AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IKEA ಸ್ಟೋರ್​ನಲ್ಲಿ ಸರತಿ ಸಾಲುಗಳು: ಜನಸಂದಣಿಯ ತಮಾಷೆಯ ವಿಡಿಯೋಗಳು ಇಲ್ಲಿವೆ ನೋಡಿ

IKEA ಸ್ಟೋರ್​ನಲ್ಲಿ ಸರತಿ ಸಾಲುಗಳನ್ನು ದಾಖಲಿಸುವ ವಿಡಿಯೋಗಳು ಮತ್ತು ಛಾಯಾಚಿತ್ರಗಳು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಹರಿದಾಡುತ್ತಿವೆ. ಜನಸಂದಣಿಯನ್ನು ತಮಾಷೆ ಮಾಡುವ ಮೀಮ್​ಗಳು ಇಲ್ಲಿವೆ ನೋಡಿ.

IKEA ಸ್ಟೋರ್​ನಲ್ಲಿ ಸರತಿ ಸಾಲುಗಳು: ಜನಸಂದಣಿಯ ತಮಾಷೆಯ ವಿಡಿಯೋಗಳು ಇಲ್ಲಿವೆ ನೋಡಿ
ವೈರಲ್ ಫೋಟೋ
Follow us
TV9 Web
| Updated By: Rakesh Nayak Manchi

Updated on:Jun 28, 2022 | 10:33 AM

ವೈರಲ್ ವಿಡಿಯೋ: ಬೆಂಗಳೂರಿನ ನಾಗಸಂದ್ರ ಪ್ರದೇಶದಲ್ಲಿ ಸ್ವೀಡಿಷ್ ಗೃಹೋಪಯೋಗಿ ಬ್ರಾಂಡ್ ಐಕೆಇಎ (IKEA) ತನ್ನ ಮೊದಲ ಮಳಿಗೆಯನ್ನು ತೆರೆದಾಗಿನಿಂದ ಭಾರಿ ಬೇಡಿಕೆ ವ್ಯಕ್ತವಾಗಿದ್ದು, ಜನಸಾಗರವೇ ಹರಿದುಬರುತ್ತಿದೆ. ಇದರ ಪರಿಣಾಮವಾಗಿ ಉದ್ದವಾದ ಅಂಕುಡೊಂಕಾದ ಸರತಿ ಸಾಲುಗಳು ಕಂಡುಬರುತ್ತವೆ. ನಿವಾಸಿಗಳು ಹೊಸದಾಗಿ ತೆರೆದ ಅಂಗಡಿಯಲ್ಲಿ ಶಾಪಿಂಗ್ ಮಾಡಲು ಆಗಮಿಸಿದ್ದರಿಂದ ವಾರಾಂತ್ಯದಲ್ಲಿ ಜನಸಂದಣಿ ಹೆಚ್ಚಾಯಿತು. ಸದ್ಯ ಅಂಗಡಿಯ ಮುಂದೆ ನಿಂತ ಸರತಿಯ ಸಾಲುಗಳು ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ (Viral) ಆಗುತ್ತಿದೆ.

ವೀಕೆಂಡ್ ಆಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ ಪರಿಣಾಮ ಜನರು 3 ಗಂಟೆಗಳಿಗೂ ಹೆಚ್ಚು ಕಾದು ಶಾಪಿಂಗ್ ಮಾಡುವಂತಾಯಿತು. ಈ ಬಗ್ಗೆ IKEA ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, “ನಾಗಸಂದ್ರದ ಅಂಗಡಿಯಲ್ಲಿ ಪ್ರಸ್ತುತ ಕಾಯುವ ಸಮಯ 3 ಗಂಟೆಗಳು ಆಗಿವೆ. ದಯವಿಟ್ಟು ಅದಕ್ಕೆ ಅನುಗುಣವಾಗಿ ಯೋಜಿಸಿ ಅಥವಾ ಆನ್‌ಲೈನ್‌ನಲ್ಲಿ ಶಾಪಿಂಗ್ ಮಾಡಿ” ಎಂದು ಹೇಳಿದೆ.

ಇದನ್ನೂ ಓದಿ: Viral Video: ಬಾಯಲ್ಲಿ ನೀರು ಬರಿಸುವ ಐಸ್ ಕ್ರೀಮ್ ಸ್ಯಾಂಡ್ವಿಚ್! ಇಲ್ಲಿದೆ ನೋಡಿ ವಿಡಿಯೋ

ಟ್ರೋಲ್ ಆದ ಸರತಿ ಸಾಲುಗಳು

IKEAನಲ್ಲಿ ದೀರ್ಘ ಸರತಿ ಸಾಲುಗಳನ್ನು ದಾಖಲಿಸುವ ವಿಡಿಯೋಗಳು ಮತ್ತು ಛಾಯಾಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಜನಸಂದಣಿಯನ್ನು ತಮಾಷೆ ಮಾಡುವ ಮೀಮ್‌(Memes)ಗಳು ಸಹ ಸಾಕಷ್ಟು ವೈರಲ್ ಆಗುತ್ತಿದೆ.

RPG ಎಂಟರ್‌ಪ್ರೈಸಸ್‌ನ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಕ್ಲಿಪ್ ಅನ್ನು ಹಂಚಿಕೊಂಡು, “ಇದು ಸರ್ಕಾರ ರಚಿಸಲು ಮಹಾರಾಷ್ಟ್ರದಲ್ಲಿ ಶಾಸಕರು ಸರತಿ ಸಾಲಿನಲ್ಲಿ ನಿಂತಿಲ್ಲ, ಇದು ನಮ್ಮ ದೇಶಕ್ಕೆ ಪ್ರವೇಶಿಸಲು ವಲಸೆ ಸರತಿಯಲ್ಲ, ಇದು ಕೋವಿಡ್ ಅಲೆಯನ್ನು ತಪ್ಪಿಸಲು ವ್ಯಾಕ್ಸಿನೇಷನ್ ಸರತಿಯಲ್ಲ, ಇದು ದರ್ಶನಕ್ಕಾಗಿ ತಿರುಪತಿಯಲ್ಲಿ ಯಾತ್ರಿಕರು ಸರತಿ ಸಾಲಿನಲ್ಲಿ ನಿಂತಿಲ್ಲ, ಬೆಂಗಳೂರಿನಲ್ಲಿ IKEA ಸ್ಟೋರ್‌ನ ಉದ್ಘಾಟನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: Viral News: 30 ಸಾವಿರ ವರ್ಷ ಹಳೆಯ ಚರ್ಮ ಮತ್ತು ಕೂದಲಿರುವ ಅಪರೂಪದ ಉಣ್ಣೆಯ ಬೃಹದ್ಗಜ ಪತ್ತೆ

Published On - 7:07 am, Tue, 28 June 22

ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ