AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್

ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ಎಲ್ಲೆಡೆ ನೀರು ನಿಂತಿತ್ತು. ಇದರಿಂದ ಸ್ವಿಗ್ಗಿ ಡೆಲಿವರಿ ಬಾಯ್ ಬೈಕ್​ನಲ್ಲಿ ಹೋಗಲಾರದೆ ಕುದುರೆ ಸವಾರಿ ಮಾಡಿಕೊಂಡು ಫುಡ್ ಡೆಲಿವರಿ ನೀಡಿದ್ದಾನೆ.

Viral Video: ಮಳೆಯಿಂದಾಗಿ ಕುದುರೆ ಸವಾರಿ ಮಾಡಿ ಫುಡ್ ನೀಡಿದ ಸ್ವಿಗ್ಗಿ ಡೆಲಿವರಿ ಬಾಯ್; ವಿಡಿಯೋ ವೈರಲ್
ಸ್ವಿಗ್ಗಿ ಡೆಲಿವರಿ ಬಾಯ್ ಕುದುರೆ ಸವಾರಿImage Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on: Jul 04, 2022 | 4:12 PM

Share

ಮಳೆಗಾಲ ಶುರುವಾದಾಗಿನಿಂದ ಅನೇಕ ರಾಜ್ಯಗಳಲ್ಲಿ ಪ್ರವಾಹದ (Mumbai Flood) ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗೆ ಧೋ ಎಂದು ಮಳೆ ಸುರಿಯುವಾಗ ಏನಾದರೂ ಬಿಸಿ ಬಿಸಿಯಾಗಿ ತಿನ್ನಬೇಕೆಂಬ ಆಸೆ ಹುಟ್ಟುವುದು ಸಹಜ. ಹಾಗನಿಸಿದಾಗ ಮೊಬೈಲ್ ತೆಗೆದು ಸ್ವಿಗ್ಗಿಯಲ್ಲೋ (Swiggy), ಜೊಮ್ಯಾಟೋದಲ್ಲೋ (Zomato) ನಮಗೆ ಬೇಕಾದ ಆಹಾರವನ್ನು ಆರ್ಡರ್ ಮಾಡುತ್ತೇವೆ. ಆದರೆ, ಅವರು ಕೂಡ ಮಳೆಯಲ್ಲಿ ಸರಿಯಾದ ಸಮಯಕ್ಕೆ ಫುಡ್ ಡೆಲಿವರಿ (Food Delivery) ಕೊಡಲು ಪರದಾಡುತ್ತಾರೆ. ಇಲ್ಲೊಬ್ಬ ಸ್ವಿಗ್ಗಿ ಡೆಲಿವರಿ ಬಾಯ್ ತನ್ನ ಗ್ರಾಹಕರಿಗೆ ಆಹಾರವನ್ನು ಡೆಲಿವರಿ ನೀಡುವ ಸಮಯದಲ್ಲಿ ಜೋರಾಗಿ ಮಳೆ ಬಂದಿದ್ದರಿಂದ ಬೈಕ್ ಬದಲು ಕುದುರೆ ಹತ್ತಿಕೊಂಡು ಹೋಗಿ ಫುಡ್ ಡೆಲಿವರಿ ನೀಡಿದ್ದಾರೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಆ ಯುವಕನ ಬದ್ಧತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಈ ಘಟನೆ ನಡೆದಿದೆ. ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ಎಲ್ಲೆಡೆ ನೀರು ನಿಂತಿತ್ತು. ಇದರಿಂದ ಸ್ವಿಗ್ಗಿ ಡೆಲಿವರಿ ಬಾಯ್ ಬೈಕ್​ನಲ್ಲಿ ಹೋಗಲಾರದೆ ಕುದುರೆ ಸವಾರಿ ಮಾಡಿಕೊಂಡು ಫುಡ್ ಡೆಲಿವರಿ ನೀಡಿದ್ದಾನೆ.

ಇದನ್ನೂ ಓದಿ: Viral Video: ಮಂಜುಗಡ್ಡೆಯ ಆಕಾರಕ್ಕೆ ತಿರುಗಿದ ಶಿವಲಿಂಗ, ಪವಾಡ ಕಣ್ತುಂಬಿಕೊಳ್ಳಲು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಿರುವ ಭಕ್ತರು

ಸ್ವಿಗ್ಗಿ ಡೆಲಿವರಿ ಬಾಯ್ ಮಳೆಯಲ್ಲಿ ಮುಖ್ಯ ರಸ್ತೆಯ ಉದ್ದಕ್ಕೂ ಬಿಳಿ ಕುದುರೆಯ ಮೇಲೆ ಸವಾರಿ ಮಾಡುವುದನ್ನು ವಿಡಿಯೋದಲ್ಲಿ ನೋಡಬಹುದು. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗಗನಕ್ಕೇರುತ್ತಿರುವುದನ್ನು ಗಮನಿಸಿದರೆ ಕುದುರೆ ಸವಾರಿಯೇ ಬೆಸ್ಟ್​ ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಮಾರ್ಚ್‌ನಲ್ಲಿ ಒಬ್ಬ ಯುವಕ ತನ್ನ ಬೈಕ್​ನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣದಿಂದ ಮಧ್ಯರಾತ್ರಿಯಲ್ಲಿ ರಸ್ತೆಯ ಮಧ್ಯದಲ್ಲಿ ಸಿಕ್ಕಿಬಿದ್ದಿದ್ದ. ಆಗ ಫುಡ್ ಡೆಲಿವರಿ ಬಾಯ್ ತನ್ನ ಬೈಕ್‌ನಿಂದ ಪೆಟ್ರೋಲ್ ನೀಡಿ ಆತನಿಗೆ ಸಹಾಯ ಮಾಡಿದ್ದ. ಆ ವಿಡಿಯೋ ವೈರಲ್ ಆಗಿತ್ತು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ