AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್

ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ಎಲ್ಲೆಡೆ ನೀರು ನಿಂತಿತ್ತು. ಇದರಿಂದ ಸ್ವಿಗ್ಗಿ ಡೆಲಿವರಿ ಬಾಯ್ ಬೈಕ್​ನಲ್ಲಿ ಹೋಗಲಾರದೆ ಕುದುರೆ ಸವಾರಿ ಮಾಡಿಕೊಂಡು ಫುಡ್ ಡೆಲಿವರಿ ನೀಡಿದ್ದಾನೆ.

Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್
ಸ್ವಿಗ್ಗಿ ಡೆಲಿವರಿ ಬಾಯ್ ಕುದುರೆ ಸವಾರಿImage Credit source: India Today
TV9 Web
| Edited By: |

Updated on: Jul 04, 2022 | 4:12 PM

Share

ಮಳೆಗಾಲ ಶುರುವಾದಾಗಿನಿಂದ ಅನೇಕ ರಾಜ್ಯಗಳಲ್ಲಿ ಪ್ರವಾಹದ (Mumbai Flood) ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗೆ ಧೋ ಎಂದು ಮಳೆ ಸುರಿಯುವಾಗ ಏನಾದರೂ ಬಿಸಿ ಬಿಸಿಯಾಗಿ ತಿನ್ನಬೇಕೆಂಬ ಆಸೆ ಹುಟ್ಟುವುದು ಸಹಜ. ಹಾಗನಿಸಿದಾಗ ಮೊಬೈಲ್ ತೆಗೆದು ಸ್ವಿಗ್ಗಿಯಲ್ಲೋ (Swiggy), ಜೊಮ್ಯಾಟೋದಲ್ಲೋ (Zomato) ನಮಗೆ ಬೇಕಾದ ಆಹಾರವನ್ನು ಆರ್ಡರ್ ಮಾಡುತ್ತೇವೆ. ಆದರೆ, ಅವರು ಕೂಡ ಮಳೆಯಲ್ಲಿ ಸರಿಯಾದ ಸಮಯಕ್ಕೆ ಫುಡ್ ಡೆಲಿವರಿ (Food Delivery) ಕೊಡಲು ಪರದಾಡುತ್ತಾರೆ. ಇಲ್ಲೊಬ್ಬ ಸ್ವಿಗ್ಗಿ ಡೆಲಿವರಿ ಬಾಯ್ ತನ್ನ ಗ್ರಾಹಕರಿಗೆ ಆಹಾರವನ್ನು ಡೆಲಿವರಿ ನೀಡುವ ಸಮಯದಲ್ಲಿ ಜೋರಾಗಿ ಮಳೆ ಬಂದಿದ್ದರಿಂದ ಬೈಕ್ ಬದಲು ಕುದುರೆ ಹತ್ತಿಕೊಂಡು ಹೋಗಿ ಫುಡ್ ಡೆಲಿವರಿ ನೀಡಿದ್ದಾರೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಆ ಯುವಕನ ಬದ್ಧತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಈ ಘಟನೆ ನಡೆದಿದೆ. ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ಎಲ್ಲೆಡೆ ನೀರು ನಿಂತಿತ್ತು. ಇದರಿಂದ ಸ್ವಿಗ್ಗಿ ಡೆಲಿವರಿ ಬಾಯ್ ಬೈಕ್​ನಲ್ಲಿ ಹೋಗಲಾರದೆ ಕುದುರೆ ಸವಾರಿ ಮಾಡಿಕೊಂಡು ಫುಡ್ ಡೆಲಿವರಿ ನೀಡಿದ್ದಾನೆ.

ಇದನ್ನೂ ಓದಿ: Viral Video: ಮಂಜುಗಡ್ಡೆಯ ಆಕಾರಕ್ಕೆ ತಿರುಗಿದ ಶಿವಲಿಂಗ, ಪವಾಡ ಕಣ್ತುಂಬಿಕೊಳ್ಳಲು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಿರುವ ಭಕ್ತರು

ಸ್ವಿಗ್ಗಿ ಡೆಲಿವರಿ ಬಾಯ್ ಮಳೆಯಲ್ಲಿ ಮುಖ್ಯ ರಸ್ತೆಯ ಉದ್ದಕ್ಕೂ ಬಿಳಿ ಕುದುರೆಯ ಮೇಲೆ ಸವಾರಿ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವುದನ್ನು ಗಮನಿಸಿದರೆ ಕುದುರೆ ಸವಾರಿಯೇ ಬೆಸ್ಟ್​ ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಮಾರ್ಚ್‌ನಲ್ಲಿ ಒಬ್ಬ ಯುವಕ ತನ್ನ ಬೈಕ್​ನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣದಿಂದ ಮಧ್ಯರಾತ್ರಿಯಲ್ಲಿ ರಸ್ತೆಯ ಮಧ್ಯದಲ್ಲಿ ಸಿಕ್ಕಿಬಿದ್ದಿದ್ದ. ಆಗ ಫುಡ್ ಡೆಲಿವರಿ ಬಾಯ್ ತನ್ನ ಬೈಕ್‌ನಿಂದ ಪೆಟ್ರೋಲ್ ನೀಡಿ ಆತನಿಗೆ ಸಹಾಯ ಮಾಡಿದ್ದ. ಆ ವಿಡಿಯೋ ವೈರಲ್ ಆಗಿತ್ತು.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!