಗೆ ತೃಪ್ತಿ ತಂದಿದೆ. ಜೀವನದಲ್ಲಿ ನಕಾರಾತ್ಮಕತೆಗಿಂತ ಧನಾತ್ಮಕತೆಗೆ ಹೆಚ್ಚು ಪ್ರೋತ್ಸಾಹಿಸಬೇಕು ಎಂದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:36 pm, Fri, 26 April 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ