AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಂಗ್ರಾ ನೃತ್ಯಕ್ಕೆ ಸಖತ್ತಾಗಿ ಹೆಜ್ಜೆ ಹಾಕಿದ ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್; ವಿಡಿಯೋ ವೈರಲ್

Charanjit Singh Channi Dance | ಸಿಎಂ ಚರಣ್​ಜಿತ್ ಸಿಂಗ್ ವಿದ್ಯಾರ್ಥಿಗಳು ಬಾಂಗ್ರಾ ನೃತ್ಯ ಮಾಡುತ್ತಿದ್ದಾಗ ತಾವೂ ಎದ್ದು ವೇದಿಕೆ ಹತ್ತಿದರು. ಆ ವಿದ್ಯಾರ್ಥಿಗಳೊಂದಿಗೆ ಸೇರಿ ಪಂಜಾಬ್​ನ ಸಾಂಪ್ರದಾಯಿಕ ನೃತ್ಯವಾದ ಬಾಂಗ್ರಾಗೆ ಸಖತ್ತಾಗೇ ಹೆಜ್ಜೆ ಹಾಕಿದರು.

Viral Video: ಬಾಂಗ್ರಾ ನೃತ್ಯಕ್ಕೆ ಸಖತ್ತಾಗಿ ಹೆಜ್ಜೆ ಹಾಕಿದ ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್; ವಿಡಿಯೋ ವೈರಲ್
ಪಂಜಾಬ್ ಸಿಎಂ ಚರಣ್​ಜಿತ್ ಸಿಂಗ್ ಛನ್ನಿ ಡ್ಯಾನ್ಸ್
TV9 Web
| Edited By: |

Updated on: Sep 24, 2021 | 5:07 PM

Share

ಪಂಜಾಬ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಚರಣ್​ಜಿತ್ ಸಿಂಗ್ ಛನ್ನಿ (Charanjit Singh Channi) ವೇದಿಕೆಯಲ್ಲಿ ಬಾಂಗ್ರಾ (Bhangra) ನೃತ್ಯಕ್ಕೆ ಭರ್ಜರಿಯಾಗಿ ಹೆಜ್ಜೆ ಹಾಕುವ ಮೂಲಕ ಸುದ್ದಿಯಲ್ಲಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಪಂಜಾಬ್​ನಲ್ಲಿ ಮೊದಲ ಬಾರಿಗೆ ದಲಿತ ನಾಯಕ ಚರಣ್​ಜಿತ್ ಸಿಂಗ್ ಛನ್ನಿ ಸಿಎಂ ಪಟ್ಟಕ್ಕೆ ಏರಿದ್ದರು.

ಕಪುರ್ತಲದಲ್ಲಿ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಿಎಂ ಚರಣ್​ಜಿತ್ ಸಿಂಗ್ ಅಲ್ಲಿ ವಿದ್ಯಾರ್ಥಿಗಳು ಬಾಂಗ್ರಾ ನೃತ್ಯ ಮಾಡುತ್ತಿದ್ದಾಗ ತಾವೂ ಎದ್ದು ವೇದಿಕೆ ಹತ್ತಿದರು. ಆ ವಿದ್ಯಾರ್ಥಿಗಳೊಂದಿಗೆ ಸೇರಿ ಪಂಜಾಬ್​ನ ಸಾಂಪ್ರದಾಯಿಕ ನೃತ್ಯವಾದ ಬಾಂಗ್ರಾಗೆ ಸಖತ್ತಾಗೇ ಹೆಜ್ಜೆ ಹಾಕಿದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹಳದಿ ಬಣ್ಣದ ಟರ್ಬಾನ್ ಹಾಕಿಕೊಂಡಿರುವ ಸಿಎಂ ಛನ್ನಿ ಡ್ಯಾನ್ಸ್​ನ ವಿಡಿಯೋ ನೀವಿನ್ನೂ ನೋಡದಿದ್ದರೆ ನೋಡಿ ಬಿಡಿ.

ಕಳೆದ ಸೋಮವಾರವಷ್ಟೆ ಚರಣ್​ಜಿತ್ ಸಿಂಗ್ ಪಂಜಾಬ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದರು. ನವಜೀತ್ ಸಿಂಗ್ ಸಿಧು ಮತ್ತಿತರ ನಾಯಕರು ಆಯ್ಕೆ ಮಾಡಿರುವವರು ಚರಣ್​ಜಿತ್ ಸಿಂಗ್ ಪಂಜಾಬ್​ನ ಉತ್ತರಾಧಿಕಾರಿಯಾಗಿ ಅಧಿಕಾರಕ್ಕೆ ಏರಿದ್ದಾರೆ. ನವಜೋತ್ ಸಿಂಗ್ ಸಿಧು ಜೊತೆಗಿನ ಭಿನ್ನಾಭಿಪ್ರಾಯದಿಂದ ಹಾಗೂ ಪಂಜಾಬ್​ನ ಕಾಂಗ್ರೆಸ್ ನಾಯಕರ ಅಸಮಾಧಾನದಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಅದಾದ ಬಳಿಕ ಚರಣ್​ಜಿತ್ ಸಿಂಗ್ ಪಂಜಾಬ್ ಮುಖ್ಯಮಂತ್ರಿಯಾಗಿದ್ದರು.

48 ವರ್ಷದ ಚರಣ್​ಜಿತ್ ಸಿಂಗ್ ಛನ್ನಿ ಚಾಮ್​ಕೌರ್ ಸಾಹಿಬ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ. 3 ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಇವರು ಪಂಜಾಬ್​ ಕಾಂಗ್ರೆಸ್ ಸರ್ಕಾರದಲ್ಲಿ ತಾಂತ್ರಿಕ ಶಿಕ್ಷಣ ಮತ್ತು ಕೈಗಾರಿಕಾ ತರಬೇತಿ ಸಚಿವರಾಗಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ಧ್ವನಿ ಎತ್ತಿದ್ದ ಪಂಜಾಬ್ ಕಾಂಗ್ರೆಸ್ ನಾಯಕರಲ್ಲಿ ಚರಣ್​ಜಿತ್ ಸಿಂಗ್ ಛನ್ನಿ ಕೂಡ ಒಬ್ಬರಾಗಿದ್ದರು. ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಜಿಂದರ್ ರಾಂಧವ ಅವರ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ  ದಲಿತ ನಾಯಕ ಚರಣ್​ಜಿತ್​ ಸಿಂಗ್​ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲಾಗಿತ್ತು.

ಇದನ್ನೂ ಓದಿ: Charanjit Singh Channi ನಾನೊಬ್ಬ ಸಾಮಾನ್ಯ ಮನುಷ್ಯ, ರೈತರ ಹೋರಾಟಕ್ಕೆ ಸರ್ಕಾರದ ಬೆಂಬಲವಿದೆ: ಪಂಜಾಬ್ ಸಿಎಂ ಚರಣ್​​ಜಿತ್ ಸಿಂಗ್ ಛನ್ನಿ

Charanjit Singh Channi ಪಂಜಾಬ್‌ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಛನ್ನಿ ಪ್ರಮಾಣ ವಚನ ಸ್ವೀಕಾರ

(Viral Video Punjab Chief Minister Charanjit Singh Channi Performs Bhangra Dance with Students Watch Video)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ