AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಒಬ್ಬರು "ಇದು ಸಾಕು ಇಲಿ ಆಗಿರಬೇಕು" ಎಂದು ಹಾಸ್ಯಸ್ಪದವಾಗಿ ಬರೆದರೆ, ಮತ್ತೊಬ್ಬರು "ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ" ಎಂದು ಕಾಮೆಂಟ್​ ಮಾಡಿದ್ದಾರೆ.

Viral Video: ಬೇಕರಿಯ ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ, ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ
ಸ್ವೀಟ್ ಮೇಲೆ ಮಸ್ತಾಗಿ ಓಡಾಡುತ್ತಿರುವ ಇಲಿ
ಅಕ್ಷತಾ ವರ್ಕಾಡಿ
|

Updated on: Oct 05, 2024 | 4:50 PM

Share

ಬೇಕರಿಯಲ್ಲಿ ಇರಿಸಲಾದ ಬಗೆಬಗೆಯ ಸ್ವೀಟ್​​ಗಳನ್ನು ಕಂಡಾಗ ಏನೇ ಡಯಟ್​​ ಇದ್ರೂನೂ ಒಂದು ಕ್ಷಣ ಬಾಯಲ್ಲಿ ನಿರೂರುವುದಂತೂ ಖಂಡಿತಾ. ಬಾಯಲ್ಲಿ ಇಟ್ಟಾಗ ಕರಗುವ ಸ್ಟೀಟ್ ಯಾರಿಗೆ ಇಷ್ಟ ಇಲ್ಲ ಹೇಳಿ. ಆದ್ರೆ ಹೊರಗಡೆ ತಿನ್ನುವಾಗ ಒಂದು ಕ್ಷಣ ಅಲ್ಲಿನ ಸ್ವಚ್ಛತೆಯ ಬಗ್ಗೆ ಕಣ್ಣಾಡಿಸುವುದು ಅಗತ್ಯ. ಯಾಕೆಂದರೆ ಇದೀಗ ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್​​ ಆಗಿದ್ದು, ವಿಡಿಯೋ ಕಂಡು ನೆಟ್ಟಿಗರು ಶಾಕ್​ ಆಗಿದ್ದಾರೆ.

ಬೇಕರಿಯಲ್ಲಿ ಇರಿಸಲಾದ ಸ್ವೀಟ್ ಮೇಲೆ ಇಲಿಯೊಂದು ಮಸ್ತಾಗಿ ಓಡಾಡುತ್ತಿರುವ ವಿಡಿಯೋ ವೈರಲ್​​ ಆಗಿದೆ. ನವಭಾರತ್ ಟೈಮ್ಸ್ ಪೋಸ್ಟ್ ಮಾಡಿದ ಸುದ್ದಿ ವರದಿ ಮತ್ತು ವೀಡಿಯೋ ಪ್ರಕಾರ, ದೆಹಲಿಯ ಭಜನ್ಪುರ ಪ್ರದೇಶದ ಅಗರ್ವಾಲ್ ಸ್ವೀಟ್ಸ್ನಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

@GagandeepNews ಎಂಬ ಹೆಸರಿನ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ವಿಡಿಯೋದಲ್ಲಿ ಗಾಜಿನ ಡಿಸ್ಪ್ಲೇ ಕೇಸ್‌ಗಳಲ್ಲಿ ಇಟ್ಟಿದ್ದ ಸಿಹಿತಿಂಡಿಗಳ ಮೇಲೆ ಇಲಿ ಓಡಾಡುತ್ತಿರುವುದನ್ನು ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ವಧುವಿನ ದೃಷ್ಟಿ ತೆಗೆದು ಮದುವೆ ಮಂಟಪಕ್ಕೆ ಕೈ ಹಿಡಿದು ಕರೆದ್ಯೊಯ್ದ ವರ

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಚರ್ಚೆಗೆ ಕಾರಣವಾಗಿದೆ. ಸೋಶಿಯಲ್​ ಮೀಡಿಯಾ ಬಳಕೆದಾರರು ಬಗೆಬಗೆಯಾಗಿ ಕಾಮೆಂಟ್​​ ಮಾಡಿದ್ದಾರೆ. “ಇದು ಸಾಕು ಇಲಿ ಆಗಿರಬೇಕು” ಎಂದು ಹಾಸ್ಯಸ್ಪದವಾಗಿ ಒಬ್ಬರು ಬರೆದರೆ, ಮತ್ತೊಬ್ಬರು “ಇಲ್ಲಿನ ಸಿಹಿ ತಿಂದ್ರೆ ನರಕ ಗ್ಯಾರಂಟಿ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​