Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ…ಆಮೇನಾಯ್ತು?

Trending Video: ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ ಎಂಬುದನ್ನು ಸದಾ ನೆನಪಿನ್ನಲ್ಲಿಡಿ.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ...ಆಮೇನಾಯ್ತು?
viral video
Follow us
| Updated By: ಝಾಹಿರ್ ಯೂಸುಫ್

Updated on: Jul 31, 2021 | 8:09 PM

ಅವಸರವೇ ಅಪಾಯಕ್ಕೆ ದಾರಿ ಎಂಬ ಮಾತಿದೆ, ಆದರೆ ಕೆಲವೊಂದು ಬಾರಿ ಅವಸರ ಮಾಡುವುದು ಕೂಡ ಅತ್ಯಗತ್ಯವಾಗಿರುತ್ತೆ. ಮುಖ್ಯವಾಗಿ ಬಸ್ ಅಥವಾ ಟ್ರೈನ್ ಮಿಸ್ ಆಗೋ ಟೈಮ್​ನಲ್ಲಿ ಎಷ್ಟು ಸಾಧ್ಯವೊ ಅಷ್ಟು ಅವಸರದಲ್ಲಿ ತಲುಪಬೇಕಾಗುತ್ತದೆ. ಆದರೆ ಈ ವೇಳೆ ಅಜಾಗರೂಕರಾದ್ರೆ ಅಪಾಯ ತಪ್ಪಿದಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಹೌದು, ಈ ಘಟನೆ ನಡೆದಿರುವುದು ತೆಲಂಗಾಣ ಸಿಕಂದಾಬಾದ್​ನ ರೈಲ್ವೆ ನಿಲ್ದಾಣದಲ್ಲಿ. ರೈಲಿನಲ್ಲಿ ಹೋಗಬೇಕಾದ ಮಹಿಳೆಗೆ ನಿಲ್ದಾಣಕ್ಕೆ ತಡವಾಗಿ ಬಂದಿದ್ದಾರೆ. ಪ್ಲಾಟ್​ಫಾರ್ಮ್​ಗೆ ತಲುಪುತ್ತಿದ್ದಂತೆ ರೈಲು ಕೂಡ ಹೊರಟಿದೆ. ಇನ್ನೇನು ಮಾಡೋದು ಎಂದು ಚಲಿಸುತ್ತಿದ್ದ ರೈಲಿಗೆ ಓಡಿ ಹೋಗಿ ಹತ್ತಲು ಪ್ರಯತ್ನಿಸಿದ್ದಾರೆ. ಸಮತೋಲನ ತಪ್ಪಿದ ಮಹಿಳೆಯು ಜಾರಿ ಬಿದ್ದಿದ್ದಾರೆ.

ಅತ್ತ ರೈಲು ಮುಂದಕ್ಕೆ ಚಲಿಸುತ್ತಿದ್ದಂತೆ ಜಾರಿ ಬಿದ್ದ ಮಹಿಳೆಯ ಕಾಲುಗಳು ಪ್ಲಾಟ್​ಫಾರ್ಮ್ ಹಾಗೂ ರೈಲುಗಳ ನಡುವೆ ಸಿಲುಕಿಕೊಂಡಿತು. ಇದೇ ವೇಳೆ ಅಲ್ಲಿದ್ದ ಆರ್‌ಪಿಎಫ್ ಕಾನ್‌ಸ್ಟೇಬಲ್ ತಕ್ಷಣ ಮಹಿಳೆಯನ್ನು ಪ್ಲಾಟ್‌ಫಾರ್ಮ್ ಮೇಲೆ ಎಳೆದು ಜೀವ ರಕ್ಷಿಸಿದರು. ಪೊಲೀಸ್ ಕಾನ್​​ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ ಮಹಿಳೆಯ ಜೀವ ಉಳಿಯಿತು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆರ್​ಪಿಎಫ್ ಪೊಲೀಸ್​ ಕಾನ್​ಸ್ಟೇಬಲ್​ನ ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ. ಜಾಗರೂಕರಾಗಿರಿ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

(Viral Video: RPF constable saves woman’s life at Secunderabad station)

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್