AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: IND vs ENG ಪಂದ್ಯಕ್ಕೆ ಮಳೆಯಡ್ಡಿ, ಛತ್ರಿ, ಬಾಲ್ ಹಿಡಿದು ಕ್ರಿಕೆಟ್ ಆಡಿದ ಅಭಿಮಾನಿಗಳು

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ ಬಂದಾಗ ಅಭಿಮಾನಿಗಳು ಮೈದಾನದ ಪಕ್ಕದ ಪ್ರದೇಶದಲ್ಲಿ ಕ್ರಿಕೆಟ್ ಆಡಿದ ಹಾಗೂ ಬೌಲಿಂಗ್ ಮಾಡುತ್ತಿದ್ದ ವ್ಯಕ್ತಿ ಹರ್ಭಜನ್ ಸಿಂಗ್ ಹಾಗೂ ಶಿಖರ್ ಧವನ್ ರೀತಿಯಲ್ಲಿ ಸಂಭ್ರಮಿಸಿದ ವಿಡಿಯೋ ವೈರಲ್ ಆಗುತ್ತಿದೆ.

Viral Video: IND vs ENG ಪಂದ್ಯಕ್ಕೆ ಮಳೆಯಡ್ಡಿ, ಛತ್ರಿ, ಬಾಲ್ ಹಿಡಿದು ಕ್ರಿಕೆಟ್ ಆಡಿದ ಅಭಿಮಾನಿಗಳು
ಕ್ರಿಕೆಟ್ ಆಡಿದ ಅಭಿಮಾನಿಗಳು
TV9 Web
| Edited By: |

Updated on:Jul 02, 2022 | 2:56 PM

Share
ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ (India and Englan) ತಂಡಗಳ ನಡುವಿನ ಐದನೇ ಟೆಸ್ಟ್ ಪಂದ್ಯ (Test Match) ಶುಕ್ರವಾರದಿಂದ ಎಡ್ಜ್‌ಬಾಸ್ಟನ್‌ನಲ್ಲಿ ಆರಂಭಗೊಂಡಿದೆ. ಮೊದಲ ದಿನದಾಟದ ವೇಳೆ ಮಳೆಯಿಂದಾಗಿ ಪಂದ್ಯವು ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಆಟಗಾರರು ಡ್ರೆಸ್ಸಿಂಗ್ ರೂಮ್​ ಒಳಗೆ ಸೇರಿಕೊಂಡರು. ಕ್ರಿಕೆಟ್ ಪ್ರೇಮಿಗಳು ಮಳೆಯಿಂದ ನಿರಾಶೆಗೊಂಡರು. ಅದಾಗ್ಯೂ ಮೂರ್ನಾಲ್ಕು ಮಂದಿ ಮೈದಾನದ ಹೊರಭಾಗದಲ್ಲಿ ಕ್ರಿಕೆಟ್ ಆಡಿ ಗಮನಸೆಳೆದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.
ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ ಟ್ವಿಟರ್ ಖಾತೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕ್ರಿಕೆಟ್ ಆಡಿದ ವಿಡಿಯೋ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾಣುವಂತೆ, ಸಣ್ಣ ಬಾಲಕನೊಬ್ಬ ಛತ್ರಿಯನ್ನೇ ಬ್ಯಾಟ್ ಮಾಡಿಕೊಂಡು ಬ್ಯಾಟಿಂಗ್​ಗೆ ನಿಂತುಕೊಂಡಿದ್ದಾನೆ. ವ್ಯಕ್ತಿಯೊಬ್ಬರು ಮಾಡಿದ ಬೌಲ್​ಗೆ ಬಾಲಕ ಕ್ಯಾಚ್ ನೀಡಿದ್ದಾನೆ. ಈ ವೇಳೆ ಗಮನಿಸಬೇಕಾದ ಅಂಶವೆಂದರೆ ಬೌಲಿಂಗ್ ಮಾಡಿದ ವ್ಯಕ್ತಿ ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರಂತೆಯೇ ಬೌಲಿಂಗ್ ಮಾಡಿದ್ದಾರೆ ಮತ್ತು ಬಾಲಕ ಕ್ಯಾಚ್ ನೀಡಿದಾಗ ಆ ವ್ಯಕ್ತಿ ಭಾರತೀಯ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಮಾಡುವ ಕಬಡ್ಡಿ ಶೈಲಿಯ ಆಚರಣೆಯಂತೆ ತೊಡೆತಟ್ಟಿ ಸಂಭ್ರಮಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಇದೇ ವೇಳೆ ಉಳಿದ ಜನರು ಹುರಿದುಂಬಿಸುತ್ತಾರೆ.

ಕೊನೆಯ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ, 73 ಓವರ್​ಗಳಲ್ಲಿ 7 ವಿಕೆಟ್​ಗಳನ್ನು ಕಳೆದುಕೊಂಡು 338ರನ್ ಬಾರಿಸಿ ಆಟ ಮುಂದುವರಿಸಿದೆ. ಸದ್ಯ ರವೀಂದ್ರ ಜಡೇಜಾ (83*) ಮತ್ತು ಮೊಹಮ್ಮದ್ ಶಮಿ ಕ್ರೀಸ್​ನಲ್ಲಿದ್ದಾರೆ. ಭಾರತದ ಪರ ರಿಷಬ್ ಪಂತ್ ಅವರು 111 ಬಾಲ್​ಗಳಲ್ಲಿ 146 ರನ್​ಗಳ ಭರ್ಜರಿ ರನ್ ಕಲೆಹಾಕಿದರು.

Published On - 2:02 pm, Sat, 2 July 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್