AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಗೂ ಒಂದು ದಿನ ಬರುತ್ತದೆ ಎಂದು ಕೇಳಿದ್ದಿರಲ್ಲ, ಈಗ ನೋಡಿ!

Dogs : ಓಹೋ, ಶ್ವಾನಮಹಾರಾಜರು ಅಜಯ್​ ದೇವಗನ್​ ಅವರಿಂದ ತರಬೇತಿ ಪಡೆದಿರುವ ಹಾಗಿದೆ ಎಂದು ಹಲವರು. ಹಾಗಿದ್ದರೆ ಇನ್ನು ಮುಂದೆ ನಮ್ಮ ರಾಷ್ಟ್ರೀಯ ಪ್ರಾಣಿ ಯಾವುದು ಎಂದು ಕೆಲವರು. ಈ ವಿಡಿಯೋದ ಬಗ್ಗೆ ನೀವು ಏನು ಹೇಳುತ್ತೀರಿ?

Viral Video: ನಾಯಿಗೂ ಒಂದು ದಿನ ಬರುತ್ತದೆ ಎಂದು ಕೇಳಿದ್ದಿರಲ್ಲ, ಈಗ ನೋಡಿ!
ಎಮ್ಮೆಸವಾರಿ ಮಾಡುತ್ತಿರುವ ನಾಯಿ
ಶ್ರೀದೇವಿ ಕಳಸದ
|

Updated on:Jul 28, 2023 | 4:06 PM

Share

Dog : ಶ್ವಾನಮಹಾರಾಜರು ಎಮ್ಮೆಯ (Buffalo) ಮೇಲೇರಿ ಘನಗಾಂಭೀರ್ಯವಾಗಿ ಪ್ರಜೆಗಳ ಕ್ಷೇಮಸಮಾಚಾರ ತಿಳಿದುಕೊಳ್ಳಲು ಪುರಸಂಚಾರಕ್ಕೆ ಹೊರಟಿದ್ದಾರೆ. ನೆಟ್ಟಿಗ ಮಹಾಶಯರಲ್ಲಿ ಕೆಲವರು ಇವರಿಗೆ ಬಗೆಬಗೆಯ ಸವಾಲುಗಳನ್ನೆಸೆದು ಇವರ ಪಾಂಡಿತ್ಯ ಪರೀಕ್ಷೆ ಮಾಡುತ್ತಿದ್ದಾರೆ. ಕೆಲವರಷ್ಟೇ ಇವರ ಬಗ್ಗೆ ಹೆಮ್ಮೆಯಾಡಿದ್ದಾರೆ. ಇನ್ನೂ ಕೆಲವರು ಅಪಹಾಸ್ಯದಿಂದ ಕಾಲೆಳೆಯುತ್ತಿದ್ದಾರೆ. ಈ ಎಳೆತಂದಿದಾಗಿಯೇ ಈ ಮೂವರೂ ಸಾಮಾಜಿಕ ಜಾಲತಾಣದ ತುಂಬೆಲ್ಲ ತಮ್ಮ ಕೀರ್ತಿಪತಾಕೆ ಹಾರಿಸುತ್ತಿದ್ದಾರೆ. ಇವರಿಗೆ ಜಯವಾಗಲಿ, ಈ ಅಪರೂಪದ ಸಂಚಾರಕ್ಕೆ ನೀವೂ ಸಾಕ್ಷಿಯಾಗಿ ಪುನೀತರಾಗಿ.

‘ಪ್ರತೀ ನಾಯಿಗೂ ಅದರದೇ ಆದ ದಿನವೊಂದು ಬಂದೇ ಬರುತ್ತದೆ ಎಂದು ಕೇಳಿದ್ದೆ, ಆದರೆ ಅದನ್ನು ಇಂದು ನೋಡಿಯೇ ಬಿಟ್ಟೆ’ ಎಂದಿದ್ದಾರೆ ಈ ವಿಡಿಯೋ ಟ್ವೀಟ್ ಮಾಡಿದ ಶಾಝಿಯಾ ಚೌಧರಿ. ಈ ವಿಡಿಯೋ ಅನ್ನು ಈತನಕ 9 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. 8,000ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. 1,600 ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. ಇನ್ನು ಇನ್​ಸ್ಟಾಗ್ರಾನಲ್ಲಿಯೂ ಈ ವಿಡಿಯೋ ಇದ್ದು ಈತನಕ 16 ಮಿಲಿಯನ್​ ಜನರು ಇದನ್ನು ನೋಡಿದ್ದಾರೆ.

ಇದನ್ನೂ ಓದಿ : Viral: ಬಿಹಾರ್; ತನಗೆ ಎರಡೇ ಮಕ್ಕಳು ಎಂದು ಸುಳ್ಳು ಹೇಳಿದ್ದ ಛಾಪ್ರಾ ಮೇಯರ್ ಇದೀಗ ವಜಾ

ಅನೇಕರು ಪ್ರತಿಕ್ರಿಯಿಸಿದ್ದಾರೆ. ಈ ವೈರಲ್ ವಿಡಿಯೋ ಯಾವ ಚಿತ್ರದ ಶೂಟಿಂಗ್? ಎಂದಿದ್ದಾರೆ ಒಬ್ಬರು. ಶಭಾಷ್​! ಅಜಯ್​ ದೇವಗನ್​ ಎಂದಿದ್ದಾರೆ ಮತ್ತೊಬ್ಬರು. ಆನೆಗಳ ಮೇಲೆ ಸವಾರಿ ಮಾಡುತ್ತಿರುವ ನಾಯಿಗೆ ಜಯವಾಗಲಿ ಎಂದಿದ್ದಾರೆ ಇನ್ನೊಬ್ಬರು. ಗೋಲ್ಮಾಲ್​ 1ನೇ ಡ್ರಾಫ್ಟ್​ ಇದು ಎಂದಿದ್ದಾಎರ ಇನ್ನೂ ಒಬ್ಬರು.

ಇದನ್ನೂ ಓದಿ : Viral: ಚಿಪ್ಪುಮೀನಿನ ಖಾದ್ಯದಲ್ಲಿ ಸಿಕ್ಕ ಮುತ್ತು; ಅದನ್ನಾಕೆ ನಿಶ್ಚಿತಾರ್ಥದ ಉಂಗುರವಾಗಿಸಿಕೊಂಡಳು

ಅಯ್ಯೋ ನಾನೂ ನಿಮ್ಮೊಂದಿಗೆ ಈಗ ಇರಬೇಕಿತ್ತು ಎಂದಿದ್ದಾರೆ ಒಬ್ಬರು. ಇನ್ನುಮುಂದೆ ರಾಷ್ಟ್ರೀಯ ಪ್ರಾಣಿ ನಾಯಿಯಾಗಲಿ ಎಂದಿದ್ದಾರೆ ಮತ್ತೊಬ್ಬರು. ನಮ್ಮ ಬಾಹುಬಲಿ ಬಂದಾ ಎಂದಿದ್ದಾರೆ ಇನ್ನೂ ಒಬ್ಬರು. ಅವಕಾಶವಾದಿಗಳು ಎಲ್ಲೆಡೆಯೂ ಇರುತ್ತಾರೆ ಎಂದಿದ್ದಾರೆ ಹಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:01 pm, Fri, 28 July 23

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್