AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ಮುಟ್ಟಿನ ಬಗ್ಗೆ ಬಹಿರಂಗವಾಗಿ ಮಾತನಾಡಲು ಹಿಂಜರಿಯುತ್ತಿದ್ದ ಸಮಯದಲ್ಲಿ ತಾವು ಮಾಡಿದ್ದ ಜಾಹೀರಾತಿನ ವಿಡಿಯೋ ಹಂಚಿಕೊಂಡ ಸ್ಮೃತಿ ಇರಾನಿ

ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ, ತಮ್ಮ ದೈನಂದಿನ ಜೀವನ ಹಾಗೂ ವೃತ್ತಿ ಜೀವನದ ಆಸಕ್ತಿದಾಯಕ ಪೋಸ್ಟ್​ಗಳು ಹಾಗೂ ವಿಡಿಯೋಗಳನ್ನು ಸದಾ ಹಂಚಿಕೊಳ್ಳುತ್ತಿರುತ್ತಾರೆ.

Smriti Irani: ಮುಟ್ಟಿನ ಬಗ್ಗೆ ಬಹಿರಂಗವಾಗಿ ಮಾತನಾಡಲು ಹಿಂಜರಿಯುತ್ತಿದ್ದ ಸಮಯದಲ್ಲಿ ತಾವು ಮಾಡಿದ್ದ ಜಾಹೀರಾತಿನ ವಿಡಿಯೋ ಹಂಚಿಕೊಂಡ ಸ್ಮೃತಿ ಇರಾನಿ
ಸ್ಮೃತಿ ಇರಾನಿ
ನಯನಾ ರಾಜೀವ್
|

Updated on:May 05, 2023 | 11:49 AM

Share

ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ, ತಮ್ಮ ದೈನಂದಿನ ಜೀವನ ಹಾಗೂ ವೃತ್ತಿ ಜೀವನದ ಆಸಕ್ತಿದಾಯಕ ಪೋಸ್ಟ್​ಗಳು ಹಾಗೂ ವಿಡಿಯೋಗಳನ್ನು ಸದಾ ಹಂಚಿಕೊಳ್ಳುತ್ತಿರುತ್ತಾರೆ. ಸ್ಮೃತಿ ಇರಾನಿ ಆಗಾಗ ತಮ್ಮ ಹಳೆಯ ನೆನಪುಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಮತ್ತು ವಿಶೇಷವಾಗಿ ತಮ್ಮ ನಟನೆಯ ದಿನಗಳು ಮತ್ತು ಶೂಟಿಂಗ್‌ಗೆ ಸಂಬಂಧಿಸಿದ ನೆನಪುಗಳನ್ನು ಹಂಚಿಕೊಳ್ಳುತ್ತಾರೆ.  ಈ ಬಾರಿಯೂ ಅದನ್ನೇ ಮಾಡಿದ್ದಾರೆ. ಈ ವೇಳೆ ಸ್ಮೃತಿ ಇರಾನಿ ತಮ್ಮ ಮೊದಲ ಜಾಹೀರಾತಿನ ವಿಡಿಯೋವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಸ್ಮೃತಿ ಇರಾನಿ ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವೇಗವಾಗಿ ವೈರಲ್ ಆಗುತ್ತಿದೆ. ಕುತೂಹಲಕಾರಿ ಸಂಗತಿಯೆಂದರೆ, ಮುಟ್ಟಿನ ಬಗ್ಗೆ ಬಹಿರಂಗವಾಗಿ ಮಾತನಾಡಲು ಜನರು ಹಿಂದೆ ಸರಿಯುತ್ತಿದ್ದ  ಸಂದರ್ಭದಲ್ಲಿ 25 ವರ್ಷಗಳ ಹಿಂದೆ ಸ್ಮೃತಿ ಇರಾನಿ ಯಾವುದೇ ಹಿಂಜರಿಕೆಯಿಲ್ಲದೆ ಜಾಹೀರಾತೊಂದನ್ನು ಮಾಡಿದ್ದರು. ಮುಟ್ಟಿನ ನೈರ್ಮಲ್ಯಕ್ಕೆ ಸಂಬಂಧಿಸಿದ ಜಾಹೀರಾತು ಅದಾಗಿದೆ.’

ಮತ್ತಷ್ಟು ಓದಿ: ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಸ್ಮೃತಿ ಇರಾನಿ ರ‍್ಯಾಂಪ್ ವಾಕ್ ; 25 ವರ್ಷಗಳ ಹಿಂದಿನ ವಿಡಿಯೊ ವೈರಲ್

ಸ್ಮೃತಿ ಇರಾನಿ ಅವರು ಪಾರ್ಸಿ ಉದ್ಯಮಿ ಜುಬಿನ್ ಇರಾನಿ ಅವರನ್ನು ವಿವಾಹವಾಗಿದ್ದಾರೆ ಇಬ್ಬರು ಮಕ್ಕಳಿದ್ದಾರೆ. ಸ್ಮೃತಿ ಇರಾನಿ ಅವರು 1998 ರಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಹಿರಿಯ ತಾರೆ 2000ರಲ್ಲಿ ದೂರದರ್ಶನಕ್ಕೆ ಪಾದಾರ್ಪಣೆ ಮಾಡಿದರು ಮತ್ತು ಯಶಸ್ವಿ ನಟಿ ಎನಿಸಿಕೊಂಡರು.

‘ಆತೀಶ್’, ‘ಹಮ್ ಹೈ ಕಲ್ ಆಜ್ ಔರ್ ಕಲ್’, ‘ರಾಮಾಯಣ’, ‘ವಿರುಧ್: ಹರ್ ರಿಶ್ತಾ ಏಕ್ ಕುರುಕ್ಷೇತ್ರ’, ‘ಮಣಿಬೆನ್.ಕಾಮ್’ ಮತ್ತು ‘ಥೋಡಿ ಸಿ ಜಮೀನ್ ಥೋಡಾ ಸಾ ಆಸ್​ಮಾನ್’ ನಂತಹ ಜನಪ್ರಿಯ ದೂರದರ್ಶನ ಕಾರ್ಯಕ್ರಮಗಳಲ್ಲಿ ಸ್ಮೃತಿ ತಮ್ಮ ನಟನಾ ಕೌಶಲ್ಯವನ್ನು ತೋರಿಸಿದ್ದಾರೆ. ಹೌದು ನಾನು ಆಗ ತುಂಬಾ ತೆಳ್ಳಗಿದ್ದೆ ದಯವಿಟ್ಟು ಅದನ್ನು ನೆನಪಿಸಬೇಡಿ ಎಂದು ನಗೆ ಚಟಾಕಿ ಹಾರಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Fri, 5 May 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ