AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯ ಮೇಲೆ ಗರಂ ಆಗಿ ದಾಳಿ ಮಾಡಲು ಮುಂದಾದ ಆಮೆ

ಕ್ಯಾಮೆರಾದಲ್ಲಿ ಸೆರೆಯಾದ ಭಯಾನಕ ಘಟನೆಯು ಆಮೆಗೆ ನೀರು ಕುಡಿಸುವಾಗ ಮಹಿಳೆ ಹೇಗೆ ಅದರ ಕೋಪಕ್ಕೆ ಗುರಿಯಾಗುತ್ತಾಳೆ ಎಂಬುದನ್ನು ತೋರಿಸುತ್ತದೆ. ಸದ್ಯಕ್ಕೆ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಮೆಗೆ ಇಷ್ಟೊಂದು ಕೋಪವೇ ಎಂದು ನೋಡುಗರು ಆಶ್ಚರ್ಯ ಚಕಿತರಾಗಿದ್ದಾರೆ.

Viral Video: ಮಹಿಳೆಯ ಮೇಲೆ ಗರಂ ಆಗಿ ದಾಳಿ ಮಾಡಲು ಮುಂದಾದ ಆಮೆ
ಆಮೆಯ ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:May 13, 2023 | 6:19 PM

Share

ಪ್ರಾಣಿಗಳು ಅವುಗಳ ಮುದ್ದಾದ ಚೇಷ್ಟೆಯಿಂದ ರಂಚಿಸುತ್ತವೆ. ಅದರ ಹೊರತಾಗಿಯೂ ಕೆಲವೊಮ್ಮೆ ಅವುಗಳ ಕೋಪಕ್ಕೆ ಮನುಷ್ಯರು ಗುರಿಯಾಗುದುಂಟು. ಪ್ರಾಣಿಗಳ ದಾಳಿಗೆ ಮನುಷ್ಯರು ಬಳಿಯಾಗಿರುವ ಅದೆಷ್ಟೋ ಉದಾಹರಣೆಗಳಿವೆ. ದೊಡ್ಡ ಪ್ರಾಣಿಗಳು ಕೋಪಗೊಳ್ಳುವುದನ್ನು ಸಾಮಾನ್ಯವಾಗಿ ನೀವೆಲ್ಲರೂ ನೋಡಿರುತ್ತೇವೆ. ಆದರೆ ಶಾಂತರೂಪಿ ಆಮೆಗಳು ಕೋಪ ಮಾಡಿಕೊಳ್ಳುವುದನ್ನು ನೀವು ಎಂದಾದರೂ ನೋಡಿದ್ದೀರಾ, ಇಲ್ಲೊಂದು ಪುಟ್ಟ ಆಮೆ ಮಹಿಳೆಯ ಮೆಲೆ ಕೋಪಗೊಂಡ ಆಕೆಯ ಮೇಲೆ ದಾಳಿ ಮಾಡಲು ಯತ್ನಿಸಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಆಮೆಗೂ ಇಷ್ಟು ಕೋಪವೇ ಎಂದು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಇದೀಗ ವೈರಲ್ ಆಗಿರುವ ವೀಡಿಯೋದಲ್ಲಿ ಮಹಿಳೆಯೊಬ್ಬರು ಬಾಯಾರಿದ ಆಮೆಗೆ ಬಾಟಲಿಯಿಂದ ನೀರುಣಿಸುವುದನ್ನು ಕಾಣಬಹುದು. ಆಮೆಯು ತಂತಿಯ ಆವರಣದ ಹಿಂದೆ ಇತ್ತು. ಒಬ್ಬ ಮಹಿಳೆಯು ತಮ್ಮ ಬಾಟಲಿಯಲ್ಲಿದ್ದ ನೀರನ್ನು ಆ ಬಾಯಾರಿದ ಆಮೆಗೆ ನೀಡುತ್ತಾರೆ. ಮೊದದೊದಲು ಚೆನ್ನಾಗಿಯೇ ನೀರು ಕುಡಿಯುತ್ತಿತ್ತು. ಆದರೆ ಇದ್ದಕ್ಕಿದಂತೆ ಆಮೆಯು ಕೋಪ ಮಾಡಿಕೊಳ್ಳಲು ಪ್ರಾರಂಭಿಸಿತು. ತನ್ನ ಸಿಟ್ಟನ್ನು ತಡೆಯಲಾರದೆ ಮಹಿಳೆಯ ಮೇಲೆ ದಾಳಿ ಮಾಡಲು ಮುಂದಾಗುತ್ತದೆ.

ಇದನ್ನೂ ಓದಿ: ವೈರಲ್ ವಿಡಿಯೋ; ಈ ನಾಯಿಗೆ ನಮ್ಮಂತೆ ಕೈಗಳಿದ್ದಿದ್ದರೆ ಇಷ್ಟೊತ್ತಿಗೆ…

@strangestMedia ಎಂಬ ಟ್ವಿಟರ್ ಖಾತೆಯಲ್ಲಿ ಈ ವೀಡಿಯೋವನ್ನು ಹಂಚಿಕೊಳ್ಳಲಾಗಿದ್ದು, 4 ಮಿಲಿಯನ್ ವೀಕ್ಷಣೆಗಳನ್ನು 39 ಸಾವಿರ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಮತ್ತು ಹಲವಾರು ಕಮೆಂಟ್ಸ್ ಗಳು ಹರಿದುಬಂದಿವೆ. ಒಬ್ಬ ಬಳಕೆದಾರರು ‘ಆಮೆಯಿಂದ ಕೃತಜ್ಞತೆಯ ಕೊರತೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಹೃದಯವನ್ನು ಬೆಚ್ಚಿ ಬೀಳಿಸುವಂತಿದೆ ಎಂದು ಕಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:19 pm, Sat, 13 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ