AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಎಳನೀರು ಕುಡಿಯಲು ನಾಸಿಕ್​ಗೆ ಬಂದವಾ ಈ ಚಿರತೆಗಳು

Maharashtra : ಬೆಕ್ಕಿನಂತೆ ಸರಾಗವಾಗಿ ತೆಂಗಿನ ಮರವನ್ನು ಹತ್ತಿಳಿದ ಚಿರತೆಗಳನ್ನು ನೋಡಿ ನೆಟ್ಟಿಗರು ಚಕಿತಗೊಂಡಿದ್ದಾರೆ. ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

Viral Video : ಎಳನೀರು ಕುಡಿಯಲು ನಾಸಿಕ್​ಗೆ ಬಂದವಾ ಈ ಚಿರತೆಗಳು
ತೆಂಗಿನಮರ ಏರುತ್ತಿರುವ ಚಿರತೆಗಳು
TV9 Web
| Edited By: ಶ್ರೀದೇವಿ ಕಳಸದ|

Updated on:Sep 21, 2022 | 2:55 PM

Share

Viral Video : ಸಾಕಷ್ಟು ಕಾಡುಪ್ರಾಣಿಗಳು ನಾಡಿಗೆ ಬಂದ ವಿಡಿಯೋಗಳು ಈಗಾಗಲೇ ವೈರಲ್ ಆಗಿರುವುದನ್ನು ನೋಡಿದ್ದೀರಿ. ಅವು ಬರುವುದೇನಿದ್ದರೂ ಆಹಾರ ಹುಡುಕಿಕೊಂಡೇ. ಹೀಗೆ ಬರುವಾಗ ದಾರಿ ತಪ್ಪಿ ಊರೊಳಗೆ ನುಗ್ಗಿರುತ್ತವೆ. ಇಲ್ಲಿರುವ ಈ ವಿಡಿಯೋದಲ್ಲಿಯೂ ಹಾಗೇ ಆಗಿದೆ. ಈ ಚಿರತೆಗಳು ನಾಸಿಕ್​ಗೆ ಬಂದಿವೆ. ಬಂದು ಸರಸರನೆ ಬೆಕ್ಕಿನಂತೆ ತೆಂಗಿನ ಮರ ಏರಿವೆ, ಎಳನೀರು ಕುಡಿಯಲು ಅಲ್ಲ, ಅಲ್ಲಿ ಮನುಷ್ಯರ ಸುಳಿವು ಸಿಕ್ಕಿದ್ದರಿಂದ ಪ್ರಾಣಭಯದಿಂದ ತಪ್ಪಿಸಿಕೊಳ್ಳಲು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

67,000ಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿ ಅಚ್ಚರಿಪಟ್ಟಿದ್ದಾರೆ. ವಾಟ್ಸಪ್​ ಮೂಲಕ ಬಂದ ಈ ವಿಡಿಯೋ ಅನ್ನು  ಐಪಿಎಸ್ ಅಧಿಕಾರಿ ಪರ್ವೀನ್​ ಕಸ್ವಾನ್​ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿ, ‘ಇವುಗಳ ಚುರುಕುತನವೇ ಇವುಗಳ ವೈಶಿಷ್ಟ್ಯ. ಎಲ್ಲ ರೀತಿಯ ಪ್ರದೇಶಗಳಲ್ಲಿಯೂ ಇವು ಹೊಂದಿಕೊಳ್ಳುತ್ತವೆ. ರಾಜಸ್ಥಾನ ಮತ್ತು ರಾಕಿ ಬೆಟ್ಟಗಳಿಂದ ಈಶಾನ್ಯದ ಅರಣ್ಯ, ಮುಂಬೈ ಮತ್ತು ಗುರಗಾಂವ್​ ನಗರಗಳಿಂದ ಹಿಮಾಲಯದ ಭೂಪ್ರದೇಶಗಳಲ್ಲಿಯೂ ಇವು ವಾಸಿಸುತ್ತವೆ. ಆಹಾರಬೇಟೆಯಲ್ಲಿ ಅತೀ ಚುರುಕಾದ ಪ್ರಾಣಿಗಳು ಇವು’ ಎಂದಿದ್ದಾರೆ.

ಈ ಪೋಸ್ಟ್​ನಿಂದ ಪ್ರೇರಿತರಾದ ಅವರು ಮತ್ತೊಂದು ಪೋಸ್ಟ್​ ಟ್ವೀಟ್ ಮಾಡಿದ್ಧಾರೆ.

‘ಚಹಾ ತೋಟಗಳು ಮತ್ತು ಕಬ್ಬಿನ ತೋಟಗಳಲ್ಲಿ ಇವು ಹೆಚ್ಚಾಗಿ ಕಂಡುಬರುತ್ತವೆ. ಚಹಾ ತೋಟ ಇವುಗಳಿಗೆ ಬಹುನೆಚ್ಚಿನ ಜಾಗಗಳು. ಸುಲಭಕ್ಕೆ ಆಹಾರ ಅಲ್ಲಿ ದೊರಕುತ್ತದೆ. ವಿಶ್ರಾಂತಿಗಾಗಿ ನೆರಳು ಲಭ್ಯವಿರುತ್ತದೆ. ಮರಿಗಳನ್ನೂ ಆರಾಮವಾಗಿ ಸಾಕಬಹುದು’ ಎಂದು ತಾವು ತೆಗೆದ ಚಿರತೆಯ ಫೋಟೋ ಕೂಡ ಹಂಚಿಕೊಂಡಿದ್ದಾರೆ.

ವನ್ಯಲೋಕದ ವೈಶಿಷ್ಟ್ಯ ಅಪಾರ.

ಮತ್ತಷ್ಟು ವೈರಲ್​ ವಿಡಿಯೋಗಳಿಗಾಗಿ ಕ್ಲಿಕ್ ಮಾಡಿ

Published On - 2:53 pm, Wed, 21 September 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ