AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​

ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ಕೆಲಸಗಾರರು ರಕ್ಷಿಸಿದ್ದಾರೆ. ಶಾಕಿಂಗ್​ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Video: ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರರು; ಶಾಕಿಂಗ್ ವಿಡಿಯೊ ವೈರಲ್​
ಚಲಿಸುತ್ತಿರುವ ರೈಲಿಗೆ ಸಿಕ್ಕಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕನನ್ನು ರಕ್ಷಿಸಿದ ಕೆಲಸಗಾರ
Follow us
TV9 Web
| Updated By: shruti hegde

Updated on:Nov 16, 2021 | 12:24 PM

ಚಲಿಸುತ್ತಿರುವ ರೈಲು ಹತ್ತಲು ಹೋಗಿ ಅದೆಷ್ಟೋ ಅವಘಡಗಳು ಸಂಭವಿಸಿರುವುದನ್ನು ನಾವು ಈ ಹಿಂದೆ ಕೇಳಿದ್ದೆವೆ. ಕೆಲವು ದೃಶ್ಯಗಳನ್ನು ನೋಡಿದಾಕ್ಷಣ ಒಮ್ಮೆಲೆ ಮೈ ಜುಂ ಅನ್ನುವುದಂತೂ ಸತ್ಯ. ಅಷ್ಟು ಭಯಾನಕವಾಗಿರುತ್ತವೆ ಕೆಲವು ದೃಶ್ಯಗಳು. ಇದೀಗ ವೈರಲ್​ ಆಗಿರುವ ವಿಡಿಯೊ ಕೂಡಾ ಅಂಥದ್ದೇ! ಚಲಿಸುತ್ತಿದ್ದ ರೈಲು (Train) ಹತ್ತಲು ಹೋಗಿ ಪ್ರಯಾಣಿಕನು ಜಾರಿ ಬಿದ್ದಿದ್ದಾನೆ. ರೈಲು ಮತ್ತು ಪ್ಲಾಟ್​ಫಾರ್ಮ್​ ನಡುವೆ ಸಿಲುಕಿಕೊಂಡಿದ್ದ ಪ್ರಯಾಣಿಕನನ್ನು (Passenger) ಕೆಲಸಗಾರರು ರಕ್ಷಿಸಿದ್ದಾರೆ. ನವೆಂಬರ್ 14ರಂದು ಕಲ್ಯಾಣ್​ ರೈಲ್ವೆ ನಿಲ್ದಾಣದಲ್ಲಿ (Railway station) ನಡೆದ ಈ ಘಟನೆ ಸಿಸಿಟಿಯಲ್ಲಿ (CCTV) ಸೆರೆಯಾಗಿದ್ದು, ವಿಡಿಯೊ ವೈರಲ್ (Viral Video) ಆಗಿದೆ.

ಈ ಘಟನೆಯ ದೃಶ್ಯವನ್ನು ಸೆಂಟ್ರಲ್ ರೈಲ್ವೆ ಟ್ವಿಟರ್​ನಲ್ಲಿ ಹಂಚಿಕೊಂಡಿದೆ. ಆಗಿನಿಂದ ವಿಡಿಯೊ ಫುಲ್ ವೈರಲ್ ಆಗಿದೆ. ಪ್ರಯಾಣಿಕನ ಜೀವ ಉಳಿಸಿದ್ದಕ್ಕಾಗಿ ನೆಟ್ಟಿಗರು ಕೆಲಸಗಾರನನ್ನು ಶ್ಲಾಘಿಸಿದ್ದಾರೆ. ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇಂತಹ ಘಟನೆಯ ಬಗ್ಗೆ ಹಲವರು ಕಳವಳ ವ್ಯಕ್ತಿಪಡಿಸಿದ್ದಾರೆ.

ಅವರಸರವೇ ಅಪಘಾತಕ್ಕೆ ಕಾರಣ ಎಚ್ಚರಿಕೆಯಿಂದಿರಿ ಎಂದು ಹೇಳಿದ್ದಾರೆ. ರೈಲು ಹತ್ತುವಾಗ ಮತ್ತು ಇಳಿಯುವ ಸಂದರ್ಭದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಓರ್ವರು ಹೇಳಿದ್ದಾರೆ. ಕೆಲವು ಬಾರಿ ಅವಸರದಲ್ಲಿ ನಾವು ಅಪಾಯವನ್ನು ಎದುರಿಸಬೇಕಾಗುತ್ತದೆ. ಹಾಗಾಗಿ ಪ್ರತಿ ವಿಚಾರದಲ್ಲಿಯೂ ಸಹ ಎಚ್ಚರಿಕೆಯಿಂದ ಇರುವುದರ ಜೊತೆಗೆ ಜಾಗರೂಕರಾಗಿರುವುದು ಒಳ್ಳೆಯದು.

ಇದನ್ನೂ ಓದಿ:

Viral Video: ಹನುಮಂತನ ಪಾದಕ್ಕೆ ನಮಸ್ಕರಿಸಿ ದೇವಸ್ಥಾನದ ಹುಂಡಿಯ ಹಣವನ್ನೇ ಕದ್ದೊಯ್ದ ಕಳ್ಳ! ವಿಡಿಯೊ ವೈರಲ್​

Viral Video: ಆಕಾಶದಿಂದ ಕೆಳಗೆ ಬಿದ್ದ ಹಾವನ್ನು ನೋಡಿ ಜನ ಕಂಗಾಲು; ವೈರಲ್ ವಿಡಿಯೋ ಇಲ್ಲಿದೆ

Published On - 12:22 pm, Tue, 16 November 21

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ