AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಉದ್ದೇಶಪೂರ್ವಕವಾಗಿ ವೃದ್ಧನ ಮೇಲೆ ಕಾರು ಹತ್ತಿಸಿದ ಚಾಲಕ; ಶಾಕಿಂಗ್ ವಿಡಿಯೋ ವೈರಲ್

Shocking Video: ಗಾಜಿಯಾಬಾದ್‌ನಲ್ಲಿ ಕಾರು ಕಿರಿದಾದ ಲೇನ್‌ಗೆ ಬಂದು ನಂತರ ತನ್ನ ಮನೆಯ ಹೊರಗೆ ರಸ್ತೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸುತ್ತಿರುವ ವ್ಯಕ್ತಿಯ ಕಡೆಗೆ ವೇಗವಾಗಿ ಬಂದ ಕಾರು ಕಣ್ಮುಚ್ಚಿ ಬಿಡುವಷ್ಟರಲ್ಲಿ ಆ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ.

Viral Video: ಉದ್ದೇಶಪೂರ್ವಕವಾಗಿ ವೃದ್ಧನ ಮೇಲೆ ಕಾರು ಹತ್ತಿಸಿದ ಚಾಲಕ; ಶಾಕಿಂಗ್ ವಿಡಿಯೋ ವೈರಲ್
ಕಾರ ವೃದ್ಧನಿಗೆ ಡಿಕ್ಕಿ ಹೊಡೆದಿರುವ ವಿಡಿಯೋ
TV9 Web
| Edited By: |

Updated on:Apr 01, 2022 | 2:52 PM

Share

ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ (Ghaziabad) ವೇಗವಾಗಿ ಬಂದ ಕಾರು ವೃದ್ಧನೊಬ್ಬನಿಗೆ ಡಿಕ್ಕಿ ಹೊಡೆದು ಅಷ್ಟೇ ವೇಗವಾಗಿ ಹೊರಟುಹೋಗಿದೆ. ಈ ವಿಡಿಯೋ ಭಾರೀ ವೈರಲ್ (Video Viral) ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದೆ. ಎಲ್ಲೆಡೆ ವೈರಲ್ ಆಗಿರುವ ಈ ಮನಕಲಕುವ ವಿಡಿಯೋದಲ್ಲಿ ವೃದ್ಧನೊಬ್ಬನಿಗೆ ಕಾರು ಡಿಕ್ಕಿ ಹೊಡೆದು, ವೇಗವಾಗಿ ಹೊರಟು ಹೋಗಿದೆ. ಕಾರು ಕಿರಿದಾದ ಲೇನ್‌ಗೆ ಬಂದು ನಂತರ ತನ್ನ ಮನೆಯ ಹೊರಗೆ ರಸ್ತೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಪ್ರಯತ್ನಿಸುತ್ತಿರುವ ವ್ಯಕ್ತಿಯ ಕಡೆಗೆ ವೇಗವಾಗಿ ಬರುವುದನ್ನು ನೋಡಬಹುದು. ಕಣ್ಮುಚ್ಚಿ ಬಿಡುವಷ್ಟರಲ್ಲಿ ಆ ಕಾರು ಆ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಗಾಯಗೊಂಡ ವೃದ್ಧ ರಸ್ತೆಯ ಮೇಲೆ ಬಿದ್ದಿದ್ದಾನೆ.

ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಹಿಟ್ ಆ್ಯಂಡ್ ರನ್ ಕೇಸ್‌ನಲ್ಲಿ ವೇಗವಾಗಿ ಬಂದ ಕಾರೊಂದು ವೃದ್ಧರೊಬ್ಬರ ಮೇಲೆ ಹರಿದ ಘಟನೆ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆಯ ವಿಡಿಯೋದಲ್ಲಿ ಕುರ್ಚಿಯ ಮೇಲೆ ಕುಳಿತುಕೊಳ್ಳಲು ಪ್ರಯತ್ನಿಸುತ್ತಿದ್ದ ವೃದ್ಧನ ಮೇಲೆ ಕಾರು ಹರಿದಿರುವುದನ್ನು ತೋರಿಸಿದೆ.

ಈ ಘಟನೆಯು ಉದ್ದೇಶಪೂರ್ವಕವಾಗಿದೆ ಎಂದು ಆರೋಪಿಸಿರುವ ವೃದ್ಧ, ಆರು ತಿಂಗಳ ಹಿಂದೆ ಪ್ರಾರಂಭವಾದ ವಿವಾದದಿಂದಾಗಿ ತನ್ನ ನೆರೆಹೊರೆಯವರು ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಆರು ತಿಂಗಳ ಹಿಂದೆ ಪ್ರಾರಂಭವಾದ ವಿವಾದದಿಂದಾಗಿ ತನ್ನ ನೆರೆಹೊರೆಯವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ವೃದ್ಧ ಆರೋಪಿಸಿದ್ದಾರೆ. ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದೆ. ಈ ಘಟನೆಯ ನಂತರ ಆ ವೃದ್ಧ ತನ್ನ ನೆರೆಹೊರೆಯವರ ವಿರುದ್ಧ ದೂರು ನೀಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ನಡುರಸ್ತೆಯಲ್ಲಿ ವಿಕಲಚೇತನನನ್ನು ಥಳಿಸಿ, ಸ್ಕೂಟಿ ಮುರಿದು ಹಾಕಿದ ದಂಪತಿ; ಶಾಕಿಂಗ್ ವಿಡಿಯೋ ವೈರಲ್

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!

Published On - 1:12 pm, Fri, 1 April 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ