AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಥಳಿಸಿದ ವಿದ್ಯಾರ್ಥಿನಿ

ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಯುವಕ ಕೆಲದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದು ತಿಳಿದುಬಂದಿದೆ. ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

Viral Video: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಥಳಿಸಿದ ವಿದ್ಯಾರ್ಥಿನಿ
ಅಕ್ಷತಾ ವರ್ಕಾಡಿ
|

Updated on: Aug 16, 2024 | 11:14 AM

Share

ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಬಾಲಕಿ ಯವಕನಿಗೆ ಮನಬಂದಂತೆ ಬೆಲ್ಟ್​​​​ನಲ್ಲಿ ಬಾರಿಸುತ್ತಿರುವುದನ್ನು ಕಾಣಬಹುದು. ಯುವಕ ಕೆಲದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಯುವಕನಿಗೆ ನಡುರಸ್ತೆಯಲ್ಲಿ ಥಳಿಸಿರುವುದಾಗಿ ವರದಿಯಾಗಿದೆ. ಈ ಘಟನೆ ಅಹ್ಮದಾಬಾದ್‍ನಲ್ಲಿ ನಡೆದಿದೆ.

@gharkekalesh ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಗಸ್ಟ್​​​ 15ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 2.2 ಮಿಲಿಯನ್​​ ಅಂದರೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಈ ವಿಡಿಯೊದಲ್ಲಿ , ಯುವಕ ನಡು ರಸ್ತೆಯಲ್ಲಿ ಬಿದ್ದಿದ್ದು, ಶಾಲಾ ಸಮವಸ್ತ್ರ ಧರಿಸಿದ ಬಾಲಕಿಯೊಬ್ಬಳು ಬೆಲ್ಟ್ ನಿಂದ ಹೊಡೆಯುತ್ತಿದ್ದರೆ, ಇನ್ನೊಬ್ಬಳು ಅಲ್ಲಿ ನಿಂತಿದ್ದ ಜನರ ಮುಂದೆ ಆತನ ನೀಚತನವನ್ನು ಬಯಲಿಗೆಳೆಯುತ್ತಿದ್ದಾಳೆ. ಇದೀಗ ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಲೈಂಗಿಕ ಕಿರುಕುಳ ನೀಡುವವರನ್ನು ಇದೇ ರೀತಿ ನಡು ರಸ್ತೆಯಲ್ಲೇ ಅವಮಾನಿಸಬೇಕು, ಮಹಿಳೆಯರು ಯಾವತ್ತೂ ಮಾನ ಮಾರ್ಯದೆಗೆ ಅಂಜಿ ಹಿಂಜರಿಯಬಾರದು” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?