AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೇಗವಾಗಿ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದ ಘೇಂಡಾಮೃಗ

ವೇಗವಾಗಿ ಬಂದ ಟ್ರಕ್‌ಗೆ ಘೇಂಡಾಮೃಗವು ಡಿಕ್ಕಿ ಹೊಡೆಯುವುದನ್ನು ತೋರಿಸಿರುವ ವೀಡಿಯೊವನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹಂಚಿಕೊಂಡಿದ್ದಾರೆ.

Viral Video: ವೇಗವಾಗಿ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದ ಘೇಂಡಾಮೃಗ
ವೇಗವಾಗಿ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದ ಘೇಂಡಾಮೃಗ
TV9 Web
| Updated By: Rakesh Nayak Manchi|

Updated on:Oct 09, 2022 | 4:47 PM

Share

ರಸ್ತೆ ಮೂಲಕ ವೇಗವಾಗಿ ಬರುತ್ತಿದ್ದ ಟ್ರಕ್ ಒಂದಕ್ಕೆ ಅರಣ್ಯದಿಂದ ರಸ್ತೆಗೆ ಬಂದ ಘೇಂಡಮೃಗವೊಂದು ಡಿಕ್ಕಿ ಹೊಡೆದ ಘಟನೆ ಅಸ್ಸಾಂ ರಾಜ್ಯದ ಧುಬ್ರಿ ಜಿಲ್ಲೆಯ ಹಲ್ದಿಬರಿಯಲ್ಲಿ ನಡೆದಿದೆ. ಘೇಂಡಾಮೃಗವು ಟ್ರಕ್​ಗೆ ಗುದ್ದಿದ ನಂತರ ಅರಣ್ಯಕ್ಕೆ ಹೋಗಲು ಪ್ರಯತ್ನಿಸಿದಾಗ ರಸ್ತೆ ಮೇಲೆ ಜಾರಿ ಬೀಳುತ್ತದೆ, ಬಳಿಕ ಎದ್ದು ಅರಣ್ಯಕ್ಕೆ ಸಾಗುತ್ತದೆ. ಬಳಿಕ ಅರಣ್ಯಕ್ಕೆ ಮರಳಿದೆ. ಈ ವಿಡಿಯೋವನ್ನು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಭಿನ್ನ ಪ್ರತಿಕ್ರಿಯೆಗಳನ್ನು ವ್ಯಕ್ತವಾಗುತ್ತಿವೆ.

ಹತ್ತು ಸೆಕೆಂಡುಗಳ ಕ್ಲಿಪ್‌ನಲ್ಲಿ ಘೇಂಡಾಮೃಗವು ಅರಣ್ಯ ಪ್ರದೇಶದಿಂದ ರಸ್ತೆಗೆ ಬರುತ್ತದೆ. ನಂತರ ಟ್ರಕ್​ಗೆ ಗುದ್ದುತ್ತದೆ. ಈ ವೇಳೆ ರಸ್ತೆಯಲ್ಲಿ ಬೀಳುತ್ತದೆ, ಕೂಡಲೇ ಏದ್ದು ಅರಣ್ಯದ ಕಡೆ ನಡೆದುಕೊಂಡು ಹೋಗುವುದನ್ನು ವಿಡಿಯೋದನ್ನು ಕಾಣಬಹುದು.

“ಘೇಂಡಾಮೃಗಗಳು ನಮ್ಮ ವಿಶೇಷ ಸ್ನೇಹಿತರು, ಅವುಗಳ ಜಾಗದಲ್ಲಿ ಯಾವುದೇ ಉಲ್ಲಂಘನೆಯನ್ನು ನಾವು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿಯವರು ಟ್ವೀಟ್ ಮಾಡಿದ್ದಾರೆ. “ಹಲ್ದಿಬರಿಯಲ್ಲಿ ನಡೆದ ಈ ದುರದೃಷ್ಟಕರ ಘಟನೆಯಲ್ಲಿ ಘೇಂಡಾಮೃಗ ಬದುಕುಳಿದಿದೆ. ವಾಹನವನ್ನು ತಡೆಹಿಡಿದು ದಂಡ ವಿಧಿಸಲಾಗಿದೆ. ಈ ಮಧ್ಯೆ ಕಾಜಿರಂಗದಲ್ಲಿ ಪ್ರಾಣಿಗಳನ್ನು ಉಳಿಸುವ ನಮ್ಮ ಸಂಕಲ್ಪದಲ್ಲಿ ನಾವು ವಿಶೇಷ 32 ಕಿಮೀ ಎಲಿವೇಟೆಡ್ ಕಾರಿಡಾರ್‌ನಲ್ಲಿ ಕೆಲಸ ಮಾಡುತ್ತಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿಯವರ ಟ್ವೀಟ್​ಗೆ ಪ್ರತಿಕ್ರಿಯಿಸಿದ ನೆಟ್ಟಿಗರೊಬ್ಬರು, “ಚಾಲಕನು ಅಲ್ಲಿ ಏನು ಮಾಡಬೇಕಾಗಿತ್ತು? ಅಂತಹ ಸಣ್ಣ ಪ್ರದೇಶದಲ್ಲಿ ಆತ ಚೆನ್ನಾಗಿ ತಿರುಗಿಸಿದನು. ದಂಡ ವಿಧಿಸುವ ಬದಲು ಅಂಡರ್‌ಪಾಸ್‌ಗಳನ್ನು ನಿರ್ಮಿಸಿ” ಎಂದು ಹೇಳಿದ್ದಾರೆ. “32 ಕಿಮೀ ಕಾರಿಡಾರ್ ನಿರ್ಮಾಣದ ಸಮಯದಲ್ಲಿ ನಿಜವಾಗಿಯೂ ಪ್ರಾಣಿಗಳಿಗೆ ತೊಂದರೆಯಾಗುತ್ತದೆ ಮತ್ತು ಮರಗಳ ನಾಶಕ್ಕೆ ಕಾರಣವಾಗಬಹುದು. ಬದಲಿಗೆ ನುಮಲಿಗಢದಲ್ಲಿ ಬಿ’ಪುತ್ರ ಸೇತುವೆ ಪೂರ್ಣಗೊಂಡರೆ ಎಲ್ಲಾ ಭಾರೀ ವಾಹನಗಳನ್ನು ಉತ್ತರ ದಂಡೆಯ ಮೂಲಕ ಚಲಿಸುವಂತೆ ಮಾಡಬೇಕು. ಸದ್ಯಕ್ಕೆ ವೇಗದ ಮಿತಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ” ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.

ಅಸ್ಸಾಂನಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಕಾಜಿರಂಗ ರಾಷ್ಟ್ರೀಯ ಉದ್ಯಾನವನವನ್ನು ಅತಿಕ್ರಮಣ ಮತ್ತು ಘೇಂಡಾಮೃಗಗಳ ಬೇಟೆಯಿಂದ ಮುಕ್ತಗೊಳಿಸಿದ್ದಕ್ಕಾಗಿ ಅಸ್ಸಾಂ ಸರ್ಕಾರವನ್ನು ಶ್ಲಾಘಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 4:47 pm, Sun, 9 October 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?