AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ…ಆಮೇನಾಯ್ತು?

Trending Video: ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ ಎಂಬುದನ್ನು ಸದಾ ನೆನಪಿನ್ನಲ್ಲಿಡಿ.

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ...ಆಮೇನಾಯ್ತು?
viral video
TV9 Web
| Edited By: |

Updated on: Jul 31, 2021 | 8:09 PM

Share

ಅವಸರವೇ ಅಪಾಯಕ್ಕೆ ದಾರಿ ಎಂಬ ಮಾತಿದೆ, ಆದರೆ ಕೆಲವೊಂದು ಬಾರಿ ಅವಸರ ಮಾಡುವುದು ಕೂಡ ಅತ್ಯಗತ್ಯವಾಗಿರುತ್ತೆ. ಮುಖ್ಯವಾಗಿ ಬಸ್ ಅಥವಾ ಟ್ರೈನ್ ಮಿಸ್ ಆಗೋ ಟೈಮ್​ನಲ್ಲಿ ಎಷ್ಟು ಸಾಧ್ಯವೊ ಅಷ್ಟು ಅವಸರದಲ್ಲಿ ತಲುಪಬೇಕಾಗುತ್ತದೆ. ಆದರೆ ಈ ವೇಳೆ ಅಜಾಗರೂಕರಾದ್ರೆ ಅಪಾಯ ತಪ್ಪಿದಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ.

ಹೌದು, ಈ ಘಟನೆ ನಡೆದಿರುವುದು ತೆಲಂಗಾಣ ಸಿಕಂದಾಬಾದ್​ನ ರೈಲ್ವೆ ನಿಲ್ದಾಣದಲ್ಲಿ. ರೈಲಿನಲ್ಲಿ ಹೋಗಬೇಕಾದ ಮಹಿಳೆಗೆ ನಿಲ್ದಾಣಕ್ಕೆ ತಡವಾಗಿ ಬಂದಿದ್ದಾರೆ. ಪ್ಲಾಟ್​ಫಾರ್ಮ್​ಗೆ ತಲುಪುತ್ತಿದ್ದಂತೆ ರೈಲು ಕೂಡ ಹೊರಟಿದೆ. ಇನ್ನೇನು ಮಾಡೋದು ಎಂದು ಚಲಿಸುತ್ತಿದ್ದ ರೈಲಿಗೆ ಓಡಿ ಹೋಗಿ ಹತ್ತಲು ಪ್ರಯತ್ನಿಸಿದ್ದಾರೆ. ಸಮತೋಲನ ತಪ್ಪಿದ ಮಹಿಳೆಯು ಜಾರಿ ಬಿದ್ದಿದ್ದಾರೆ.

ಅತ್ತ ರೈಲು ಮುಂದಕ್ಕೆ ಚಲಿಸುತ್ತಿದ್ದಂತೆ ಜಾರಿ ಬಿದ್ದ ಮಹಿಳೆಯ ಕಾಲುಗಳು ಪ್ಲಾಟ್​ಫಾರ್ಮ್ ಹಾಗೂ ರೈಲುಗಳ ನಡುವೆ ಸಿಲುಕಿಕೊಂಡಿತು. ಇದೇ ವೇಳೆ ಅಲ್ಲಿದ್ದ ಆರ್‌ಪಿಎಫ್ ಕಾನ್‌ಸ್ಟೇಬಲ್ ತಕ್ಷಣ ಮಹಿಳೆಯನ್ನು ಪ್ಲಾಟ್‌ಫಾರ್ಮ್ ಮೇಲೆ ಎಳೆದು ಜೀವ ರಕ್ಷಿಸಿದರು. ಪೊಲೀಸ್ ಕಾನ್​​ಸ್ಟೇಬಲ್ ಅವರ ಸಮಯ ಪ್ರಜ್ಞೆಯಿಂದ ಮಹಿಳೆಯ ಜೀವ ಉಳಿಯಿತು. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆರ್​ಪಿಎಫ್ ಪೊಲೀಸ್​ ಕಾನ್​ಸ್ಟೇಬಲ್​ನ ಸಮಯ ಪ್ರಜ್ಞೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಈ ವಿಡಿಯೋ ನೋಡಿದ ಬಳಿಕವಾದರೂ ಚಲಿಸುತ್ತಿರುವ ರೈಲು ಅಥವಾ ಬಸ್​ಗಳಲ್ಲಿ ಹತ್ತುವ ಪ್ರಯತ್ನ ಮಾಡದಿರಿ. ಬಸ್ ಅಥವಾ ರೈಲು ಹೋದರೆ ಪುನಃ ಬರಬಹುದು. ಆದರೆ ಜೀವ ಹೋದರೆ ಮರಳಿ ಬರಲ್ಲ. ಜಾಗರೂಕರಾಗಿರಿ.

ಇದನ್ನೂ ಓದಿ: ಕಡಿಮೆ ಬೆಲೆಯ ಪವರ್​ಫುಲ್ ಪವರ್ ಬ್ಯಾಂಕ್: ಮೊಬೈಲ್, ಲ್ಯಾಪ್​ಟಾಪ್​ನ್ನು ಚಾರ್ಜ್​ ಮಾಡಬಹುದು

ಇದನ್ನೂ ಓದಿ: Viral Story: ಒಂದು ಕೆ.ಜಿ ಮಾಂಸ ಖರೀದಿಸಿದ್ರೆ ಒಂದು ಲೀಟರ್ ಪೆಟ್ರೋಲ್ ಉಚಿತ

(Viral Video: RPF constable saves woman’s life at Secunderabad station)

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ