AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಯ್ಯೋ.. ಪಾಕಿಸ್ತಾನದಲ್ಲಿ ದುಬಾರಿ ಮದುವೆಗೂ ಬಿತ್ತಾ ಕತ್ತರಿ? ಮದುವೆ ಮನೆಗೆ ಕತ್ತೆ ಗಾಡಿಯಲ್ಲಿ ಬಂದ ವಧು-ವರರು

ಪಾಕಿಸ್ತಾನವು ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ, ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನಿಂದ ಹಿಡಿದು ಎಲ್ಲವೂ ತೀರಾ ದುಬಾರಿಯಾಗಿದೆ.

Viral Video: ಅಯ್ಯೋ.. ಪಾಕಿಸ್ತಾನದಲ್ಲಿ ದುಬಾರಿ ಮದುವೆಗೂ ಬಿತ್ತಾ ಕತ್ತರಿ? ಮದುವೆ ಮನೆಗೆ ಕತ್ತೆ ಗಾಡಿಯಲ್ಲಿ ಬಂದ ವಧು-ವರರು
ಮದುವೆ
ನಯನಾ ರಾಜೀವ್
|

Updated on: Mar 20, 2023 | 8:17 AM

Share

ಪಾಕಿಸ್ತಾನವು ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ, ಇಂತಹ ಸಂದರ್ಭದಲ್ಲಿ ಕುಡಿಯುವ ನೀರಿನಿಂದ ಹಿಡಿದು ಎಲ್ಲವೂ ತೀರಾ ದುಬಾರಿಯಾಗಿದೆ. ಆದರೆ, ಪರಿಸ್ಥಿತಿ ಏನೇ ಇರಲಿ, ಶುಭ ಕಾರ್ಯಗಳಂತೂ ನಿಲ್ಲುವುದಿಲ್ಲ, ಮದುವೆಗೆ ಸಾಮಾನ್ಯವಾಗಿ ಕುದುರೆಗಾಡಿ ಅಥವಾ ಇನ್ಯಾವುದೇ ವಾಹನಗಳನ್ನು ಸಿಂಗರಿಸಿ ಅದರಲ್ಲಿ ಬರುವುದುಂಟು, ಇನ್ನು ಹಳ್ಳಿ ಕಡೆಗಳಲ್ಲಿ ಮೊದಲು ಎತ್ತಿನ ಗಾಡಿಯಲ್ಲಿ ಮದುವೆಯ ದಿಬ್ಬಣ ಹೋಗುತ್ತಿತ್ತು. ಆದರೆ ಈ ವಧು-ವರರು ಮದುವೆ ಮನೆಗೆ ಕತ್ತೆಯ ಗಾಡಿಯಲ್ಲಿ ಎಂಟ್ರಿ ಕೊಟ್ಟಿದ್ದು, ಎಲ್ಲರಲ್ಲಿ ನಗು ತರಿಸಿತ್ತು.

ಈ ವಿಡಿಯೋ ಪಾಕಿಸ್ತಾನದ್ದು ಎಂದು ಹೇಳಲಾಗಿದೆ, ಅನೇಕ ಪಾಕಿಸ್ತಾನಿ ಬಳಕೆದಾರರು ಈ ವಿಡಿಯೋವನ್ನು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ವಧು-ವರರು ಕತ್ತೆಗಾಡಿಯಲ್ಲಿ ಕುಳಿತು ಮದುವೆಮನೆಗೆ ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಕತ್ತೆಗೂ ಮಾಲೆ ಹಾಕಿರುವುದು ಕಂಡುಬರುತ್ತದೆ, ಸುತ್ತಮುತ್ತಲು ಇರುವವರು ವಿಡಿಯೋ ಮಾಡುವುದರಲ್ಲಿ ತೊಡಗಿದ್ದಾರೆ. ಮದುವೆಗೆ ಬಂದಿದ್ದ ವಿಡಿಯೋಗ್ರಾಫರ್ ಕೂಡ ತನ್ನ ಕ್ಯಾಮರಾದಲ್ಲಿ ಇಡೀ ಘಟನೆಯನ್ನು ಸೆರೆ ಹಿಡಿದಿದ್ದಾರೆ.

ಮತ್ತಷ್ಟು ಓದಿ: ಕಂಟ ಪೂರ್ತಿ ಕುಡಿದು ತನ್ನ ಮದುವೆ ಮರೆದು ಬಿಟ್ಟ ವರ, ವಧು ಮಾಡಿದೇನು ಗೊತ್ತಾ?

ಕೆಲವರು ಉತ್ತಮ ಆಯ್ಕೆ ಎಂದಿದ್ದಾರೆ, ಇನ್ನೂ ಕೆಲವರು ಬೇಗ ಜನಪ್ರಿಯತೆಗಳಿಸಲು ಸುಲಭ ಮಾರ್ಗ ಎಂದು ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಹಣದುಬ್ಬರ ಏರುತ್ತಿರುವ ಹಿನ್ನೆಲೆಯಲ್ಲಿ ಹೀಗೆ ಮಾಡಲಾಗಿದೆ ಎಂದು ಕೆಲವರು ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ 22 ರೂ ನಿಂದ ಇದೀಗ 272 ರೂ.ವರೆಗೆ ಏರಿಕೆಯಾಗಿದೆ. 2021ರಲ್ಲಿ ಮದುವೆಯೊಂದು ಚರ್ಚೆಯಾಗಿತ್ತು, ಅಜ್ಲಾನ್ ಷಾ ತನ್ನ ಬೇಗಂ ವಾರಿಷಾಗೆ ಕತ್ತೆಯೊಂದನ್ನು ಉಡುಗೊರೆಯಾಗಿ ನೀಡಿದ್ದರು.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ