AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ವಿದ್ಯೆಯ ಜೊತೆಗೆ ಮಾನವೀಯ ಮೌಲ್ಯಗಳ ಕಲಿಕೆ; ಈ ವಿಡಿಯೋ ಒಮ್ಮೆ ನೋಡಿ

ಶಿಕ್ಷಣ ಎಂದಾಕ್ಷಣ ಬರೀ ಹೆಚ್ಚು ಅಂಕ ಪಡೆಯುವುದು ಮಾತ್ರವಲ್ಲ, ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ನೀಡುವುದು ಕೂಡ ಶಿಕ್ಷಣ ಎಂಬುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಈ ಪುಟ್ಟ ಮಕ್ಕಳ ಈ ವಿಡಿಯೋ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಮಕ್ಕಳಿಗೆ ವಿದ್ಯೆಯ ಜೊತೆಗೆ ಮಾನವೀಯ ಮೌಲ್ಯಗಳ ಕಲಿಕೆ; ಈ ವಿಡಿಯೋ ಒಮ್ಮೆ ನೋಡಿ
Viral VideoImage Credit source: Twitter
ಅಕ್ಷತಾ ವರ್ಕಾಡಿ
|

Updated on:Jan 20, 2024 | 3:21 PM

Share

ಶಿಕ್ಷಣ ಎಂದಾಕ್ಷಣ ಪೋಷಕರು ಮಕ್ಕಳಿಗೆ ಹೆಚ್ಚು ಅಂಕ ಪಡೆಯಲು ಒತ್ತಾಯಿಸುತ್ತಾರೆ ಹೊರತು ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡುವುದನ್ನು ಮರೆಯುತ್ತಾರೆ. ಹೆಚ್ಚು ಅಂಕಗಳನ್ನು ಪಡೆದರೆ ಮಾತ್ರ ಸಾಲದು, ಅದರ ಜೊತೆಗೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಕೂಡ ಅಷ್ಟೇ ಅಗತ್ಯವಾಗಿರುತ್ತದೆ.  ಮಾನವೀಯತೆ ಇಲ್ಲದ ವಿದ್ಯೆ , ಮೆದುಳಿಲ್ಲದ ತಲೆಗೆ ಸಮಾನ ಎಂಬ ಮಾತಿಗೆ. ಕೆಲತಿಂಗಳುಗಳ ಹಿಂದೆಯಷ್ಟೇ ಕಿಕ್ಕಿರಿದು ತುಂಬಿದ್ದ ಸರಕಾರಿ ಬಸ್ ನಲ್ಲಿ ಸೀಟ್ ಸಿಗದೇ ವೃದ್ಧೆಯೊಬ್ಬರು ತನ್ನ ಮೊಮ್ಮಗುವನ್ನು ಎತ್ತಿಕೊಂಡು ಬಸ್ ನ ಫುಟ್ ಬೋರ್ಡಿನಲ್ಲೇ ಕುಳಿತು ಪ್ರಯಾಣಿಸುವ ಅಮಾನವೀಯ ಘಟನೆ ಕೊಪ್ಪಳದಲ್ಲಿ ವರದಿಯಾಗಿತ್ತು. ಕಣ್ಣಿದ್ದೂ ಕುರುಡರಂತೆ ಆಡುವ ಜನಗಳ ಮಧ್ಯೆ ಇದೀಗಾ  ಈ ಪುಟ್ಟ ಮಕ್ಕಳ ಈ ವಿಡಿಯೋವೊಂದು ಸಾಕಷ್ಟು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಶಿಕ್ಷಣ ಎಂದಾಕ್ಷಣ ಬರೀ ಹೆಚ್ಚು ಅಂಕ ಪಡೆಯುವುದು ಮಾತ್ರವಲ್ಲ, ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ನೀಡುವುದು ಕೂಡ ಉತ್ತಮ ಶಿಕ್ಷಣ ಎಂಬುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಇಲ್ಲಿ ತರಗತಿಯಲ್ಲಿ ಬಸ್​​ ರೀತಿಯಲ್ಲಿ ವಾತಾವರಣ ಸೃಷ್ಟಿಸಿದ್ದು, ಅಲ್ಲಿ ಮಕ್ಕಳೆಲ್ಲಾ ಸೀಟಿನಲ್ಲಿ ಕುಳಿತಿರುವುದು ಕಾಣಬಹುದು. ಹಿರಿಯರು, ಗರ್ಭಿಣಿಯರು ಹಾಗೂ ಅಂಗವಿಕರು ಬಂದಾಗ ಅವರಿಗೆ ಹೇಗೆ ಎದ್ದು ಸೀಟು ಬಿಟ್ಟುಕೊಡಬೇಕು ಎಂಬುದನ್ನು ಇಲ್ಲಿ ಮಕ್ಕಳಿಗೆ ವಿವರಿಸಲಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಈ ವಿಡಿಯೋವನ್ನು @Vinod_r108 ಎಂಬ ‘X'(ಟ್ವಿಟರ್​​) ಖಾತೆಯಲ್ಲಿ ಜನವರಿ 19 ರಂದು ಹಂಚಿಕೊಳ್ಳಲಾಗಿದ್ದು, ಇದೀಗಾಗಲೇ 50 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು “ಉತ್ತಮ ಸಂದೇಶವನ್ನು ನೀಡುವ ವಿಡಿಯೋ” ಎಂದು ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Sat, 20 January 24

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​