AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉತ್ತರ ಭಾರತದಲ್ಲಿ ಉಷ್ಣ ಅಲೆಯ ಅಬ್ಬರ; ಈಜುಕೊಳವಾದ ಕ್ಲಾಸ್​ ರೂಂ

ಈ ಬಾರಿಯ ಬೇಸಿಗೆ ಬಹಳ ಕಠೋರವಾಗಿದೆ. ಉರಿ ಬಿಸಿಲಿನ ತಾಪಕ್ಕೆ ಪ್ರಾಣಿಪಕ್ಷಿಗಳು ಕಂಗಾಲಾಗಿವೆ. ಜನರಿಗೂ ಹಲವೆಡೆ ಬಿಸಿಲ ಧಗೆ ನಿವಾರಿಸಿಕೊಳ್ಳಲು ಕುಡಿಯಲು ನೀರಿಲ್ಲದಂತಾಗಿದೆ. ಹಲವು ರಾಜ್ಯಗಳಲ್ಲಿ ಉಷ್ಣ ಅಲೆ ಅಥವಾ ಹೀಟ್ ವೇವ್ ಆರ್ಭಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಶಾಲೆಯೊಂದರಲ್ಲಿ ಮಕ್ಕಳನ್ನು ಬಿಸಿಲಿನ ಶಾಖದಿಂದ ಪಾರು ಮಾಡಲು ಶಿಕ್ಷಕರು ಹೊಸ ಪ್ಲಾನ್ ಮಾಡಿದ್ದಾರೆ.

Viral Video: ಉತ್ತರ ಭಾರತದಲ್ಲಿ ಉಷ್ಣ ಅಲೆಯ ಅಬ್ಬರ; ಈಜುಕೊಳವಾದ ಕ್ಲಾಸ್​ ರೂಂ
ಈಜುಕೊಳವಾದ ಕ್ಲಾಸ್​ ರೂಂ
ಸುಷ್ಮಾ ಚಕ್ರೆ
|

Updated on: Apr 30, 2024 | 6:24 PM

Share

ನವದೆಹಲಿ: ಉತ್ತರ ಭಾರತದಲ್ಲಿ (North India) ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತಿದೆ. ಉಷ್ಣ ಅಲೆಯ (Heatwave) ಭೀತಿ ಎದುರಾಗಿದ್ದು, ಜನರಿಗೆ ಮನೆಯಿಂದ ಹೊರಗೆ ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಶಾಲೆಯೊಂದು ತನ್ನ ವಿದ್ಯಾರ್ಥಿಗಳಿಗೆ ಬಿಸಿಲಿನ ಶಾಖದಿಂದ ಬಚಾವಾಗುವಂತೆ ಮಾಡಲು ತರಗತಿಯನ್ನೇ ಈಜುಕೊಳವನ್ನಾಗಿ ಮಾಡುವ ಮೂಲಕ ಉಷ್ಣ ಅಲೆಯನ್ನು ಎದುರಿಸಲು ವಿಭಿನ್ನವಾದ ವಿಧಾನವನ್ನು ಅಳವಡಿಸಿಕೊಂಡಿದೆ.

ಉತ್ತರ ಪ್ರದೇಶ ರಾಜ್ಯದಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಮಕ್ಕಳು ಶಾಲೆಗಳಿಗೆ ಬರಲು ಭಯಪಡುತ್ತಿದ್ದಾರೆ. ಇದರಿಂದ ಶಾಲೆಯಲ್ಲಿ ಹಾಜರಾತಿ ಕಡಿಮೆಯಾಗುತ್ತಿದೆ. ಇಲ್ಲಿನ ಕನ್ನೌಜ್ ಜಿಲ್ಲೆಯ ಪ್ರಾಥಮಿಕ ಶಾಲೆಯ ಪ್ರಾಂಶುಪಾಲರು ಇದಕ್ಕೆ ಪರಿಹಾರ ಕಂಡುಕೊಂಡಿದ್ದು, ಕ್ಲಾಸ್​ ರೂಂನಲ್ಲಿ ನೀರನ್ನು ತುಂಬಿದ್ದಾರೆ. ಕ್ಲಾಸ್​ ರೂಮನ್ನೇ ತಾತ್ಕಾಲಿಕ ಈಜುಕೊಳವನ್ನಾಗಿ ಮಾಡಿದ್ದಾರೆ. ಅಲ್ಲಿ ಮಕ್ಕಳು ನೀರಿನಲ್ಲಿ ಆಟವಾಡುತ್ತಲೇ ಪಾಠ ಕಲಿಯುತ್ತಾರೆ.

ಇದನ್ನೂ ಓದಿ: Karnataka Weather: ಉಷ್ಣ ಅಲೆಯ ನಡುವೆ ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಮಕ್ಕಳು ಕ್ಲಾಸ್​ ರೂಂನ ನೀರಿನಲ್ಲಿ ಆಟವಾಡುತ್ತಾ. ದೇಹದ ಬಿಸಿಯನ್ನು ತಂಪಾಗಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 2 ಅಡಿ ಆಳ ತುಂಬಿದ ನೀರಿನಲ್ಲಿ ವಿದ್ಯಾರ್ಥಿಗಳು ಖುಷಿಯಿಂದ ಆಟವಾಡುವುದನ್ನು ವಿಡಿಯೋದಲ್ಲಿ ನೋಡಬಹುದು.

ಬಿಸಿಲು ಹೆಚ್ಚಾದ ನಂತರ ಶಾಲೆಗೆ ಮಕ್ಕಳು ಬರುವುದು ಕಡಿಮೆಯಾಗಿತ್ತು. ಆದರೆ ಶಾಲೆಯ 1 ತರಗತಿಯಲ್ಲಿ ನೀರನ್ನು ತುಂಬಿದ ನಂತರ ಮಕ್ಕಳು ಶಾಲೆಗೆ ಬರಲು ಪ್ರಾರಂಭಿಸಿದರು. ಇಲ್ಲಿನ ಕೆಲವು ಪ್ರದೇಶಗಳಲ್ಲಿ ತಾಪಮಾನವು 45 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಭಾರತೀಯ ಹವಾಮಾನ ಇಲಾಖೆಯು ಉತ್ತರ ಪ್ರದೇಶದ ಕೆಲವೆಡೆ ರೆಡ್ ಮತ್ತು ಆರೆಂಜ್ ಅಲರ್ಟ್‌ಗಳನ್ನು ಘೋಷಿಸಿದ್ದಾರೆ. ಮುಂಬರುವ ದಿನಗಳಲ್ಲಿ ಹಲವಾರು ಪ್ರದೇಶಗಳಲ್ಲಿ ಮುಂದುವರೆಯುವ ನಿರೀಕ್ಷೆಯಿರುವ ಎಚ್ಚರಿಕೆಯನ್ನು ನೀಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ