AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾರಿನಡಿ ಸಿಲುಕುತ್ತಿದ್ದ ಬಾಲಕನ ಜೀವ ಕಾಪಾಡಿದ ಪೌರ ಕಾರ್ಮಿಕ; ವಿಡಿಯೋ ವೈರಲ್

ಕಸದ ಲಾರಿ ಮುಂದೆ ಹೋಗುತ್ತಿದ್ದಂತೆ ವೇಗವಾಗಿ ರಸ್ತೆ ದಾಟಲು ನೋಡಿದ ಬಾಲಕ ಇನ್ನೇನು ಕಾರಿನಡಿ ಸಿಲುಕುವುದರಲ್ಲಿದ್ದ. ಆದರೆ, ಅಷ್ಟರಲ್ಲಿ ಅಲ್ಲೇ ಇದ್ದ ಪೌರ ಕಾರ್ಮಿಕ ಆ ಬಾಲಕನನ್ನು ಎಳೆದು ನಿಲ್ಲಿಸಿ, ಕಾಪಾಡಿದ್ದಾರೆ.

Viral Video: ಕಾರಿನಡಿ ಸಿಲುಕುತ್ತಿದ್ದ ಬಾಲಕನ ಜೀವ ಕಾಪಾಡಿದ ಪೌರ ಕಾರ್ಮಿಕ; ವಿಡಿಯೋ ವೈರಲ್
ವೈರಲ್ ವಿಡಿಯೋ
TV9 Web
| Edited By: |

Updated on: Sep 07, 2021 | 1:16 PM

Share

ಇನ್ನೇನು ಕಣ್ಣುಮುಚ್ಚಿ ಬಿಡುವಷ್ಟರಲ್ಲಿ ಆ ಬಾಲಕ ಕಾರಿನ ಅಡಿ ಸಿಲುಕಿ ಅಪ್ಪಚ್ಚಿಯಾಗುತ್ತಿದ್ದ. ಆದರೆ, ಅಷ್ಟರಲ್ಲಿ ದೇವರಂತೆ ಬಂದ ಪೌರ ಕಾರ್ಮಿಕ ಆ ಬಾಲಕನನ್ನು ಎಳೆದು ನಿಲ್ಲಿಸಿ ದೊಡ್ಡ ಅಪಾಯದಿಂದ ಪಾರು ಮಾಡಿದ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಚಿಕ್ಕ ಬಾಲಕನ ಜೀವ ಉಳಿಸಿದ ಆ ಪೌರ ಕಾರ್ಮಿಕನ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದ್ದು, ಈ ಘಟನೆ ಬ್ರೆಜಿಲ್​ನ ರೋಲಾಂಡಿಯದಲ್ಲಿ ನಡೆದಿದೆ. ಆ ಬಾಲಕನ ತಾತ ಮನೆಯ ಗೇಟ್ ದಾಟಿ ಮುಂದೆ ಹೋಗಿದ್ದರು. ಅವರ ಜೊತೆ ಹೊರಟಿದ್ದ ಮೊಮ್ಮಗನೂ ಇನ್ನೇನು ರಸ್ತೆ ದಾಟಿ ಹೋಗಬೇಕು ಎನ್ನುವಷ್ಟರಲ್ಲಿ ಕಸದ ಲಾರಿ ಬಂದಿತು. ಆ ಕಸದ ಲಾರಿಯ ಹಿಂಭಾಗದಿಂದ ಇನ್ನೊಂದು ಕಾರು ಬರುತ್ತಿತ್ತು. ಆದರೆ, ಎದುರಿನಲ್ಲಿ ಲಾರಿ ಇದ್ದುದರಿಂದ ಬಾಲಕನಿಗೆ ಆ ಕಾರು ಕಾಣಲಿಲ್ಲ.

ಕಸದ ಲಾರಿ ಮುಂದೆ ಹೋಗುತ್ತಿದ್ದಂತೆ ವೇಗವಾಗಿ ರಸ್ತೆ ದಾಟಲು ನೋಡಿದ ಬಾಲಕ ಇನ್ನೇನು ಕಾರಿನಡಿ ಸಿಲುಕುವುದರಲ್ಲಿದ್ದ. ಆದರೆ, ಅಷ್ಟರಲ್ಲಿ ಅಲ್ಲೇ ಇದ್ದ ಪೌರ ಕಾರ್ಮಿಕ ಆ ಬಾಲಕನನ್ನು ಎಳೆದು ನಿಲ್ಲಿಸಿ, ಕಾಪಾಡಿದ್ದಾರೆ. ಈ ವಿಡಿಯೋವನ್ನು ಈಗಾಗಲೇ 1 ಮಿಲಿಯನ್​ಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ, 60 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ಆ ಪೌರ ಕಾರ್ಮಿಕ ಕೇವಲ ಬಾಲಕನನ್ನು ಮಾತ್ರ ಕಾಪಾಡಲಿಲ್ಲ, ಆ ಬಾಲಕನನ್ನು ಕೊಂದುಬಿಟ್ಟೆನಲ್ಲ ಎಂದು ಜೀವನಪೂರ್ತಿ ನೆನಪಿಸಿಕೊಂಡು ಕೊರಗಬೇಕಾಗಿದ್ದ ಕಾರು ಚಾಲಕನನ್ನು ಕೂಡ ಕಾಪಾಡಿದ್ದಾನೆ. ಆತ ನಿವಾದ ಹೀರೋ ಎಂದು ಟ್ವಿಟ್ಟಿಗರು ಕಮೆಂಟ್ ಕೂಡ ಮಾಡಿದ್ದಾರೆ.

ಇದನ್ನೂ ಓದಿ: Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

Viral News: 2 ಲಕ್ಷ ರೂ.ಗೆ ಮಾರಾಟವಾಯ್ತು 90 ಪೈಸೆಯ ಚಮಚ! ಹರಾಜಿಗೆ ಹಾಕಿದ್ದ ಮಾಲೀಕನೇ ಶಾಕ್

(Sanitation worker saves boy from being run over by Car Shocking Video has over 1 million views)

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ