AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮೊಳೆಗಳನ್ನು ತಿಂದ ವ್ಯಕ್ತಿ, ಇದು ಸಾಧ್ಯನಾ? ಇಂತಹ ವಿಲಕ್ಷಣ ವ್ಯಕ್ತಿಗಳು ಇರುವುದು ಸತ್ಯ

ಸೋಶಿಯಲ್ ಮೀಡಿಯಾ ಎಂದ ಮೇಲೆ ಕೇಳಬೇಕೇ, ವಿಚಿತ್ರ ಎನಿಸುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಕಬ್ಬಿಣದ ಮೊಳೆಗಳನ್ನು ಸಲೀಸಾಗಿ ತಿನ್ನುತ್ತಿದ್ದಾನೆ. ಈ ವಿಡಿಯೋ ನೋಡಿದ ನೆಟ್ಟಿಗರು ಶಾಕ್ ಆಗಿದ್ದು ಬಾಯಿಯ ಮೇಲೆ ಬೆರಳಿಟ್ಟಿದ್ದಾರೆ.

Viral Video : ಮೊಳೆಗಳನ್ನು ತಿಂದ ವ್ಯಕ್ತಿ, ಇದು ಸಾಧ್ಯನಾ? ಇಂತಹ ವಿಲಕ್ಷಣ ವ್ಯಕ್ತಿಗಳು ಇರುವುದು ಸತ್ಯ
ಸಾಯಿನಂದಾ
| Edited By: |

Updated on: May 18, 2024 | 12:34 PM

Share

ಮನುಷ್ಯರು ಎಂದ ಮೇಲೆ ಹೊಟ್ಟೆ ಹಸಿವನ್ನು ನೀಗಿಸಲು ಸೊಪ್ಪು, ತರಕಾರಿ, ಹಣ್ಣು ಹಂಪಲು ಹೀಗೆ ನಾನಾ ರೀತಿಯ ಆಹಾರಗಳನ್ನು ತಿನ್ನುತ್ತೇವೆ. ಆದರೆ ಕೆಲವರ ಆಹಾರ ಕ್ರಮಗಳು ಮಾತ್ರ ವಿಚಿತ್ರವೆನಿಸುತ್ತದೆ. ಎರೆಹುಳು, ಜಿರಳೆ, ಕಪ್ಪೆ, ಇರುವೆ ಹೀಗೆ ಕ್ರೀಮಿ ಕೀಟ, ಪ್ರಾಣಿ ಪಕ್ಷಿಗಳನ್ನು ತಿಂದು ಬದುಕುವವರು ಇದ್ದಾರೆ. ಇಂತಹವರನ್ನೆಲ್ಲಾ ನೋಡುವಾಗ ಈ ಭೂಮಿಯ ಮೇಲೆ ಎಂತೆಂತ ಜನರು ಇದ್ದಾರೆ ಎಂದೆನಿಸುತ್ತದೆ. ಆದರೆ ಈ ವ್ಯಕ್ತಿಯನ್ನು ನೋಡಿದಾಗ ಹೀಗೂ ಇರ್ತಾರ ಎಂದು ನಿಮಗೆ ಅನಿಸದೇ ಇರದು.

ಸದ್ಯಕ್ಕೆ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಮೊಳೆಗಳನ್ನು ಸಲೀಸಾಗಿ ತಿನ್ನುತ್ತಿದ್ದಾನೆ. ಈತನು ತಿನ್ನುವ ಪರಿಗೆ ಇವನದ್ದು ಹಲ್ಲೊ ಅಥವಾ ಮೆಷಿನೋ ಎಂದೇನಿಸಬಹುದು. ಈ ಅಸಾಮಿಯು ಮೊಳೆಗಳನ್ನು ಕಡ್ಲೆ ಬೀಜಗಳನ್ನು ತಿಂದಂತೆ ತಿನ್ನುವುದನ್ನು ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

ಜನಸ್ನೇಹಿ ನಿರಾಶ್ರಿತರ ಆಶ್ರಮ ಎನ್ನುವ ಪೇಜ್ ನಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದ ಜೊತೆಗೆ ಉಕ್ಕಿನಾ ಮನುಷ್ಯ ಇವನೇ ಇರ್ಬೇಕು, ಇದು ಸಾಧ್ಯನಾ, ಇದರ ಹಿಂದಿನ ಸತ್ಯವೇನು ಎಂದು ಬರೆದುಕೊಳ್ಳಲಾಗಿದೆ. ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳುತ್ತಿದ್ದಂತೆ ಎರಡು ಲಕ್ಷ ಇಪ್ಪತ್ತೇಳು ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಈ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆ ಗೈದಿದ್ದಾರೆ.

ಇದನ್ನೂ ಓದಿ: ನೀನು ದೇವತೆ ತಾಯಿ, ಕೊಚ್ಚಿ ಹೋಗುತ್ತಿದ್ದ ಶ್ವಾನವನ್ನು ಕಾಪಾಡಿದ ಯುವತಿ

ಈ ವಿಡಿಯೋ ನೋಡಿದ ಬಳಕೆದಾರರೊಬ್ಬರು, ‘ಹೌದು ಇಂತಹ ಕೆಲವು ವಿಲಕ್ಷಣ ವ್ಯಕ್ತಿ ಗಳು ಇರುವುದು ಸತ್ಯ. ಇವರ ದೇಹ ರಚನೆ ಕೂಡ ನಮ್ಮಂತೆಯೇ ಸಹಜವಾಗಿದ್ದು ವೈಜ್ಞಾನಿಕ ಲೋಕಕ್ಕೂ ಸವಾಲಾಗಿದ್ದಾರೆ. ಇಂಜಿನ್ ಆಯಿಲ್ ಕುಡಿಯುವುದು, ಪೆಟ್ರೋಲ್, ಡೀಸೆಲ್‌,ಕುಡಿಯುವುದು, ಇಂತಹ ವಿಲಕ್ಷಣ ಸ್ವಭಾವದ ವ್ಯಕ್ತಿ ಗಳು ಬಹಳಷ್ಟಿದ್ದಾರೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ‘ಇವರು ಯಾರೋ ಮಾರಾಯ ಮೊಳೆ ನಾ ಮ್ಯಾಗಿ ತಿನ್ನೋ ಆಗೆ ಸಲಿಸ್ ಆಗಿ ತಿಂತಾನೆ ಎಂದಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು