AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಥಳಿಸಿದ ವಿದ್ಯಾರ್ಥಿನಿ

ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಯುವಕ ಕೆಲದಿನಗಳಿಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬುದು ತಿಳಿದುಬಂದಿದೆ. ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

Viral Video: ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನನ್ನು ನಡು ರಸ್ತೆಯಲ್ಲಿ ಥಳಿಸಿದ ವಿದ್ಯಾರ್ಥಿನಿ
ಅಕ್ಷತಾ ವರ್ಕಾಡಿ
|

Updated on: Aug 16, 2024 | 11:14 AM

Share

ಶಾಲಾ ಸಮವಸ್ತ್ರ ತೊಟ್ಟಿರುವ ಬಾಲಕಿಯೊಬ್ಬಳು ನಡು ರಸ್ತೆಯಲ್ಲೇ ಯುವಕನನ್ನು ಥಳಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ವಿಡಿಯೋದಲ್ಲಿ ಬಾಲಕಿ ಯವಕನಿಗೆ ಮನಬಂದಂತೆ ಬೆಲ್ಟ್​​​​ನಲ್ಲಿ ಬಾರಿಸುತ್ತಿರುವುದನ್ನು ಕಾಣಬಹುದು. ಯುವಕ ಕೆಲದಿನಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಯುವಕನಿಗೆ ನಡುರಸ್ತೆಯಲ್ಲಿ ಥಳಿಸಿರುವುದಾಗಿ ವರದಿಯಾಗಿದೆ. ಈ ಘಟನೆ ಅಹ್ಮದಾಬಾದ್‍ನಲ್ಲಿ ನಡೆದಿದೆ.

@gharkekalesh ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಆಗಸ್ಟ್​​​ 15ರಂದು ಹಂಚಿಕೊಂಡಿರುವ ವಿಡಿಯೋ ಒಂದೇ ದಿನದಲ್ಲಿ 2.2 ಮಿಲಿಯನ್​​ ಅಂದರೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಮತ್ತಷ್ಟು ಓದಿ: ಪತ್ನಿಗೆ ಫೋನ್‌ನಲ್ಲೇ ತಲಾಖ್ ನೀಡಿ ಪಾಕಿಸ್ತಾನದ ಯುವತಿಯನ್ನು ವರಿಸಿದ ಭಾರತದ ವ್ಯಕ್ತಿ

ಈ ವಿಡಿಯೊದಲ್ಲಿ , ಯುವಕ ನಡು ರಸ್ತೆಯಲ್ಲಿ ಬಿದ್ದಿದ್ದು, ಶಾಲಾ ಸಮವಸ್ತ್ರ ಧರಿಸಿದ ಬಾಲಕಿಯೊಬ್ಬಳು ಬೆಲ್ಟ್ ನಿಂದ ಹೊಡೆಯುತ್ತಿದ್ದರೆ, ಇನ್ನೊಬ್ಬಳು ಅಲ್ಲಿ ನಿಂತಿದ್ದ ಜನರ ಮುಂದೆ ಆತನ ನೀಚತನವನ್ನು ಬಯಲಿಗೆಳೆಯುತ್ತಿದ್ದಾಳೆ. ಇದೀಗ ವಿಡಿಯೋ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಲೈಂಗಿಕ ಕಿರುಕುಳ ನೀಡುವವರನ್ನು ಇದೇ ರೀತಿ ನಡು ರಸ್ತೆಯಲ್ಲೇ ಅವಮಾನಿಸಬೇಕು, ಮಹಿಳೆಯರು ಯಾವತ್ತೂ ಮಾನ ಮಾರ್ಯದೆಗೆ ಅಂಜಿ ಹಿಂಜರಿಯಬಾರದು” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ