AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಟೋಲ್ ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡ “ದಿ ಗ್ರೇಟ್ ಖಲಿ”

WWE ಕುಸ್ತಿಪಟು ದಲೀಪ್ ಸಿಂಗ್ ರಾಣಾ ಸೋಮವಾರ ಪಂಜಾಬ್‌ನ ಲುಧಿಯಾನದಲ್ಲಿ ಟೋಲ್ ಪ್ಲಾಜಾದ ಸಿಬ್ಬಂದಿಯೊಂದಿಗೆ ಜಗಳವಾಡಿದ್ದಾರೆ.  ಟೋಲ್ ಪ್ಲಾಜಾದ ಸಿಬ್ಬಂದಿ ಖಲಿ ಜೊತೆ ವಾಗ್ವಾದ ನಡೆಸುತ್ತಿರುವ  ವಿಡಿಯೋ ಮಂಗಳವಾರ ಟ್ವಿಟ್ಟರ್ ನಲ್ಲಿ ವೈರಲ್ ಆಗಿದೆ. ಪಾಣಿಪತ್-ಜಲಂಧರ್ ರಾಷ್ಟ್ರೀಯ ಹೆದ್ದಾರಿಯ ಲಾಧೋವಲ್‌ನಲ್ಲಿ ಈ ಘಟನೆ ನಡೆದಿದೆ.

Viral Video: ಟೋಲ್ ಸಿಬ್ಬಂದಿಯೊಂದಿಗೆ ಕಿರಿಕ್ ಮಾಡಿಕೊಂಡ ದಿ ಗ್ರೇಟ್ ಖಲಿ
"The Great Khali"
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 13, 2022 | 12:40 PM

ದಿ ಗ್ರೇಟ್ ಖಲಿ ಎಂದು ಪ್ರಸಿದ್ಧಿ ಪಡೆದಿರುವ WWE ಕುಸ್ತಿಪಟು ದಲೀಪ್ ಸಿಂಗ್ ರಾಣಾ ಸೋಮವಾರ ಪಂಜಾಬ್‌ನ ಲುಧಿಯಾನದಲ್ಲಿ ಟೋಲ್ ಪ್ಲಾಜಾದ ಸಿಬ್ಬಂದಿಯೊಂದಿಗೆ ಜಗಳವಾಡಿದ್ದಾರೆ.  ಟೋಲ್ ಪ್ಲಾಜಾದ ಸಿಬ್ಬಂದಿ ಖಲಿ ಜೊತೆ ವಾಗ್ವಾದ ನಡೆಸುತ್ತಿರುವ  ವಿಡಿಯೋ ಮಂಗಳವಾರ ಟ್ವಿಟ್ಟರ್ ನಲ್ಲಿ ವೈರಲ್ ಆಗಿದೆ. ಪಾಣಿಪತ್-ಜಲಂಧರ್ ರಾಷ್ಟ್ರೀಯ ಹೆದ್ದಾರಿಯ ಲಾಧೋವಲ್‌ನಲ್ಲಿ ಈ ಘಟನೆ ನಡೆದಿದೆ. WWE ಸ್ಟಾರ್ ತನ್ನ ಕಾರಿನಲ್ಲಿ ಇತರ ಕೆಲವು ಜನರೊಂದಿಗೆ ಲುಧಿಯಾನ ಮೂಲಕ ಕರ್ನಾಲ್‌ಗೆ ಪ್ರಯಾಣಿಸುತ್ತಿದ್ದರು. ವೀಡಿಯೊದಲ್ಲಿ, ಟೋಲ್ ಪ್ಲಾಜಾದಲ್ಲಿನ ಸಿಬ್ಬಂದಿ ಖಲಿಯನ್ನು ಮಾತನಾಡುತ್ತಿರುವುದನ್ನು ಕಾಣಬಹುದು. ಮತ್ತು ಕುಸ್ತಿಪಟು ತಮ್ಮ ಸಿಬ್ಬಂದಿಯೊಬ್ಬರಿಗೆ ಐಡಿ ಕಾರ್ಡ್ ತೋರಿಸಲು ಕೇಳಿದಾಗ ಕಪಾಳಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ವೀಡಿಯೋದಲ್ಲಿ, ಸಿಬ್ಬಂದಿ ನನ್ನನ್ನು ‘ಬ್ಲ್ಯಾಕ್‌ಮೇಲ್’ ಮಾಡುತ್ತಿದ್ದು,  ನಾನು ಪ್ರಯಾಣಿಸುತ್ತಿದ್ದ ದಾರಿಯಲ್ಲಿ ತಡೆಹಿಡಿದ್ದಿದ್ದಾರೆ ಎಂದು ಎಂದು ಖಲಿ ಹೇಳುವುದನ್ನು ಕೇಳಬಹುದು.  ಅವರ ಬಳಿ ಗುರುತಿನ ಚೀಟಿ ಇರಲಿಲ್ಲ ಎಂದು ಸಿಬ್ಬಂಧಿಗಳು ಹೇಳಿದ್ದಾರೆ.  ಖಲಿ, ತನ್ನ ಕಾರಿನೊಳಗೆ ಕುಳಿಕೊಂಡು ಬ್ಯಾರಿಕೇಡ್ ತೆರೆಯಲು ಸಿಬ್ಬಂದಿಗೆ ಹೇಳಿದ್ದಾರೆ  ಆದರೆ ಸಿಬ್ಬಂದಿ ಇದಕ್ಕೆ ನಿರಾಕರಿಸಿದರು. ಕಾರಿನ ಸುತ್ತಲಿದ್ದ ಜನರು ಇನ್ನಷ್ಟು ಕೋಪ ಬರುವಂತೆ ಮಾಡುತ್ತಿದ್ದರು.  ‘ಓ ಜುಟ್ಟಿಯಾನ್ ನಾ ಖಾಲ್ ಲಿ…” (ನಾವು ನಿಮ್ಮನ್ನು ಶೂಗಳಿಂದ ಥಳಿಸುತ್ತೇವೆ) ಇದನ್ನು ಕೇಳಿ ಖಲಿ ಕಾರಿನಿಂದ ಹೊರಗೆ ಬಂದಿದ್ದಾರೆ  ಇದು ಕುಸ್ತಿಪಟು ತನ್ನ ಕಾರಿನಿಂದ ಹೊರಬರುವಂತೆ ಮಾಡಿತು.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ

ಘಟನೆ ನಡೆದ ಸ್ಥಳದಲ್ಲಿ  ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಇದ್ದರು.  ಸಿಬ್ಬಂದಿ ಸದಸ್ಯರು ಖಲಿಯನ್ನು ನಿಮ್ಮ  ಮಿತಿಯೊಳಗೆ ಇರುವಂತೆ ಎಚ್ಚರಿಕೆ ನೀಡುತ್ತಾರೆ. ಇದರಿಂದ ಕೆರಳಿದ ಖಲಿ ಸ್ವತಃ ಬ್ಯಾರಿಕೇಡ್ ಅನ್ನು ತೆಗೆದುಹಾಕಲು ಪ್ರಯತ್ನಿಸುತ್ತಾರೆ.  ಸಿಬ್ಬಂದಿಗಳು ಕಳಿ ಅವರ ಕಾರಿನ ವಾಹದ ನಂಬರ್ ಬರೆದುಕೊಳ್ಳತ್ತಾರೆ.  ನಂತರ  ಅಲ್ಲಿಂದ ಖಲಿ  ಹಿಂತಿರುಗುತ್ತಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಖಲಿ, ಟೋಲ್ ಪ್ಲಾಜಾ ಸಿಬ್ಬಂದಿ ತಮ್ಮೊಂದಿಗೆ ಪೋಟೋ ಕ್ಲಿಕ್ ಮಾಡುವಂತೆ ಒತ್ತಾಯಿಸಿದಾಗ ಈ ಜಗಳ ಉಂಟಾಯಿತು. ಅವರು ನನ್ನ ಜೊತೆಗೆ ಫೋಟೋ ಕ್ಲಿಕ್ ಮಾಡಲು ಒತ್ತಾಯಿಸಿದ್ದಾರೆ ಮತ್ತು  ಒಂದು ರೀತಿಯಲ್ಲಿ ಬ್ಲಾಕ್ ಮೇಲ್ ಶುರು ಮಾಡಿದ್ದಾರೆ. ಅವರು ನನ್ನಲ್ಲಿ ನಯವಾಗಿ ವಿನಂತಿಸಿದ್ದರೆ ನಾನು ನಿರಾಕರಿಸುತ್ತಿರಲಿಲ್ಲ ಆದರೆ ಅವರು ಅಸಭ್ಯವಾಗಿ ವರ್ತನೆ ಮಾಡಿದ್ದಾರೆ. ಈ ಕಾರಣಕ್ಕೆ ನಾನು ಫೋಟೋ ಕ್ಲಿಕ್ ಮಾಡಲು ಒಪ್ಪಲಿಲ್ಲ, ಈ ಕಾರಣಕ್ಕೆ ಅವರು ನನ್ನನ್ನೂ ಅಲ್ಲಿಂದ ಹೋಗಲು ಅವರ ಬಿಡಲಿಲ್ಲ ಎಂದು ಹೇಳಿದರು.

Published On - 12:37 pm, Wed, 13 July 22

ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಡಿಎಂಕೆ ಸಂಸದ ರಾಜಾ ಭಾಷಣ ಮಾಡುವಾಗ ಬಿದ್ದ ಫೆಡ್​ಲೈಟ್ ಕಂಬ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಉಗ್ರರಿಗೆ ಸಹಾಯ ಮಾಡಿದ್ದ ಇಮ್ತಿಯಾಜ್ ನದಿಗೆ ಹಾರಿ ಪ್ರಾಣ ಬಿಟ್ಟ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ