Viral Video: ಅಸ್ಸಾಂನಲ್ಲಿ  ಪತ್ತೆಯಾಯಿತು 4 ಕಣ್ಣುಗಳಿರುವ  ಅಪರೂಪದ ಮೀನು; ವೈರಲ್‌ ವಿಡಿಯೋ

ಅಸ್ಸಾಂನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಇಂತಹ ಸ್ಥೀತಿಯಲ್ಲಿ ತುಂಬಿ ಹರಿಯುತ್ತಿದ್ದ ನೀರಿನಲ್ಲಿ ಕರೀಂಗಂಜ್‌ನ ವ್ಯಕ್ತಿಯೊಬ್ಬರು ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭದಲ್ಲಿ 4 ಕಣ್ಣುಗಳಿರುವ ಅಪರೂಪದ ಮೀನೊಂದು ಬಲೆಗೆ ಬಿದ್ದಿದೆ. ಈ ಕುರಿತ ಸುದ್ದಿಯೊಂದು ಇದೀಗ ವೈರಲ್‌ ಆಗುತ್ತಿದೆ. 

Viral Video: ಅಸ್ಸಾಂನಲ್ಲಿ  ಪತ್ತೆಯಾಯಿತು 4 ಕಣ್ಣುಗಳಿರುವ  ಅಪರೂಪದ ಮೀನು; ವೈರಲ್‌ ವಿಡಿಯೋ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 03, 2024 | 6:00 PM

ರೀಮಲ್ ಚಂಡಮಾರುತದ ಪರಿಣಾಮ ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತುಂಬಿ ಹರಿಯುತ್ತಿದ್ದ ನೀರಿನಲ್ಲಿ ಕರೀಗಂಜ್‌ ಜಿಲ್ಲೆಯ ವ್ಯಕ್ತಿಯೊಬ್ಬರು ಮೀನುಗಾರಿಕೆ ನಡೆಸುತ್ತಿದ್ದ  ಸಂದರ್ಭದಲ್ಲಿ 4 ಕಣ್ಣುಗಳು ಹಾಗೂ ಉದ್ದನೆಯ ಬೆನ್ನುಮೂಳೆಯನ್ನು ಹೊಂದಿರುವ ಅಪರೂಪದ ಮೀನೊಂದು ಬಲೆಗೆ ಬಿದ್ದಿದೆ. ಈ ಕುರಿತ ವಿಡಿಯೋವೊಂದನ್ನು  ಆಲ್‌ ಇಂಡಿಯಾ ರೇಡಿಯೋ ನ್ಯೂಸ್‌  ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

ಆಲ್‌ ಇಂಡಿಯಾ ರೇಡಿಯೋ ನ್ಯೂಸ್‌ (@airnewsalerts) ಈ ಅಪರೂಪದ ಮೀನಿನ ವಿಡಿಯೋವನ್ನು ಅಧೀಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಕರೀಂಗಂಜ್‌ ಜಿಲ್ಲೆಯಲ್ಲಿ ಪ್ರವಾಹದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಪರೂಪದ ಜಾತಿಯ ಮೀನು ಪತ್ತೆಯಾಗಿದ್ದು, ಇದು ನಾಲ್ಕು ಕಣ್ಣುಗಳು ಹಾಗೂ ಉದ್ದನೆಯ ಬೆನ್ನೆಲುಬನ್ನು ಹೊಂದಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ವಿಡಿಯೋದಲ್ಲಿ ನಾಲ್ಕು ಕಣ್ಣುಗಳು ಹಾಗೂ ಉದ್ದವಾದ ಬೆನ್ನುಮೂಳೆಯನ್ನು ಹೊಂದಿರುವ  ಕಪ್ಪು ಮತ್ತು ಬಿಳಿ ಮಿಶ್ರಿತ ಬಣ್ಣದ ಅಪರೂಪದ  ಮೀನನ್ನು ಕಾಣಬಹುದು. ಪ್ರವಾಹದ ನೀರಿನಲ್ಲಿ ಬಂದ  ಈ ಅಪರೂಪದ ಜಾತಿಯ ಮೀನನ್ನು ನೋಡಲು ಹತ್ತಾರು ಜನರು ಅಲ್ಲಿ ನೆರೆದಿದ್ದರು.

ಇದನ್ನೂ ಓದಿ: ಇಲ್ಲಿ ಮಹಿಳೆಯರು ತಮ್ಮ ಬ್ರಾಗಳನ್ನು ಬೇಲಿಯಲ್ಲಿ ನೇತು ಹಾಕುವ ವಿಶಿಷ್ಟ ಸಂಪ್ರದಾಯ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 85.5 ಮಿಲಿಯನ್‌ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇದು ಕ್ರೋಕ್‌ ಫಿಶ್‌, ಈ ಮೀನುಗಳನ್ನು ಅಕ್ವೇರಿಯಂ ಶುಚಿಗೊಳಿಸಲು ಬಳಸಲಾಗುತ್ತದೆ ಎಂದು ಒಬ್ಬ ಬಳಕೆದಾರರು ಕಾಮೆಂಟ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ