AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಮಾನವನ್ನು ಐಷಾರಾಮಿ ಬಂಗಲೆಯನ್ನಾಗಿ ಮಾಡಿದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಮೊದಲಿಗೆ ನೀವು ಹೊರಗಿನಿಂದ ವಿಮಾನವನ್ನು ಕಾಣಬಹುದು. ಆದರೆ ವಿಮಾನದ ಒಳಗೆ ಪ್ರವೇಶಿಸುತ್ತಿದ್ದಂತೆ ಐಷಾರಾಮಿ ಸೌಕರ್ಯವನ್ನೊಳಗೊಂಡ ಬೃಹತ್​​ ಬಂಗಲೆಯನ್ನು ಕಾಣಬಹುದು. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗಿದೆ.

Viral Video: ವಿಮಾನವನ್ನು ಐಷಾರಾಮಿ ಬಂಗಲೆಯನ್ನಾಗಿ ಮಾಡಿದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ವಿಮಾನವನ್ನು ಐಷಾರಾಮಿ ಬಂಗಲೆಯನ್ನಾಗಿ ಮಾಡಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Feb 18, 2024 | 12:58 PM

Share

ಭಾರತದ ಹಿರಿಯ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ಸೋಶಿಯಲ್​​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ತಮ್ಮ ಅನುಯಾಯಿಗಳಿಗಾಗಿ ಟ್ರೆಂಡಿಂಗ್ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗಾ ವಿಮಾನವನ್ನು ಐಷಾರಾಮಿ ಬಂಗಲೆಯನ್ನಾಗಿ ಮಾಡಿದ ವ್ಯಕ್ತಿಯ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ವಿಡಿಯೋ ಎಲ್ಲಡೆ ವೈರಲ್​​ ಆಗಿದೆ.

ರಷ್ಯಾದ ಉದ್ಯಮಿ ಫೆಲಿಕ್ಸ್ ಡೆಮಿನ್ ಕೈಬಿಟ್ಟ ಬೋಯಿಂಗ್ 737 ಅನ್ನು ಐಷಾರಾಮಿ ಖಾಸಗಿ ವಿಲ್ಲಾವನ್ನಾಗಿ ಮಾಡಿದ್ದಾರೆ. ಈ ವಿಶಿಷ್ಟ ಐಷಾರಾಮಿ ಬಂಗಲೆ ಇಂಡೋನೇಷ್ಯಾದ ಬಾಲಿಯಲ್ಲಿರುವ ನಿಯಾಂಗ್ ನಿಯಾಂಗ್ ರಾಕ್ಸ್ ಮೇಲೆ ನೆಲೆಗೊಂಡಿದೆ. ಇದು ಎರಡು ಮಲಗುವ ಕೋಣೆ, ಹಿಂದೂ ಮಹಾಸಾಗರದ ಮೇಲಿರುವ ಈಜುಕೊಳ, ಬಾರ್, ಲಾಂಜ್ಗಳು ಮತ್ತು ಇತರ ಅನೇಕ ಐಷಾರಾಮಿ ಸೌಕರ್ಯಗಳನ್ನು ಹೊಂದಿದೆ.

ಫೆಲಿಕ್ಸ್ ಡೆಮಿನ್ 2021 ರಲ್ಲಿ ಕೈಬಿಟ್ಟ ಬೋಯಿಂಗ್ 737 ಅನ್ನು ಖರೀದಿಸಿದರು. ಅದನ್ನು ಬಾಲಿಗೆ ಒಯ್ದು ವಿಲ್ಲಾ ಆಗಿ ಪರಿವರ್ತಿಸಿದ್ದಾರೆ. ಅವರು 2023 ರಲ್ಲಿ ಈ ವಿಲ್ಲಾವನ್ನು ಬಳಸಲು ಪ್ರಾರಂಭಿಸಿದರು. ವಿಲ್ಲಾ ಶೀಘ್ರದಲ್ಲೇ ವಿಶ್ವದ ಅತ್ಯಂತ ಪ್ರತಿಷ್ಠಿತ ಐಷಾರಾಮಿ ವಿಲ್ಲಾಗಳಲ್ಲಿ ಒಂದಾಗಿದೆ.

ವಿಮಾನ ಐಷಾರಾಮಿ ವಿಲ್ಲಾ ಆಗಿ ಮಾರ್ಪಟ್ಟ ವಿಡಿಯೋ ಇಲ್ಲಿದೆ:

ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮದುವೆ; ದೃಷ್ಟಿಹೀನ ಕುಶಲಕರ್ಮಿಗಳಿಂದ ತಯಾರಾಗುತ್ತಿದೆ ವಿಶೇಷ ಉಡುಗೊರೆ

ಆನಂದ್ ಮಹೀಂದ್ರಾ ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಮೊದಲಿಗೆ ನೀವು ಹೊರಗಿನಿಂದ ವಿಮಾನವನ್ನು ಕಾಣಬಹುದು. ಆದರೆ ವಿಮಾನದ ಒಳಗೆ ಪ್ರವೇಶಿಸುತ್ತಿದ್ದಂತೆ ಐಷಾರಾಮಿ ಸೌಕರ್ಯವನ್ನೊಳಗೊಂಡ ಬೃಹತ್​​ ಬಂಗಲೆಯನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಅನೇಕ ನೆಟ್ಟಿಗರು “ಇದರಲ್ಲಿ ಉಳಿಯಲು ಅವಕಾಶ ಸಿಗುತ್ತದೆಯೇ, ಈ ವಿಲ್ಲಾ ಬಾಡಿಗೆಗೆ ಕೂಡ ಲಭ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ