AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: IND vs ENG ಪಂದ್ಯಕ್ಕೆ ಮಳೆಯಡ್ಡಿ, ಛತ್ರಿ, ಬಾಲ್ ಹಿಡಿದು ಕ್ರಿಕೆಟ್ ಆಡಿದ ಅಭಿಮಾನಿಗಳು

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ ಬಂದಾಗ ಅಭಿಮಾನಿಗಳು ಮೈದಾನದ ಪಕ್ಕದ ಪ್ರದೇಶದಲ್ಲಿ ಕ್ರಿಕೆಟ್ ಆಡಿದ ಹಾಗೂ ಬೌಲಿಂಗ್ ಮಾಡುತ್ತಿದ್ದ ವ್ಯಕ್ತಿ ಹರ್ಭಜನ್ ಸಿಂಗ್ ಹಾಗೂ ಶಿಖರ್ ಧವನ್ ರೀತಿಯಲ್ಲಿ ಸಂಭ್ರಮಿಸಿದ ವಿಡಿಯೋ ವೈರಲ್ ಆಗುತ್ತಿದೆ.

Viral Video: IND vs ENG ಪಂದ್ಯಕ್ಕೆ ಮಳೆಯಡ್ಡಿ, ಛತ್ರಿ, ಬಾಲ್ ಹಿಡಿದು ಕ್ರಿಕೆಟ್ ಆಡಿದ ಅಭಿಮಾನಿಗಳು
ಕ್ರಿಕೆಟ್ ಆಡಿದ ಅಭಿಮಾನಿಗಳು
TV9 Web
| Edited By: Rakesh Nayak Manchi|

Updated on:Jul 02, 2022 | 2:56 PM

Share
ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ (India and Englan) ತಂಡಗಳ ನಡುವಿನ ಐದನೇ ಟೆಸ್ಟ್ ಪಂದ್ಯ (Test Match) ಶುಕ್ರವಾರದಿಂದ ಎಡ್ಜ್‌ಬಾಸ್ಟನ್‌ನಲ್ಲಿ ಆರಂಭಗೊಂಡಿದೆ. ಮೊದಲ ದಿನದಾಟದ ವೇಳೆ ಮಳೆಯಿಂದಾಗಿ ಪಂದ್ಯವು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಆಟಗಾರರು ಡ್ರೆಸ್ಸಿಂಗ್ ರೂಮ್​ ಒಳಗೆ ಸೇರಿಕೊಂಡರು. ಕ್ರಿಕೆಟ್ ಪ್ರೇಮಿಗಳು ಮಳೆಯಿಂದ ನಿರಾಶೆಗೊಂಡರು. ಅದಾಗ್ಯೂ ಮೂರ್ನಾಲ್ಕು ಮಂದಿ ಮೈದಾನದ ಹೊರಭಾಗದಲ್ಲಿ ಕ್ರಿಕೆಟ್ ಆಡಿ ಗಮನಸೆಳೆದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.
ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ ಟ್ವಿಟರ್ ಖಾತೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕ್ರಿಕೆಟ್ ಆಡಿದ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ, ಸಣ್ಣ ಬಾಲಕನೊಬ್ಬ ಛತ್ರಿಯನ್ನೇ ಬ್ಯಾಟ್ ಮಾಡಿಕೊಂಡು ಬ್ಯಾಟಿಂಗ್​ಗೆ ನಿಂತುಕೊಂಡಿದ್ದಾನೆ. ವ್ಯಕ್ತಿಯೊಬ್ಬರು ಮಾಡಿದ ಬೌಲ್​ಗೆ ಬಾಲಕ ಕ್ಯಾಚ್ ನೀಡಿದ್ದಾನೆ. ಈ ವೇಳೆ ಗಮನಿಸಬೇಕಾದ ಅಂಶವೆಂದರೆ ಬೌಲಿಂಗ್ ಮಾಡಿದ ವ್ಯಕ್ತಿ ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರಂತೆಯೇ ಬೌಲಿಂಗ್ ಮಾಡಿದ್ದಾರೆ ಮತ್ತು ಬಾಲಕ ಕ್ಯಾಚ್ ನೀಡಿದಾಗ ಆ ವ್ಯಕ್ತಿ ಭಾರತೀಯ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಮಾಡುವ ಕಬಡ್ಡಿ ಶೈಲಿಯ ಆಚರಣೆಯಂತೆ ತೊಡೆತಟ್ಟಿ ಸಂಭ್ರಮಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದೇ ವೇಳೆ ಉಳಿದ ಜನರು ಹುರಿದುಂಬಿಸುತ್ತಾರೆ.

ಕೊನೆಯ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ, 73 ಓವರ್​ಗಳಲ್ಲಿ 7 ವಿಕೆಟ್​ಗಳನ್ನು ಕಳೆದುಕೊಂಡು 338ರನ್ ಬಾರಿಸಿ ಆಟ ಮುಂದುವರಿಸಿದೆ. ಸದ್ಯ ರವೀಂದ್ರ ಜಡೇಜಾ (83*) ಮತ್ತು ಮೊಹಮ್ಮದ್ ಶಮಿ ಕ್ರೀಸ್​ನಲ್ಲಿದ್ದಾರೆ. ಭಾರತದ ಪರ ರಿಷಬ್ ಪಂತ್ ಅವರು 111 ಬಾಲ್​ಗಳಲ್ಲಿ 146 ರನ್​ಗಳ ಭರ್ಜರಿ ರನ್ ಕಲೆಹಾಕಿದರು.

Published On - 2:02 pm, Sat, 2 July 22

Follow Us
TV9 Web
TV9 Web

TV9 Kannada

Read More
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ