AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ…ಆಮೇನಾಯ್ತು?

Trending Video: ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ ಎಂಬುದನ್ನು ಸದಾ ನೆನಪಿನ್ನಲ್ಲಿಡಿ.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ...ಆಮೇನಾಯ್ತು?
viral video
TV9 Web
| Edited By: |

Updated on: Jul 31, 2021 | 8:09 PM

Share

ಅವಸರವೇ ಅಪಾಯಕ್ಕೆ ದಾರಿ ಎಂಬ ಮಾತಿದೆ, ಆದರೆ ಕೆಲವೊಂದು ಬಾರಿ ಅವಸರ ಮಾಡುವುದು ಕೂಡ ಅತ್ಯಗತ್ಯವಾಗಿರುತ್ತೆ. ಮುಖ್ಯವಾಗಿ ಬಸ್ ಅಥವಾ ಟ್ರೈನ್ ಮಿಸ್ ಆಗೋ ಟೈಮ್​ನಲ್ಲಿ ಎಷ್ಟು ಸಾಧ್ಯವೊ ಅಷ್ಟು ಅವಸರದಲ್ಲಿ ತಲುಪಬೇಕಾಗುತ್ತದೆ. ಆದರೆ ಈ ವೇಳೆ ಅಜಾಗರೂಕರಾದ್ರೆ ಅಪಾಯ ತಪ್ಪಿದಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಹೌದು, ಈ ಘಟನೆ ನಡೆದಿರುವುದು ತೆಲಂಗಾಣ ಸಿಕಂದಾಬಾದ್​ನ ರೈಲ್ವೆ ನಿಲ್ದಾಣದಲ್ಲಿ. ರೈಲಿನಲ್ಲಿ ಹೋಗಬೇಕಾದ ಮಹಿಳೆಗೆ ನಿಲ್ದಾಣಕ್ಕೆ ತಡವಾಗಿ ಬಂದಿದ್ದಾರೆ. ಪ್ಲಾಟ್​ಫಾರ್ಮ್​ಗೆ ತಲುಪುತ್ತಿದ್ದಂತೆ ರೈಲು ಕೂಡ ಹೊರಟಿದೆ. ಇನ್ನೇನು ಮಾಡೋದು ಎಂದು ಚಲಿಸುತ್ತಿದ್ದ ರೈಲಿಗೆ ಓಡಿ ಹೋಗಿ ಹತ್ತಲು ಪ್ರಯತ್ನಿಸಿದ್ದಾರೆ. ಸಮತೋಲನ ತಪ್ಪಿದ ಮಹಿಳೆಯು ಜಾರಿ ಬಿದ್ದಿದ್ದಾರೆ.

ಅತ್ತ ರೈಲು ಮುಂದಕ್ಕೆ ಚಲಿಸುತ್ತಿದ್ದಂತೆ ಜಾರಿ ಬಿದ್ದ ಮಹಿಳೆಯ ಕಾಲುಗಳು ಪ್ಲಾಟ್​ಫಾರ್ಮ್ ಹಾಗೂ ರೈಲುಗಳ ನಡುವೆ ಸಿಲುಕಿಕೊಂಡಿತು. ಇದೇ ವೇಳೆ ಅಲ್ಲಿದ್ದ ಆರ್‌ಪಿಎಫ್ ಕಾನ್‌ಸ್ಟೇಬಲ್ ತಕ್ಷಣ ಮಹಿಳೆಯನ್ನು ಪ್ಲಾಟ್‌ಫಾರ್ಮ್ ಮೇಲೆ ಎಳೆದು ಜೀವ ರಕ್ಷಿಸಿದರು. ಪೊಲೀಸ್ ಕಾನ್​​ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ ಮಹಿಳೆಯ ಜೀವ ಉಳಿಯಿತು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆರ್​ಪಿಎಫ್ ಪೊಲೀಸ್​ ಕಾನ್​ಸ್ಟೇಬಲ್​ನ ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ. ಜಾಗರೂಕರಾಗಿರಿ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

(Viral Video: RPF constable saves woman’s life at Secunderabad station)

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!