AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇಗವಾಗಿ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದ ಘೇಂಡಾಮೃಗ

ವೇಗವಾಗಿ ಬಂದ ಟ್ರಕ್‌ಗೆ ಘೇಂಡಾಮೃಗವು ಡಿಕ್ಕಿ ಹೊಡೆಯುವುದನ್ನು ತೋರಿಸಿರುವ ವೀಡಿಯೊವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹಂಚಿಕೊಂಡಿದ್ದಾರೆ.

Viral Video: ವೇಗವಾಗಿ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದ ಘೇಂಡಾಮೃಗ
ವೇಗವಾಗಿ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದ ಘೇಂಡಾಮೃಗ
TV9 Web
| Edited By: |

Updated on:Oct 09, 2022 | 4:47 PM

Share

ರಸ್ತೆ ಮೂಲಕ ವೇಗವಾಗಿ ಬರುತ್ತಿದ್ದ ಟ್ರಕ್ ಒಂದಕ್ಕೆ ಅರಣ್ಯದಿಂದ ರಸ್ತೆಗೆ ಬಂದ ಘೇಂಡಮೃಗವೊಂದು ಡಿಕ್ಕಿ ಹೊಡೆದ ಘಟನೆ ಅಸ್ಸಾಂ ರಾಜ್ಯದ ಧುಬ್ರಿ ಜಿಲ್ಲೆಯ ಹಲ್ದಿಬರಿಯಲ್ಲಿ ನಡೆದಿದೆ. ಘೇಂಡಾಮೃಗವು ಟ್ರಕ್​ಗೆ ಗುದ್ದಿದ ನಂತರ ಅರಣ್ಯಕ್ಕೆ ಹೋಗಲು ಪ್ರಯತ್ನಿಸಿದಾಗ ರಸ್ತೆ ಮೇಲೆ ಜಾರಿ ಬೀಳುತ್ತದೆ, ಬಳಿಕ ಎದ್ದು ಅರಣ್ಯಕ್ಕೆ ಸಾಗುತ್ತದೆ. ಬಳಿಕ ಅರಣ್ಯಕ್ಕೆ ಮರಳಿದೆ. ಈ ವಿಡಿಯೋವನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಭಿನ್ನ ಪ್ರತಿಕ್ರಿಯೆಗಳನ್ನು ವ್ಯಕ್ತವಾಗುತ್ತಿವೆ.

ಹತ್ತು ಸೆಕೆಂಡುಗಳ ಕ್ಲಿಪ್‌ನಲ್ಲಿ ಘೇಂಡಾಮೃಗವು ಅರಣ್ಯ ಪ್ರದೇಶದಿಂದ ರಸ್ತೆಗೆ ಬರುತ್ತದೆ. ನಂತರ ಟ್ರಕ್​ಗೆ ಗುದ್ದುತ್ತದೆ. ಈ ವೇಳೆ ರಸ್ತೆಯಲ್ಲಿ ಬೀಳುತ್ತದೆ, ಕೂಡಲೇ ಏದ್ದು ಅರಣ್ಯದ ಕಡೆ ನಡೆದುಕೊಂಡು ಹೋಗುವುದನ್ನು ವಿಡಿಯೋದನ್ನು ಕಾಣಬಹುದು.

“ಘೇಂಡಾಮೃಗಗಳು ನಮ್ಮ ವಿಶೇಷ ಸ್ನೇಹಿತರು, ಅವುಗಳ ಜಾಗದಲ್ಲಿ ಯಾವುದೇ ಉಲ್ಲಂಘನೆಯನ್ನು ನಾವು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿಯವರು ಟ್ವೀಟ್ ಮಾಡಿದ್ದಾರೆ. “ಹಲ್ದಿಬರಿಯಲ್ಲಿ ನಡೆದ ಈ ದುರದೃಷ್ಟಕರ ಘಟನೆಯಲ್ಲಿ ಘೇಂಡಾಮೃಗ ಬದುಕುಳಿದಿದೆ. ವಾಹನವನ್ನು ತಡೆಹಿಡಿದು ದಂಡ ವಿಧಿಸಲಾಗಿದೆ. ಈ ಮಧ್ಯೆ ಕಾಜಿರಂಗದಲ್ಲಿ ಪ್ರಾಣಿಗಳನ್ನು ಉಳಿಸುವ ನಮ್ಮ ಸಂಕಲ್ಪದಲ್ಲಿ ನಾವು ವಿಶೇಷ 32 ಕಿಮೀ ಎಲಿವೇಟೆಡ್ ಕಾರಿಡಾರ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿಯವರ ಟ್ವೀಟ್​ಗೆ ಪ್ರತಿಕ್ರಿಯಿಸಿದ ನೆಟ್ಟಿಗರೊಬ್ಬರು, “ಚಾಲಕನು ಅಲ್ಲಿ ಏನು ಮಾಡಬೇಕಾಗಿತ್ತು? ಅಂತಹ ಸಣ್ಣ ಪ್ರದೇಶದಲ್ಲಿ ಆತ ಚೆನ್ನಾಗಿ ತಿರುಗಿಸಿದನು. ದಂಡ ವಿಧಿಸುವ ಬದಲು ಅಂಡರ್‌ಪಾಸ್‌ಗಳನ್ನು ನಿರ್ಮಿಸಿ” ಎಂದು ಹೇಳಿದ್ದಾರೆ. “32 ಕಿಮೀ ಕಾರಿಡಾರ್ ನಿರ್ಮಾಣದ ಸಮಯದಲ್ಲಿ ನಿಜವಾಗಿಯೂ ಪ್ರಾಣಿಗಳಿಗೆ ತೊಂದರೆಯಾಗುತ್ತದೆ ಮತ್ತು ಮರಗಳ ನಾಶಕ್ಕೆ ಕಾರಣವಾಗಬಹುದು. ಬದಲಿಗೆ ನುಮಲಿಗಢದಲ್ಲಿ ಬಿ’ಪುತ್ರ ಸೇತುವೆ ಪೂರ್ಣಗೊಂಡರೆ ಎಲ್ಲಾ ಭಾರೀ ವಾಹನಗಳನ್ನು ಉತ್ತರ ದಂಡೆಯ ಮೂಲಕ ಚಲಿಸುವಂತೆ ಮಾಡಬೇಕು. ಸದ್ಯಕ್ಕೆ ವೇಗದ ಮಿತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಅಸ್ಸಾಂನಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು ಅತಿಕ್ರಮಣ ಮತ್ತು ಘೇಂಡಾಮೃಗಗಳ ಬೇಟೆಯಿಂದ ಮುಕ್ತಗೊಳಿಸಿದ್ದಕ್ಕಾಗಿ ಅಸ್ಸಾಂ ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 4:47 pm, Sun, 9 October 22

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು