AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ರತಿಸ್ಪರ್ಧಿ ಝೋಮ್ಯಾಟೋ ಡೆಲಿವರಿ ಬಾಯ್ ಕೈ ಹಿಡಿದುಕೊಂಡು ಹೋದ ಸ್ವಿಗ್ಗಿ ಆಹಾರ ವಿತರಕ; ವೈರಲ್ ವಿಡಿಯೋ ಇಲ್ಲಿದೆ

ಬೈಕ್​ನಲ್ಲಿ ಹೋಗುತ್ತಿರುವ ಸ್ವಿಗ್ಗಿ ಆಹಾರ ವಿತರಕನೊಬ್ಬ ಸೈಕಲ್​ನಲ್ಲಿ ಹೋಗುತ್ತಿರುವ ಝೋಮ್ಯಾಟೋ ಆಹಾರ ವಿತರಕನ ಕೈಯನ್ನು ಹಿಡಿದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ರೀತಿ ಪರಸ್ಪರ ಸಹಾಯ ಮಾಡಿದ್ದು ಇದೇ ಮೊದಲಲ್ಲ. ಈ ಬಗ್ಗೆ ವರದಿ ಇಲ್ಲಿದೆ.

Viral Video: ಪ್ರತಿಸ್ಪರ್ಧಿ ಝೋಮ್ಯಾಟೋ ಡೆಲಿವರಿ ಬಾಯ್ ಕೈ ಹಿಡಿದುಕೊಂಡು ಹೋದ ಸ್ವಿಗ್ಗಿ ಆಹಾರ ವಿತರಕ; ವೈರಲ್ ವಿಡಿಯೋ ಇಲ್ಲಿದೆ
ಪ್ರತಿಸ್ಪರ್ಧಿಗಳಿಗೆ ಸಹಾಯ ಮಾಡಿದ ದೃಶ್ಯಾವಳಿ ಸೆರೆ
TV9 Web
| Edited By: Rakesh Nayak Manchi|

Updated on:Jul 18, 2022 | 10:29 AM

Share

ಒಬ್ಬರ ಕಷ್ಟವನ್ನು ಅರ್ಥಮಾಡಿಕೊಂಡು ಸಹಾಯ ಮಾಡುವುದರಲ್ಲಿ ಸಿಗುವ ಸಂತೋಷ ಬೇರೆ ಎಲ್ಲೂ ಸಿಗಲಾರದು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋ ಆಹಾರ ವಿತರಣಾ ಪ್ರತಿಸ್ಪರ್ಧಿಗಳದ್ದಾಗಿದೆ. ನಮಗೂ ನಿಮಗೂ ತಿಳಿದಿರುವಂತೆ ಆಹಾರ ವಿತರಕರು ನಾವು ಯಾವುದೇ ಸಂದರ್ಭದಲ್ಲಿ ಆಹಾರ ಆರ್ಡರ್ ಮಾಡಿದರೆ ಡೆಡ್​ಲೈನ್​ಗೆ ಸರಿಯಾಗಿ ಆಹಾರ ಡೆಲಿವೆರಿ ಮಾಡುತ್ತಾರೆ. ಆದರೂ ಕೆಲವೊಮ್ಮೆ ಕೆಲವು ವಿತರಕರು ಸೈಕಲ್​ನಂತಹ ವಾಹನಗಳನ್ನು ಬಳಸುವುದರಿಂದ ಆಹಾರ ಡೆಲಿವರಿ ಸಮಯದಲ್ಲಿ ಏರುಪೇರು ಆಗುತ್ತವೆ. ಹೀಗಾಗಬಾರದು ಎಂಬ ಕಾರಣಕ್ಕೆ ಸೈಕಲ್​ನಲ್ಲಿ ಹೋಗುತ್ತಿದ್ದ ಝೋಮ್ಯಾಟೋ (Zomato) ಆಹಾರ ವಿತರಕನನ್ನು ಬೈಕ್​ನಲ್ಲಿ ಹೋಗುತ್ತಿರುವ ಸ್ವಿಗ್ಗಿ (Swiggy) ಆಹಾರ ವಿತರಕ ಕೈ ಹಿಡಿದುಕೊಂಡು ರಸ್ತೆಯಲ್ಲಿ ಸಾಗಿದ್ದಾರೆ.

ಕಾರು ಚಾಲಕರೊಬ್ಬರು ಮೊಬೈಲ್ ಮೂಲಕ ಅದ್ಭುತ ಸ್ನೇಹದ ದೃಶ್ಯಾವಳಿಯನ್ನು ಸೆರೆಹಿಡಿದ್ದಾರೆ. ವಿಡಿಯೋವನ್ನು ಸರಿಯಾಗಿ ಗಮನಿಸಿದಾಗ ಬೈಕ್​ನಲ್ಲಿ ಹೋಗುತ್ತಿರುವ ಸ್ವಿಗ್ಗಿ ಆಹಾರ ವಿತರಕನೊಬ್ಬ ಸೈಕಲ್​ನಲ್ಲಿ ಹೋಗುತ್ತಿರುವ ಝೋಮ್ಯಾಟೋ ಆಹಾರ ವಿತರಕನ ಕೈಯನ್ನು ಹಿಡಿದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಪ್ರತಿಸ್ಪರ್ಧಿ ಕಂಪನಿಯಾಗಿದ್ದರೂ ಕಷ್ಟಕ್ಕೆ ನೆರವಾಗುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.

ಸನ್ನಾ ಅರೋರಾ ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಜುಲೈ 9 ರಂದು ಹಂಚಿಕೊಂಡಿದ್ದು, “ದೆಹಲಿಯಲ್ಲಿ ಈ ಅತ್ಯಂತ ಬಿಸಿ ಮತ್ತು ಅಸಹನೀಯ ದಿನಗಳಲ್ಲಿ ಕಂಡ ನಿಜವಾದ ಸ್ನೇಹ” ಎಂದು ಶೀರ್ಷಿಕೆಯನ್ನು ನೀಡಿದ್ದಾರೆ. ಈ ವಿಡಿಯೋ ವೈರಲ್ ಪಡೆದು ಈವರೆಗೆ 4.66 ಲಕ್ಷ ಲೈಕ್​ಗಳು ಬಂದಿದ್ದು, ಸ್ನೇಹವನ್ನು ಹೊಗಳುವ ಸಾಕಷ್ಟು ಕಾಂಮೆಂಟ್​ಗಳು ಬಂದಿವೆ.

View this post on Instagram

A post shared by Sannah Arora (@sannaharora)

Published On - 10:29 am, Mon, 18 July 22

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ