AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಗಿದ್ದ ಮಹಿಳೆಯ ತಲೆಕೂದಲೊಳಗೆ ಹರಿದಾಡಿದ ಹಾವು, ವಿಡಿಯೋ ವೈರಲ್

ಹಾವು ಎಂದ ಕೂಡಲೇ ಮೈ ಒಮ್ಮೆ ಜುಮ್ಮೆನ್ನುವುದು, ಆದರೆ ಮಹಿಳೆಯ ತಲೆ ಕೂದಲೊಳಗೆ ಹಾವು ಹರಿದಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾವು ಹೆಚ್ಚಾಗಿ ಮನುಷ್ಯರಿರುವ ಕಡೆಯಲ್ಲಿ ಇರುವುದಿಲ್ಲ, ಹುಲ್ಲುಗಾವಲು, ಇಲಿಯ ಬಿಲ, ಹೀಗೆ ಎಲ್ಲೆಲ್ಲೋ ಇರುತ್ತವೆ. ಆದರೆ ಈ ಯುವತಿಯ ತಲೆಕೂದಲಿನಲ್ಲಿ ಹಾವು ಹರಿದಾಡುವ ವಿಡಿಯೋ ನೋಡಿದಾಗ ಆಶ್ಚರ್ಯವಾಗುವುದು ಸತ್ಯ.

ಮಲಗಿದ್ದ ಮಹಿಳೆಯ ತಲೆಕೂದಲೊಳಗೆ ಹರಿದಾಡಿದ ಹಾವು, ವಿಡಿಯೋ ವೈರಲ್
ಹಾವು
ನಯನಾ ರಾಜೀವ್
|

Updated on: Jul 28, 2024 | 2:29 PM

Share

ಹಾವು ಎಂದ ಕೂಡಲೇ ಮೈ ಒಮ್ಮೆ ಜುಮ್ಮೆನ್ನುವುದು, ಮಹಿಳೆಯ ತಲೆ ಕೂದಲೊಳಗೆ ಹಾವು ಹರಿದಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಹಾವು ಹೆಚ್ಚಾಗಿ ಮನುಷ್ಯರಿರುವ ಕಡೆಯಲ್ಲಿ ಇರುವುದಿಲ್ಲ, ಹುಲ್ಲುಗಾವಲು, ಇಲಿಯ ಬಿಲ, ಹೀಗೆ ಎಲ್ಲೆಲ್ಲೋ ಇರುತ್ತವೆ. ಆದರೆ ಈ ಯುವತಿಯ ತಲೆಕೂದಲಿನಲ್ಲಿ ಹಾವು ಹರಿದಾಡುವ ವಿಡಿಯೋ ನೋಡಿದಾಗ ಆಶ್ಚರ್ಯವಾಗುವುದು ಸತ್ಯ.

ಅಷ್ಟು ದೊಡ್ಡ ಹಾವು ಕೂದಲಿನೊಳಗೆ ಓಡಾಡಿದರೂ ಆಕೆಗೆ ಗೊತ್ತೇ ಆಗಿಲ್ಲವೇ ಎಂಬುದು. ಈ ವಿಡಿಯೋ ಎಲ್ಲಿಯದು ಎಂಬುದು ತಿಳಿದಿಲ್ಲ, ಆಕೆ ಮಲಗಿದ್ದಾಗ ಕೂದಲೊಳಗೆ ಹಾವು ಹರಿದಾಡುವುದನ್ನು ಕಾಣಬಹುದು. ಯುವತಿ ಹಾವಿಗೆ ಹೆದರಿದಂತೆ ಕಾಣುತ್ತಿಲ್ಲ.

ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಎರಡು ಕೈಗಳ ಮೇಲೆ ತಲೆಯಿಟ್ಟು ಮಲಗಿದ್ದಾರೆ. ಗಾಢ ನಿದ್ದೆಯಲ್ಲಿದ್ದ ಆಕೆಯ ತಲೆಯ ಮೇಲೆ ಹಾವೊಂದು ಹರಿದಾಡುತ್ತಿದೆ. ಈ ಹಾವು ಮಹಿಳೆಯ ಕೂದಲಿಗೆ ಸುತ್ತಿ ತಲೆಯ ಹಿಂಭಾಗಕ್ಕೆ ತೆವಳಲು ಪ್ರಯತ್ನಿಸುತ್ತಿದೆ. ಅಚ್ಚರಿಯ ವಿಷಯವೆಂದರೆ ಮಹಿಳೆಗೆ ತನ್ನ ಕೂದಲಿನಲ್ಲಿ ಅಪಾಯಕಾರಿ ಜೀವಿ ಇದೆ ಎಂಬ ಕಲ್ಪನೆಯೇ ಇರುವುದಿಲ್ಲ. ನೀವೂ ಈ ವಿಡಿಯೋ ನೋಡಲೇಬೇಕು.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ನೋಡಿದ ಬಳಕೆದಾರರೂ ಅಚ್ಚರಿಗೊಂಡಿದ್ದಾರೆ. ಕಾಶಿಕ್ಯಾತ್ರ ಖಾತೆಯಿಂದ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದುವರೆಗೆ 27 ಮಿಲಿಯನ್ ಅಂದರೆ 27 ಲಕ್ಷಕ್ಕೂ ಹೆಚ್ಚು ಜನ ನೋಡಿದ್ದಾರೆ. ಈ ವಿಡಿಯೋವನ್ನು ಇದುವರೆಗೆ 2 ಲಕ್ಷ 26 ಸಾವಿರ ಬಳಕೆದಾರರು ಲೈಕ್ ಮಾಡಿದ್ದಾರೆ. ವೀಡಿಯೊಗೆ ಕಾಮೆಂಟ್ ಮಾಡಿದ ಬಳಕೆದಾರರು ಮಿಶ್ರ ಪ್ರತಿಕ್ರಿಯೆಗಳನ್ನು ನೀಡಿದರು.

View this post on Instagram

A post shared by kAshiKyaTrA (@kashikyatra)

ಇದಕ್ಕೆ ಯಾರೋ ಅಚ್ಚರಿ ವ್ಯಕ್ತಪಡಿಸಿದ್ದು, ಈ ಹಾವು ನಕಲಿ ಅಲ್ಲ ಎಂದು ಯಾರೋ ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು ಈ ಹಾವು ವಿಷಕಾರಿಯಲ್ಲ ಕಚ್ಚುವುದಿಲ್ಲ ಎಂದು ಬರೆದಿದ್ದಾರೆ.

ಮತ್ತಷ್ಟು ಓದಿ: ಮನೆಯ ಮಂಚದ ಕೆಳಗೆ ಹರಿದಾಡುತ್ತಿದ್ವು 16ಕ್ಕೂ ಹೆಚ್ಚು ನಾಗರ ಹಾವುಗಳು, 32 ಮೊಟ್ಟೆಗಳು ಪತ್ತೆ

ಮತ್ತೊಂದು ಘಟನೆ ಮುಜಾಫರ್​ಪುರ ಜಿಲ್ಲೆಯ ಸರೈಯಾ ಬ್ಲಾಕ್​ನ ಖೈರಾ ಗ್ರಾಮದಲ್ಲಿ ಇಂಥದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಮನೆಯೊಂದರಲ್ಲಿ 16 ನಾಗರ ಹಾವುಗಳು ಪತ್ತೆಯಾಗಿವೆ ಅಷ್ಟೇ ಅಲ್ಲದೆ 32 ಮೊಟ್ಟೆಗಳು ಕೂಡ ಇದ್ದವು. ಇದನ್ನು ನೋಡಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಬೆಚ್ಚಿಬಿದ್ದಿದ್ದಾರೆ. ಸರಯ್ಯ ಬ್ಲಾಕ್‌ನ ಖೈರಾ ಗ್ರಾಮದ ನಿವಾಸಿ ಸಂಜೀತ್ ಮಹತೋ ಎಂಬುವವರ ಮನೆಯಲ್ಲಿ ಕಳೆದ ಎರಡು ದಿನಗಳಿಂದ ಹಾವುಗಳು ಕಾಣಿಸಿಕೊಳ್ಳುತ್ತಿದ್ದವು. ಮಳೆ ನೀರು ನುಗ್ಗಿದ್ದರಿಂದ ಹಾವುಗಳು ಬಂದಿವೆ ಎಂದು ಅವರು ಭಾವಿಸಿದ್ದರು. ಈ ವೇಳೆ ಹನ್ನೆರಡು ಹಾವಿನ ಮರಿಗಳನ್ನು ಹಿಡಿದು ಹೊಲಕ್ಕೆ ಬಿಡಲಾಯಿತು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?