AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ರಾಕ್ಷಸನಂತೆ ವೃದ್ಧ ತಂದೆಯನ್ನು ಥಳಿಸಿದ ಮಗ,ನೆಟ್ಟಿಗರು ಫುಲ್ ಗರಂ!

ಮಗುವನ್ನು ಜಗತ್ತಿಗೆ ಪರಿಚಯಿಸಿದವಳು ತಾಯಿಯಾದರೆ, ಜಗತ್ತನ್ನು ಪರಿಚಯಿಸಿದವನು ತಂದೆ. ಅಪ್ಪ ಎನ್ನುವ ಅದ್ಭುತ ವ್ಯಕ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅಪ್ಪ ಮಗನ ಪ್ರೀತಿ ಹಾಗೂ ಬಾಂಧವ್ಯವನ್ನು ಸಾರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಮಗನು ತಂದೆಗೆ ಥಳಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೆಟ್ಟಿಗರು ಗರಂ ಆಗಿದ್ದಾರೆ.

Viral Video : ರಾಕ್ಷಸನಂತೆ ವೃದ್ಧ ತಂದೆಯನ್ನು ಥಳಿಸಿದ ಮಗ,ನೆಟ್ಟಿಗರು ಫುಲ್ ಗರಂ!
ವೃದ್ಧ ತಂದೆಯನ್ನು ಥಳಿಸಿದ ಮಗ
ಸಾಯಿನಂದಾ
| Edited By: |

Updated on: Apr 28, 2024 | 4:21 PM

Share

ಪ್ರತಿಯೊಬ್ಬರ ಜೀವನದಲ್ಲಿ ತಂದೆ ತಾಯಿಯರ ಪಾತ್ರ ಅಗಾಧವಾಗಿದೆ. ಮಕ್ಕಳ ಏಳಿಗೆಯನ್ನು ಸದಾ ಬಯಸುವ ತಂದೆ ತಾಯಂದಿರು ಮಕ್ಕಳ ಸುಖ ಸಂತೋಷಕ್ಕಾಗಿ ತಮ್ಮ ಆಸೆಯನ್ನು ತ್ಯಾಗ ಮಾಡುತ್ತಾರೆ. ಹೀಗಾಗಿ ಈ ಜಗತ್ತಿನಲ್ಲಿ ಕೆಟ್ಟ ಮಕ್ಕಳು ಬೇಕಾದರೂ ಇರಬಹುದು, ಆದರೆ ಕೆಟ್ಟ ತಂದೆ ತಾಯಿ ಇರಲ್ಲ ಎನ್ನುವ ಮಾತಿದೆ. ಆದರೆ ಈಗಿನ ಕಾಲದಲ್ಲಿ ಹೆತ್ತತಂದೆ ತಾಯಿಯನ್ನು ಕಡೆಗಣಿಸುವವರಿಗೇನು ಕೊರತೆಯಿಲ್ಲ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಗನೊಬ್ಬನು ತಂದೆಗೆ ಥಳಿಸಿದ್ದಾನೆ.

ಇವ ಕಾತಿರವನ್ ಎನ್ನುವ ಹೆಸರಿನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಈ ವಿಡಿಯೋದ ಪ್ರಾರಂಭದಲ್ಲಿ ಮನೆಯ ಸಿಟ್ ಔಟ್ ನಲ್ಲಿ ಕುಳಿತ ವೃದ್ಧ ತಂದೆಯಲ್ಲಿಗೆ ಬಂದ ಮಗನು ಮನಬಂದಂತೆ ಥಳಿಸಿದ್ದಾನೆ. ಅಲ್ಲೇ ಇದ್ದ ವ್ಯಕ್ತಿಯು ಥಳಿಸುತ್ತಿದ್ದ ವ್ಯಕ್ತಿಯನ್ನು ಅಲ್ಲಿಂದ ಕರೆದುಕೊಂಡು ಹೋಗಲು ಯತ್ನಿಸಿದ್ದಾನೆ. ಮಗನ ಕೈಯಿಂದ ಹೊಡೆಸಿಕೊಂಡ ವ್ಯಕ್ತಿಯು ಪ್ರಜ್ಞೆ ತಪ್ಪಿ ಬಿದ್ದಿದ್ದು, ಬಾಯಿಂದ ರಕ್ತ ಹೊರ ಬರುತ್ತಿರುವುದನ್ನು ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅಂಬಾನಿ ಮನೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುವ ‘ಆಮ್ ಮನೋರಥ’ ಹಬ್ಬದ ಬಗ್ಗೆ ಇಲ್ಲಿದೆ ಮಾಹಿತಿ

ಅಲ್ಲೇ ಇದ್ದ ಮಹಿಳೆಯು ವ್ಯಕ್ತಿಯನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದ್ದು, ಈ ವಿಡಿಯೋಗೆ ನಾನಾ ರೀತಿಯ ಕಾಮೆಂಟ್ ಗಳು ವ್ಯಕ್ತವಾಗಿದ್ದು, ಬಳಕೆದಾರರೊಬ್ಬರು, ‘ದಯವಿಟ್ಟು ಈತನನ್ನು ಬಂಧಿಸಿ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಈತನನ್ನು ಕೂಡಲೇ ಬಂಧಿಸಿ, ಈತನಿಗೆ ತಂದೆಯ ಪ್ರೀತಿಯೇನು ಎಂಬುದು ತಿಳಿದಿಲ್ಲ’ ಎಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ