AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ…ಆಮೇನಾಯ್ತು?

Trending Video: ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ ಎಂಬುದನ್ನು ಸದಾ ನೆನಪಿನ್ನಲ್ಲಿಡಿ.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ...ಆಮೇನಾಯ್ತು?
viral video
TV9 Web
| Edited By: |

Updated on: Jul 31, 2021 | 8:09 PM

Share

ಅವಸರವೇ ಅಪಾಯಕ್ಕೆ ದಾರಿ ಎಂಬ ಮಾತಿದೆ, ಆದರೆ ಕೆಲವೊಂದು ಬಾರಿ ಅವಸರ ಮಾಡುವುದು ಕೂಡ ಅತ್ಯಗತ್ಯವಾಗಿರುತ್ತೆ. ಮುಖ್ಯವಾಗಿ ಬಸ್ ಅಥವಾ ಟ್ರೈನ್ ಮಿಸ್ ಆಗೋ ಟೈಮ್​ನಲ್ಲಿ ಎಷ್ಟು ಸಾಧ್ಯವೊ ಅಷ್ಟು ಅವಸರದಲ್ಲಿ ತಲುಪಬೇಕಾಗುತ್ತದೆ. ಆದರೆ ಈ ವೇಳೆ ಅಜಾಗರೂಕರಾದ್ರೆ ಅಪಾಯ ತಪ್ಪಿದಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಹೌದು, ಈ ಘಟನೆ ನಡೆದಿರುವುದು ತೆಲಂಗಾಣ ಸಿಕಂದಾಬಾದ್​ನ ರೈಲ್ವೆ ನಿಲ್ದಾಣದಲ್ಲಿ. ರೈಲಿನಲ್ಲಿ ಹೋಗಬೇಕಾದ ಮಹಿಳೆಗೆ ನಿಲ್ದಾಣಕ್ಕೆ ತಡವಾಗಿ ಬಂದಿದ್ದಾರೆ. ಪ್ಲಾಟ್​ಫಾರ್ಮ್​ಗೆ ತಲುಪುತ್ತಿದ್ದಂತೆ ರೈಲು ಕೂಡ ಹೊರಟಿದೆ. ಇನ್ನೇನು ಮಾಡೋದು ಎಂದು ಚಲಿಸುತ್ತಿದ್ದ ರೈಲಿಗೆ ಓಡಿ ಹೋಗಿ ಹತ್ತಲು ಪ್ರಯತ್ನಿಸಿದ್ದಾರೆ. ಸಮತೋಲನ ತಪ್ಪಿದ ಮಹಿಳೆಯು ಜಾರಿ ಬಿದ್ದಿದ್ದಾರೆ.

ಅತ್ತ ರೈಲು ಮುಂದಕ್ಕೆ ಚಲಿಸುತ್ತಿದ್ದಂತೆ ಜಾರಿ ಬಿದ್ದ ಮಹಿಳೆಯ ಕಾಲುಗಳು ಪ್ಲಾಟ್​ಫಾರ್ಮ್ ಹಾಗೂ ರೈಲುಗಳ ನಡುವೆ ಸಿಲುಕಿಕೊಂಡಿತು. ಇದೇ ವೇಳೆ ಅಲ್ಲಿದ್ದ ಆರ್‌ಪಿಎಫ್ ಕಾನ್‌ಸ್ಟೇಬಲ್ ತಕ್ಷಣ ಮಹಿಳೆಯನ್ನು ಪ್ಲಾಟ್‌ಫಾರ್ಮ್ ಮೇಲೆ ಎಳೆದು ಜೀವ ರಕ್ಷಿಸಿದರು. ಪೊಲೀಸ್ ಕಾನ್​​ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ ಮಹಿಳೆಯ ಜೀವ ಉಳಿಯಿತು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆರ್​ಪಿಎಫ್ ಪೊಲೀಸ್​ ಕಾನ್​ಸ್ಟೇಬಲ್​ನ ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ. ಜಾಗರೂಕರಾಗಿರಿ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

(Viral Video: RPF constable saves woman’s life at Secunderabad station)

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ