AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಒಬ್ಬರು "ಇದು ಸಾಕು ಇಲಿ ಆಗಿರಬೇಕು" ಎಂದು ಹಾಸ್ಯಸ್ಪದವಾಗಿ ಬರೆದರೆ, ಮತ್ತೊಬ್ಬರು "ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ" ಎಂದು ಕಾಮೆಂಟ್​ ಮಾಡಿದ್ದಾರೆ.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ
ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ
ಅಕ್ಷತಾ ವರ್ಕಾಡಿ
|

Updated on: Oct 05, 2024 | 4:50 PM

Share

ಬೇಕರಿಯಲ್ಲಿ ಇರಿಸಲಾದ ಬಗೆಬಗೆಯ ಸ್ವೀಟ್​​ಗಳನ್ನು ಕಂಡಾಗ ಏನೇ ಡಯಟ್​​ ಇದ್ರೂನೂ ಒಂದು ಕ್ಷಣ ಬಾಯಲ್ಲಿ ನಿರೂರುವುದಂತೂ ಖಂಡಿತಾ. ಬಾಯಲ್ಲಿ ಇಟ್ಟಾಗ ಕರಗುವ ಸ್ಟೀಟ್ ಯಾರಿಗೆ ಇಷ್ಟ ಇಲ್ಲ ಹೇಳಿ. ಆದ್ರೆ ಹೊರಗಡೆ ತಿನ್ನುವಾಗ ಒಂದು ಕ್ಷಣ ಅಲ್ಲಿನ ಸ್ವಚ್ಛತೆಯ ಬಗ್ಗೆ ಕಣ್ಣಾಡಿಸುವುದು ಅಗತ್ಯ. ಯಾಕೆಂದರೆ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್​​ ಆಗಿದ್ದು, ವಿಡಿಯೋ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ನವಭಾರತ್ ಟೈಮ್ಸ್ ಪೋಸ್ಟ್ ಮಾಡಿದ ಸುದ್ದಿ ವರದಿ ಮತ್ತು ವೀಡಿಯೋ ಪ್ರಕಾರ, ದೆಹಲಿಯ ಭಜನ್ಪುರ ಪ್ರದೇಶದ ಅಗರ್ವಾಲ್ ಸ್ವೀಟ್ಸ್ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

@GagandeepNews ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋದಲ್ಲಿ ಗಾಜಿನ ಡಿಸ್ಪ್ಲೇ ಕೇಸ್‌ಗಳಲ್ಲಿ ಇಟ್ಟಿದ್ದ ಸಿಹಿತಿಂಡಿಗಳ ಮೇಲೆ ಇಲಿ ಓಡಾಡುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್​ ಮೀಡಿಯಾ ಬಳಕೆದಾರರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. “ಇದು ಸಾಕು ಇಲಿ ಆಗಿರಬೇಕು” ಎಂದು ಹಾಸ್ಯಸ್ಪದವಾಗಿ ಒಬ್ಬರು ಬರೆದರೆ, ಮತ್ತೊಬ್ಬರು “ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು