AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಭರ್ಜರಿ ಬೇಟೆಯಾಡಿದ ಏಡಿ; ಅಪರೂಪದ ವಿಡಿಯೋ ನೋಡಿ ಅಚ್ಚರಿಗೊಂಡ ನೆಟ್ಟಿಗರು

ಏಡಿ ಆಮೆಯನ್ನು ಬೇಟೆಯಾಡಿರುವುದನ್ನು ನೀವು ಸಾಮಾನ್ಯವಾಗಿ ಕಂಡಿರಲು ಸಾಧ್ಯವಿಲ್ಲ. ಆದರೆ ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗುತ್ತಿದ್ದು, ತೀರಾ ಅಪರೂಪದ ದೃಶ್ಯಾವಳಿಯನ್ನು ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

Viral Video: ಭರ್ಜರಿ ಬೇಟೆಯಾಡಿದ ಏಡಿ; ಅಪರೂಪದ ವಿಡಿಯೋ ನೋಡಿ ಅಚ್ಚರಿಗೊಂಡ ನೆಟ್ಟಿಗರು
ಆಮೆಯನ್ನು ಬೇಟೆಯಾಡಿದ ಏಡಿ
TV9 Web
| Edited By: |

Updated on:Sep 25, 2022 | 1:38 PM

Share

ಏಡಿಗಳು ಎಲ್ಲರಿಗೂ ಚಿರಪರಿಚಿತ. ಜಗತ್ತಿನಲ್ಲಿ 4 ಸಾವಿರಕ್ಕೂ ಹೆಚ್ಚು ಜಾತಿಯ ಏಡಿಗಳಿದ್ದು, ಇವುಗಳು ತುಂಬಾ ಅಪಾಯಕಾರಿಯೂ ಆಗಿವೆ. ಸಣ್ಣದಾಗಿರಲಿ, ದೊಡ್ಡದಾಗಿರಲಿ ಮುಟ್ಟಲು ಹೋದರೆ ಕಚ್ಚಲು ಬಂದೇ ಬರುತ್ತವೆ. ಅನೇಕ ಕಡೆ ಜನರು ಏಡಿಗಳನ್ನೂ ತಿನ್ನುತ್ತಾರೆ. ಒಂದಷ್ಟು ಜನರ ನೆಚ್ಚಿನ ಭಕ್ಷ್ಯ ಕೂಡ ಆಗಿದೆ. ಏಡಿಗಳ ದೊಡ್ಡ ವೈಶಿಷ್ಟ್ಯವೆಂದರೆ ಅವು ಸಸ್ಯಾಹಾರಿ ಮತ್ತು ಮಾಂಸಾಹಾರಿ. ಇಂತಹ ಏಡಿಯ ವಿಡಿಯೋ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಚ್ಚರಿ ಎಂಬಂತೆ ಆಮೆಯೊಂದನ್ನು ಬೇಟೆಯಾಡಿ ಎಳೆದೊಯ್ಯುತ್ತಿರುವುದನ್ನು ಕಾಣಬಹುದು.

ವಿಡಿಯೋದಲ್ಲಿ, ಸಣ್ಣ ಗಾತ್ರದ ಆಮೆಯೊಂದು ತೆವಲುತ್ತಾ ಹೋಗುತ್ತಿರುತ್ತದೆ. ಇದನ್ನು ನೋಡಿದ ಆಮೆಗಿಂತ ಸ್ವಲ್ಪ ದೊಡ್ಡ ಗಾತ್ರದ ಏಡಿ ಭಾನುವಾರದ ಬಾಟೂಟ ಸಿಕ್ಕಿತು ಅಂತ ಅದರತ್ತ ಓಡೋಡಿ ಬಂದು ಹಿಡಿಯುತ್ತದೆ. ಅಷ್ಟೇ ಅಲ್ಲದೆ ತನ್ನ ಬೇಟೆಯನ್ನು ಎಳೆದುಕೊಂಡ ಹೋಗುವುದನ್ನು ಕಾಣಬಹುದು. ಆದರೆ ಏಡಿ ಆಮೆಯನ್ನು ಬೇಟೆಯಾಡಿರುವುದನ್ನು ನೀವು ಸಾಮಾನ್ಯವಾಗಿ ಕಂಡಿರಲು ಸಾಧ್ಯವಿಲ್ಲ. ತೀರಾ ಅಪರೂಪದ ವಿಡಿಯೋ ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.

ಈ ವೀಡಿಯೊವನ್ನು natureisbruta1 ಎಂಬ ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈವರೆಗೆ 28 ಸಾವಿರಕ್ಕೂ ಹೆಚ್ಚು ಬಾರಿ ವೀಕ್ಷಣೆಗಳನ್ನು ಮಾಡಲಾಗಿದ್ದು, ನೂರಾರು ಲೈಕ್​ಗಳು ಬಂದಿವೆ. ವಿಡಿಯೋ ನೋಡಿದ ನೆಟ್ಟಿಗರೊಬ್ಬರು ಉಲ್ಲಾಸದಾಯಿಕ ವಿಡಿಯೋ ಎಂದು ಹೇಳಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿ, “ಬುದ್ದಿವಂತ ಸರ್ವಶಕ್ತನಾದ ದೇವರು ಇದನ್ನು ಸೃಷ್ಟಿಸಿದನು” ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋ ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 1:33 pm, Sun, 25 September 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ