AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಾಯಿಗೂ ಒಂದು ದಿನ ಬರುತ್ತದೆ ಎಂದು ಕೇಳಿದ್ದಿರಲ್ಲ, ಈಗ ನೋಡಿ!

Dogs : ಓಹೋ, ಶ್ವಾನಮಹಾರಾಜರು ಅಜಯ್​ ದೇವಗನ್​ ಅವರಿಂದ ತರಬೇತಿ ಪಡೆದಿರುವ ಹಾಗಿದೆ ಎಂದು ಹಲವರು. ಹಾಗಿದ್ದರೆ ಇನ್ನು ಮುಂದೆ ನಮ್ಮ ರಾಷ್ಟ್ರೀಯ ಪ್ರಾಣಿ ಯಾವುದು ಎಂದು ಕೆಲವರು. ಈ ವಿಡಿಯೋದ ಬಗ್ಗೆ ನೀವು ಏನು ಹೇಳುತ್ತೀರಿ?

Viral Video: ನಾಯಿಗೂ ಒಂದು ದಿನ ಬರುತ್ತದೆ ಎಂದು ಕೇಳಿದ್ದಿರಲ್ಲ, ಈಗ ನೋಡಿ!
ಎಮ್ಮೆಸವಾರಿ ಮಾಡುತ್ತಿರುವ ನಾಯಿ
ಶ್ರೀದೇವಿ ಕಳಸದ
|

Updated on:Jul 28, 2023 | 4:06 PM

Share

Dog : ಶ್ವಾನಮಹಾರಾಜರು ಎಮ್ಮೆಯ (Buffalo) ಮೇಲೇರಿ ಘನಗಾಂಭೀರ್ಯವಾಗಿ ಪ್ರಜೆಗಳ ಕ್ಷೇಮಸಮಾಚಾರ ತಿಳಿದುಕೊಳ್ಳಲು ಪುರಸಂಚಾರಕ್ಕೆ ಹೊರಟಿದ್ದಾರೆ. ನೆಟ್ಟಿಗ ಮಹಾಶಯರಲ್ಲಿ ಕೆಲವರು ಇವರಿಗೆ ಬಗೆಬಗೆಯ ಸವಾಲುಗಳನ್ನೆಸೆದು ಇವರ ಪಾಂಡಿತ್ಯ ಪರೀಕ್ಷೆ ಮಾಡುತ್ತಿದ್ದಾರೆ. ಕೆಲವರಷ್ಟೇ ಇವರ ಬಗ್ಗೆ ಹೆಮ್ಮೆಯಾಡಿದ್ದಾರೆ. ಇನ್ನೂ ಕೆಲವರು ಅಪಹಾಸ್ಯದಿಂದ ಕಾಲೆಳೆಯುತ್ತಿದ್ದಾರೆ. ಈ ಎಳೆತಂದಿದಾಗಿಯೇ ಈ ಮೂವರೂ ಸಾಮಾಜಿಕ ಜಾಲತಾಣದ ತುಂಬೆಲ್ಲ ತಮ್ಮ ಕೀರ್ತಿಪತಾಕೆ ಹಾರಿಸುತ್ತಿದ್ದಾರೆ. ಇವರಿಗೆ ಜಯವಾಗಲಿ, ಈ ಅಪರೂಪದ ಸಂಚಾರಕ್ಕೆ ನೀವೂ ಸಾಕ್ಷಿಯಾಗಿ ಪುನೀತರಾಗಿ.

‘ಪ್ರತೀ ನಾಯಿಗೂ ಅದರದೇ ಆದ ದಿನವೊಂದು ಬಂದೇ ಬರುತ್ತದೆ ಎಂದು ಕೇಳಿದ್ದೆ, ಆದರೆ ಅದನ್ನು ಇಂದು ನೋಡಿಯೇ ಬಿಟ್ಟೆ’ ಎಂದಿದ್ದಾರೆ ಈ ವಿಡಿಯೋ ಟ್ವೀಟ್ ಮಾಡಿದ ಶಾಝಿಯಾ ಚೌಧರಿ. ಈ ವಿಡಿಯೋ ಅನ್ನು ಈತನಕ 9 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. 8,000ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. 1,600 ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. ಇನ್ನು ಇನ್​ಸ್ಟಾಗ್ರಾನಲ್ಲಿಯೂ ಈ ವಿಡಿಯೋ ಇದ್ದು ಈತನಕ 16 ಮಿಲಿಯನ್​ ಜನರು ಇದನ್ನು ನೋಡಿದ್ದಾರೆ.

ಇದನ್ನೂ ಓದಿ : Viral: ಬಿಹಾರ್; ತನಗೆ ಎರಡೇ ಮಕ್ಕಳು ಎಂದು ಸುಳ್ಳು ಹೇಳಿದ್ದ ಛಾಪ್ರಾ ಮೇಯರ್ ಇದೀಗ ವಜಾ

ಅನೇಕರು ಪ್ರತಿಕ್ರಿಯಿಸಿದ್ದಾರೆ. ಈ ವೈರಲ್ ವಿಡಿಯೋ ಯಾವ ಚಿತ್ರದ ಶೂಟಿಂಗ್? ಎಂದಿದ್ದಾರೆ ಒಬ್ಬರು. ಶಭಾಷ್​! ಅಜಯ್​ ದೇವಗನ್​ ಎಂದಿದ್ದಾರೆ ಮತ್ತೊಬ್ಬರು. ಆನೆಗಳ ಮೇಲೆ ಸವಾರಿ ಮಾಡುತ್ತಿರುವ ನಾಯಿಗೆ ಜಯವಾಗಲಿ ಎಂದಿದ್ದಾರೆ ಇನ್ನೊಬ್ಬರು. ಗೋಲ್ಮಾಲ್​ 1ನೇ ಡ್ರಾಫ್ಟ್​ ಇದು ಎಂದಿದ್ದಾಎರ ಇನ್ನೂ ಒಬ್ಬರು.

ಇದನ್ನೂ ಓದಿ : Viral: ಚಿಪ್ಪುಮೀನಿನ ಖಾದ್ಯದಲ್ಲಿ ಸಿಕ್ಕ ಮುತ್ತು; ಅದನ್ನಾಕೆ ನಿಶ್ಚಿತಾರ್ಥದ ಉಂಗುರವಾಗಿಸಿಕೊಂಡಳು

ಅಯ್ಯೋ ನಾನೂ ನಿಮ್ಮೊಂದಿಗೆ ಈಗ ಇರಬೇಕಿತ್ತು ಎಂದಿದ್ದಾರೆ ಒಬ್ಬರು. ಇನ್ನುಮುಂದೆ ರಾಷ್ಟ್ರೀಯ ಪ್ರಾಣಿ ನಾಯಿಯಾಗಲಿ ಎಂದಿದ್ದಾರೆ ಮತ್ತೊಬ್ಬರು. ನಮ್ಮ ಬಾಹುಬಲಿ ಬಂದಾ ಎಂದಿದ್ದಾರೆ ಇನ್ನೂ ಒಬ್ಬರು. ಅವಕಾಶವಾದಿಗಳು ಎಲ್ಲೆಡೆಯೂ ಇರುತ್ತಾರೆ ಎಂದಿದ್ದಾರೆ ಹಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:01 pm, Fri, 28 July 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ