AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್

ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ಎಲ್ಲೆಡೆ ನೀರು ನಿಂತಿತ್ತು. ಇದರಿಂದ ಸ್ವಿಗ್ಗಿ ಡೆಲಿವರಿ ಬಾಯ್ ಬೈಕ್​ನಲ್ಲಿ ಹೋಗಲಾರದೆ ಕುದುರೆ ಸವಾರಿ ಮಾಡಿಕೊಂಡು ಫುಡ್ ಡೆಲಿವರಿ ನೀಡಿದ್ದಾನೆ.

Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್
ಸ್ವಿಗ್ಗಿ ಡೆಲಿವರಿ ಬಾಯ್ ಕುದುರೆ ಸವಾರಿImage Credit source: India Today
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 04, 2022 | 4:12 PM

ಮಳೆಗಾಲ ಶುರುವಾದಾಗಿನಿಂದ ಅನೇಕ ರಾಜ್ಯಗಳಲ್ಲಿ ಪ್ರವಾಹದ (Mumbai Flood) ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗೆ ಧೋ ಎಂದು ಮಳೆ ಸುರಿಯುವಾಗ ಏನಾದರೂ ಬಿಸಿ ಬಿಸಿಯಾಗಿ ತಿನ್ನಬೇಕೆಂಬ ಆಸೆ ಹುಟ್ಟುವುದು ಸಹಜ. ಹಾಗನಿಸಿದಾಗ ಮೊಬೈಲ್ ತೆಗೆದು ಸ್ವಿಗ್ಗಿಯಲ್ಲೋ (Swiggy), ಜೊಮ್ಯಾಟೋದಲ್ಲೋ (Zomato) ನಮಗೆ ಬೇಕಾದ ಆಹಾರವನ್ನು ಆರ್ಡರ್ ಮಾಡುತ್ತೇವೆ. ಆದರೆ, ಅವರು ಕೂಡ ಮಳೆಯಲ್ಲಿ ಸರಿಯಾದ ಸಮಯಕ್ಕೆ ಫುಡ್ ಡೆಲಿವರಿ (Food Delivery) ಕೊಡಲು ಪರದಾಡುತ್ತಾರೆ. ಇಲ್ಲೊಬ್ಬ ಸ್ವಿಗ್ಗಿ ಡೆಲಿವರಿ ಬಾಯ್ ತನ್ನ ಗ್ರಾಹಕರಿಗೆ ಆಹಾರವನ್ನು ಡೆಲಿವರಿ ನೀಡುವ ಸಮಯದಲ್ಲಿ ಜೋರಾಗಿ ಮಳೆ ಬಂದಿದ್ದರಿಂದ ಬೈಕ್ ಬದಲು ಕುದುರೆ ಹತ್ತಿಕೊಂಡು ಹೋಗಿ ಫುಡ್ ಡೆಲಿವರಿ ನೀಡಿದ್ದಾರೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಆ ಯುವಕನ ಬದ್ಧತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಈ ಘಟನೆ ನಡೆದಿದೆ. ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ಎಲ್ಲೆಡೆ ನೀರು ನಿಂತಿತ್ತು. ಇದರಿಂದ ಸ್ವಿಗ್ಗಿ ಡೆಲಿವರಿ ಬಾಯ್ ಬೈಕ್​ನಲ್ಲಿ ಹೋಗಲಾರದೆ ಕುದುರೆ ಸವಾರಿ ಮಾಡಿಕೊಂಡು ಫುಡ್ ಡೆಲಿವರಿ ನೀಡಿದ್ದಾನೆ.

ಇದನ್ನೂ ಓದಿ: Viral Video: ಮಂಜುಗಡ್ಡೆಯ ಆಕಾರಕ್ಕೆ ತಿರುಗಿದ ಶಿವಲಿಂಗ, ಪವಾಡ ಕಣ್ತುಂಬಿಕೊಳ್ಳಲು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಿರುವ ಭಕ್ತರು

ಸ್ವಿಗ್ಗಿ ಡೆಲಿವರಿ ಬಾಯ್ ಮಳೆಯಲ್ಲಿ ಮುಖ್ಯ ರಸ್ತೆಯ ಉದ್ದಕ್ಕೂ ಬಿಳಿ ಕುದುರೆಯ ಮೇಲೆ ಸವಾರಿ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವುದನ್ನು ಗಮನಿಸಿದರೆ ಕುದುರೆ ಸವಾರಿಯೇ ಬೆಸ್ಟ್​ ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಮಾರ್ಚ್‌ನಲ್ಲಿ ಒಬ್ಬ ಯುವಕ ತನ್ನ ಬೈಕ್​ನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣದಿಂದ ಮಧ್ಯರಾತ್ರಿಯಲ್ಲಿ ರಸ್ತೆಯ ಮಧ್ಯದಲ್ಲಿ ಸಿಕ್ಕಿಬಿದ್ದಿದ್ದ. ಆಗ ಫುಡ್ ಡೆಲಿವರಿ ಬಾಯ್ ತನ್ನ ಬೈಕ್‌ನಿಂದ ಪೆಟ್ರೋಲ್ ನೀಡಿ ಆತನಿಗೆ ಸಹಾಯ ಮಾಡಿದ್ದ. ಆ ವಿಡಿಯೋ ವೈರಲ್ ಆಗಿತ್ತು.

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್