AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೇವಸ್ಥಾನದ ಹೊರಗೆ ಬೆಂಕಿ ಹೊತ್ತಿಕೊಂಡು ಹೊಸ ರಾಯಲ್ ಎನ್​ಫೀಲ್ಡ್​ ಬೈಕ್​ ಸ್ಫೋಟ

ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಅದರ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡಿದೆ. ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲಿ ನೆರೆದಿದ್ದ ಜನರು ಭಯಭೀತರಾಗಿ ಓಡಿದ್ದಾರೆ.

Viral Video: ದೇವಸ್ಥಾನದ ಹೊರಗೆ ಬೆಂಕಿ ಹೊತ್ತಿಕೊಂಡು ಹೊಸ ರಾಯಲ್ ಎನ್​ಫೀಲ್ಡ್​ ಬೈಕ್​ ಸ್ಫೋಟ
ರಾಯಲ್ ಎನ್​ಫೀಲ್ಡ್​ ಬೈಕ್​ಗೆ ಬೆಂಕಿ
TV9 Web
| Edited By: |

Updated on: Apr 04, 2022 | 3:45 PM

Share

ಹೈದರಾಬಾದ್: ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ರಾಯಲ್ ಎನ್‌ಫೀಲ್ಡ್ (Royal Enfield) ಬೈಕ್​ಗೆ ಹಠಾತ್ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡ ಆಘಾತಕಾರಿ ವಿಡಿಯೋವನ್ನು (Shocking Video) ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ದೇವಾಲಯದ ಹೊರಗೆ ಜನರ ಗುಂಪು ಜಮಾಯಿಸಿರುವುದನ್ನು ನೋಡಬಹುದು. ಹೊಸ ಬೈಕ್ ಅನ್ನು ದೇವಸ್ಥಾನದ ಹೊರಗೆ ನಿಲ್ಲಿಸಲಾಗಿತ್ತು. ಅಷ್ಟರಲ್ಲಿ ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದೆ.

ಎನ್‌ಡಿಟಿವಿ ವರದಿ ಪ್ರಕಾರ, ಬೈಕ್‌ನ ಮಾಲೀಕ ರವಿಚಂದ್ರ ಹೊಸ ವಾಹನವನ್ನು ಖರೀದಿಸಿದ ನಂತರ ಗುಂತಕಲ್ ಮಂಡಲದ ನೆಟ್ಟಿಕಂಟಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಲು ಮೈಸೂರಿನಿಂದ ತಡೆರಹಿತವಾಗಿ ಬೈಕ್ ಚಲಾಯಿಸಿದ್ದರು. ಅಲ್ಲಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು. ಆಗ ಬೈಕ್​ಗೆ ಬೆಂಕಿ ಹೊತ್ತಿಕೊಂಡಿದೆ.

ಬೈಕ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಅದರ ಪೆಟ್ರೋಲ್ ಟ್ಯಾಂಕ್ ಸ್ಫೋಟಗೊಂಡಿದೆ. ಬೈಕ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಅಲ್ಲಿ ನೆರೆದಿದ್ದ ಜನರು ಭಯಭೀತರಾಗಿ ಓಡಿದ್ದಾರೆ. ನಂತರ ಹಲವರು ಬೈಕ್​ಗೆ ನೀರು ಹಾಕಿ ಬೆಂಕಿಯನ್ನು ಆರಿಸಿದ್ದಾರೆ. ಬೈಕ್​ಗೆ ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ. ಅದೃಷ್ಟವಶಾತ್, ಯಾವುದೇ ಜೀವಹಾನಿ ವರದಿಯಾಗಿಲ್ಲ.

ಇದೇ ರೀತಿಯ ಘಟನೆಯಲ್ಲಿ ಕಳೆದ ವಾರ ತಮಿಳುನಾಡಿನ ವೆಲ್ಲೂರಿನಲ್ಲಿ ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಬೈಕ್ ಸ್ಫೋಟಗೊಂಡು ತಂದೆ-ಮಗಳು ಇಬ್ಬರೂ ಸಾವನ್ನಪ್ಪಿದ್ದರು.

ಇದನ್ನೂ ಓದಿ: Viral Video: ಬಾಯಾರಿದ ಕೋತಿಗೆ ನೀರು ಕುಡಿಸಿದ ಟ್ರಾಫಿಕ್ ಪೊಲೀಸ್; ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

Viral Video: ಪೊಲೀಸ್ ಅಧಿಕಾರಿಯ ಕುರ್ಚಿಯಲ್ಲಿ ಕುಳಿತು ಕೇಸ್ ಡೈರಿ ಕೇಳಿದ ಬಿಜೆಪಿ ಶಾಸಕ; ವಿಡಿಯೋ ವೈರಲ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ