AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಿಗೆ ವಿದ್ಯೆಯ ಜೊತೆಗೆ ಮಾನವೀಯ ಮೌಲ್ಯಗಳ ಕಲಿಕೆ; ಈ ವಿಡಿಯೋ ಒಮ್ಮೆ ನೋಡಿ

ಶಿಕ್ಷಣ ಎಂದಾಕ್ಷಣ ಬರೀ ಹೆಚ್ಚು ಅಂಕ ಪಡೆಯುವುದು ಮಾತ್ರವಲ್ಲ, ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ನೀಡುವುದು ಕೂಡ ಶಿಕ್ಷಣ ಎಂಬುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಈ ಪುಟ್ಟ ಮಕ್ಕಳ ಈ ವಿಡಿಯೋ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಮಕ್ಕಳಿಗೆ ವಿದ್ಯೆಯ ಜೊತೆಗೆ ಮಾನವೀಯ ಮೌಲ್ಯಗಳ ಕಲಿಕೆ; ಈ ವಿಡಿಯೋ ಒಮ್ಮೆ ನೋಡಿ
Viral VideoImage Credit source: Twitter
ಅಕ್ಷತಾ ವರ್ಕಾಡಿ
|

Updated on:Jan 20, 2024 | 3:21 PM

Share

ಶಿಕ್ಷಣ ಎಂದಾಕ್ಷಣ ಪೋಷಕರು ಮಕ್ಕಳಿಗೆ ಹೆಚ್ಚು ಅಂಕ ಪಡೆಯಲು ಒತ್ತಾಯಿಸುತ್ತಾರೆ ಹೊರತು ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡುವುದನ್ನು ಮರೆಯುತ್ತಾರೆ. ಹೆಚ್ಚು ಅಂಕಗಳನ್ನು ಪಡೆದರೆ ಮಾತ್ರ ಸಾಲದು, ಅದರ ಜೊತೆಗೆ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದು ಕೂಡ ಅಷ್ಟೇ ಅಗತ್ಯವಾಗಿರುತ್ತದೆ.  ಮಾನವೀಯತೆ ಇಲ್ಲದ ವಿದ್ಯೆ , ಮೆದುಳಿಲ್ಲದ ತಲೆಗೆ ಸಮಾನ ಎಂಬ ಮಾತಿಗೆ. ಕೆಲತಿಂಗಳುಗಳ ಹಿಂದೆಯಷ್ಟೇ ಕಿಕ್ಕಿರಿದು ತುಂಬಿದ್ದ ಸರಕಾರಿ ಬಸ್ ನಲ್ಲಿ ಸೀಟ್ ಸಿಗದೇ ವೃದ್ಧೆಯೊಬ್ಬರು ತನ್ನ ಮೊಮ್ಮಗುವನ್ನು ಎತ್ತಿಕೊಂಡು ಬಸ್ ನ ಫುಟ್ ಬೋರ್ಡಿನಲ್ಲೇ ಕುಳಿತು ಪ್ರಯಾಣಿಸುವ ಅಮಾನವೀಯ ಘಟನೆ ಕೊಪ್ಪಳದಲ್ಲಿ ವರದಿಯಾಗಿತ್ತು. ಕಣ್ಣಿದ್ದೂ ಕುರುಡರಂತೆ ಆಡುವ ಜನಗಳ ಮಧ್ಯೆ ಇದೀಗಾ  ಈ ಪುಟ್ಟ ಮಕ್ಕಳ ಈ ವಿಡಿಯೋವೊಂದು ಸಾಕಷ್ಟು ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.

ಶಿಕ್ಷಣ ಎಂದಾಕ್ಷಣ ಬರೀ ಹೆಚ್ಚು ಅಂಕ ಪಡೆಯುವುದು ಮಾತ್ರವಲ್ಲ, ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ನೀಡುವುದು ಕೂಡ ಉತ್ತಮ ಶಿಕ್ಷಣ ಎಂಬುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ. ಇಲ್ಲಿ ತರಗತಿಯಲ್ಲಿ ಬಸ್​​ ರೀತಿಯಲ್ಲಿ ವಾತಾವರಣ ಸೃಷ್ಟಿಸಿದ್ದು, ಅಲ್ಲಿ ಮಕ್ಕಳೆಲ್ಲಾ ಸೀಟಿನಲ್ಲಿ ಕುಳಿತಿರುವುದು ಕಾಣಬಹುದು. ಹಿರಿಯರು, ಗರ್ಭಿಣಿಯರು ಹಾಗೂ ಅಂಗವಿಕರು ಬಂದಾಗ ಅವರಿಗೆ ಹೇಗೆ ಎದ್ದು ಸೀಟು ಬಿಟ್ಟುಕೊಡಬೇಕು ಎಂಬುದನ್ನು ಇಲ್ಲಿ ಮಕ್ಕಳಿಗೆ ವಿವರಿಸಲಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

ಈ ವಿಡಿಯೋವನ್ನು @Vinod_r108 ಎಂಬ ‘X'(ಟ್ವಿಟರ್​​) ಖಾತೆಯಲ್ಲಿ ಜನವರಿ 19 ರಂದು ಹಂಚಿಕೊಳ್ಳಲಾಗಿದ್ದು, ಇದೀಗಾಗಲೇ 50 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು “ಉತ್ತಮ ಸಂದೇಶವನ್ನು ನೀಡುವ ವಿಡಿಯೋ” ಎಂದು ಬರೆದುಕೊಂಡಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗುತ್ತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Sat, 20 January 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ