AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಡಿ ಸಿಲುಕುತ್ತಿದ್ದ ಬಾಲಕನ ಜೀವ ಕಾಪಾಡಿದ ಪೌರ ಕಾರ್ಮಿಕ; ವಿಡಿಯೋ ವೈರಲ್

ಕಸದ ಲಾರಿ ಮುಂದೆ ಹೋಗುತ್ತಿದ್ದಂತೆ ವೇಗವಾಗಿ ರಸ್ತೆ ದಾಟಲು ನೋಡಿದ ಬಾಲಕ ಇನ್ನೇನು ಕಾರಿನಡಿ ಸಿಲುಕುವುದರಲ್ಲಿದ್ದ. ಆದರೆ, ಅಷ್ಟರಲ್ಲಿ ಅಲ್ಲೇ ಇದ್ದ ಪೌರ ಕಾರ್ಮಿಕ ಆ ಬಾಲಕನನ್ನು ಎಳೆದು ನಿಲ್ಲಿಸಿ, ಕಾಪಾಡಿದ್ದಾರೆ.

Viral Video: ಕಾರಿನಡಿ ಸಿಲುಕುತ್ತಿದ್ದ ಬಾಲಕನ ಜೀವ ಕಾಪಾಡಿದ ಪೌರ ಕಾರ್ಮಿಕ; ವಿಡಿಯೋ ವೈರಲ್
ವೈರಲ್ ವಿಡಿಯೋ
TV9 Web
| Edited By: |

Updated on: Sep 07, 2021 | 1:16 PM

Share

ಇನ್ನೇನು ಕಣ್ಣುಮುಚ್ಚಿ ಬಿಡುವಷ್ಟರಲ್ಲಿ ಆ ಬಾಲಕ ಕಾರಿನ ಅಡಿ ಸಿಲುಕಿ ಅಪ್ಪಚ್ಚಿಯಾಗುತ್ತಿದ್ದ. ಆದರೆ, ಅಷ್ಟರಲ್ಲಿ ದೇವರಂತೆ ಬಂದ ಪೌರ ಕಾರ್ಮಿಕ ಆ ಬಾಲಕನನ್ನು ಎಳೆದು ನಿಲ್ಲಿಸಿ ದೊಡ್ಡ ಅಪಾಯದಿಂದ ಪಾರು ಮಾಡಿದ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಚಿಕ್ಕ ಬಾಲಕನ ಜೀವ ಉಳಿಸಿದ ಆ ಪೌರ ಕಾರ್ಮಿಕನ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಈ ಘಟನೆ ಬ್ರೆಜಿಲ್​ನ ರೋಲಾಂಡಿಯದಲ್ಲಿ ನಡೆದಿದೆ. ಆ ಬಾಲಕನ ತಾತ ಮನೆಯ ಗೇಟ್ ದಾಟಿ ಮುಂದೆ ಹೋಗಿದ್ದರು. ಅವರ ಜೊತೆ ಹೊರಟಿದ್ದ ಮೊಮ್ಮಗನೂ ಇನ್ನೇನು ರಸ್ತೆ ದಾಟಿ ಹೋಗಬೇಕು ಎನ್ನುವಷ್ಟರಲ್ಲಿ ಕಸದ ಲಾರಿ ಬಂದಿತು. ಆ ಕಸದ ಲಾರಿಯ ಹಿಂಭಾಗದಿಂದ ಇನ್ನೊಂದು ಕಾರು ಬರುತ್ತಿತ್ತು. ಆದರೆ, ಎದುರಿನಲ್ಲಿ ಲಾರಿ ಇದ್ದುದರಿಂದ ಬಾಲಕನಿಗೆ ಆ ಕಾರು ಕಾಣಲಿಲ್ಲ.

ಕಸದ ಲಾರಿ ಮುಂದೆ ಹೋಗುತ್ತಿದ್ದಂತೆ ವೇಗವಾಗಿ ರಸ್ತೆ ದಾಟಲು ನೋಡಿದ ಬಾಲಕ ಇನ್ನೇನು ಕಾರಿನಡಿ ಸಿಲುಕುವುದರಲ್ಲಿದ್ದ. ಆದರೆ, ಅಷ್ಟರಲ್ಲಿ ಅಲ್ಲೇ ಇದ್ದ ಪೌರ ಕಾರ್ಮಿಕ ಆ ಬಾಲಕನನ್ನು ಎಳೆದು ನಿಲ್ಲಿಸಿ, ಕಾಪಾಡಿದ್ದಾರೆ. ಈ ವಿಡಿಯೋವನ್ನು ಈಗಾಗಲೇ 1 ಮಿಲಿಯನ್​ಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ, 60 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ಆ ಪೌರ ಕಾರ್ಮಿಕ ಕೇವಲ ಬಾಲಕನನ್ನು ಮಾತ್ರ ಕಾಪಾಡಲಿಲ್ಲ, ಆ ಬಾಲಕನನ್ನು ಕೊಂದುಬಿಟ್ಟೆನಲ್ಲ ಎಂದು ಜೀವನಪೂರ್ತಿ ನೆನಪಿಸಿಕೊಂಡು ಕೊರಗಬೇಕಾಗಿದ್ದ ಕಾರು ಚಾಲಕನನ್ನು ಕೂಡ ಕಾಪಾಡಿದ್ದಾನೆ. ಆತ ನಿವಾದ ಹೀರೋ ಎಂದು ಟ್ವಿಟ್ಟಿಗರು ಕಮೆಂಟ್ ಕೂಡ ಮಾಡಿದ್ದಾರೆ.

ಇದನ್ನೂ ಓದಿ: Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

Viral News: 2 ಲಕ್ಷ ರೂ.ಗೆ ಮಾರಾಟವಾಯ್ತು 90 ಪೈಸೆಯ ಚಮಚ! ಹರಾಜಿಗೆ ಹಾಕಿದ್ದ ಮಾಲೀಕನೇ ಶಾಕ್

(Sanitation worker saves boy from being run over by Car Shocking Video has over 1 million views)

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!