AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ…ಆಮೇನಾಯ್ತು?

Trending Video: ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ ಎಂಬುದನ್ನು ಸದಾ ನೆನಪಿನ್ನಲ್ಲಿಡಿ.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ...ಆಮೇನಾಯ್ತು?
viral video
TV9 Web
| Edited By: |

Updated on: Jul 31, 2021 | 8:09 PM

Share

ಅವಸರವೇ ಅಪಾಯಕ್ಕೆ ದಾರಿ ಎಂಬ ಮಾತಿದೆ, ಆದರೆ ಕೆಲವೊಂದು ಬಾರಿ ಅವಸರ ಮಾಡುವುದು ಕೂಡ ಅತ್ಯಗತ್ಯವಾಗಿರುತ್ತೆ. ಮುಖ್ಯವಾಗಿ ಬಸ್ ಅಥವಾ ಟ್ರೈನ್ ಮಿಸ್ ಆಗೋ ಟೈಮ್​ನಲ್ಲಿ ಎಷ್ಟು ಸಾಧ್ಯವೊ ಅಷ್ಟು ಅವಸರದಲ್ಲಿ ತಲುಪಬೇಕಾಗುತ್ತದೆ. ಆದರೆ ಈ ವೇಳೆ ಅಜಾಗರೂಕರಾದ್ರೆ ಅಪಾಯ ತಪ್ಪಿದಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಹೌದು, ಈ ಘಟನೆ ನಡೆದಿರುವುದು ತೆಲಂಗಾಣ ಸಿಕಂದಾಬಾದ್​ನ ರೈಲ್ವೆ ನಿಲ್ದಾಣದಲ್ಲಿ. ರೈಲಿನಲ್ಲಿ ಹೋಗಬೇಕಾದ ಮಹಿಳೆಗೆ ನಿಲ್ದಾಣಕ್ಕೆ ತಡವಾಗಿ ಬಂದಿದ್ದಾರೆ. ಪ್ಲಾಟ್​ಫಾರ್ಮ್​ಗೆ ತಲುಪುತ್ತಿದ್ದಂತೆ ರೈಲು ಕೂಡ ಹೊರಟಿದೆ. ಇನ್ನೇನು ಮಾಡೋದು ಎಂದು ಚಲಿಸುತ್ತಿದ್ದ ರೈಲಿಗೆ ಓಡಿ ಹೋಗಿ ಹತ್ತಲು ಪ್ರಯತ್ನಿಸಿದ್ದಾರೆ. ಸಮತೋಲನ ತಪ್ಪಿದ ಮಹಿಳೆಯು ಜಾರಿ ಬಿದ್ದಿದ್ದಾರೆ.

ಅತ್ತ ರೈಲು ಮುಂದಕ್ಕೆ ಚಲಿಸುತ್ತಿದ್ದಂತೆ ಜಾರಿ ಬಿದ್ದ ಮಹಿಳೆಯ ಕಾಲುಗಳು ಪ್ಲಾಟ್​ಫಾರ್ಮ್ ಹಾಗೂ ರೈಲುಗಳ ನಡುವೆ ಸಿಲುಕಿಕೊಂಡಿತು. ಇದೇ ವೇಳೆ ಅಲ್ಲಿದ್ದ ಆರ್‌ಪಿಎಫ್ ಕಾನ್‌ಸ್ಟೇಬಲ್ ತಕ್ಷಣ ಮಹಿಳೆಯನ್ನು ಪ್ಲಾಟ್‌ಫಾರ್ಮ್ ಮೇಲೆ ಎಳೆದು ಜೀವ ರಕ್ಷಿಸಿದರು. ಪೊಲೀಸ್ ಕಾನ್​​ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ ಮಹಿಳೆಯ ಜೀವ ಉಳಿಯಿತು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆರ್​ಪಿಎಫ್ ಪೊಲೀಸ್​ ಕಾನ್​ಸ್ಟೇಬಲ್​ನ ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ. ಜಾಗರೂಕರಾಗಿರಿ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

(Viral Video: RPF constable saves woman’s life at Secunderabad station)

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?