Viral Video: ಮಹಿಳೆಯ ಪರ್ಸ್ ಎಗರಿಸಲು ಬಂದ ಕಳ್ಳ ಬಸ್​​​ನಲ್ಲೇ ಲಾಕ್, ವಿಡಿಯೋ ವೈರಲ್

ಕಳ್ಳತನವನ್ನೇ ವೃತ್ತಿಯಾಗಿಸಿಕೊಂಡವರು ಹಲವರಿದ್ದಾರೆ. ಹೀಗಾಗಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲೆಯಾಗುತ್ತಿದೆ. ಇತ್ತ ಸೋಶಿಯಲ್ ಮೀಡಿಯಾದಲ್ಲಿ ಕಳ್ಳತನದ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಬಸ್ಸಿನಲ್ಲಿ ಮಹಿಳೆಯ ಬಸ್ ಎಗರಿಸಲು ಪ್ರಯತ್ನಿಸಿ ವೇಳೆಯಲ್ಲಿ ಡ್ರೈವರ್ ಕೈಯಲ್ಲಿ ಸಿಕ್ಕಿ ಬಿದ್ದು ಬಸ್ಸಿನಲ್ಲಿಯೇ ಲಾಕ್ ಆದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರ ಗಮನ ಸೆಳೆಯುತ್ತಿವೆ.

Viral Video: ಮಹಿಳೆಯ ಪರ್ಸ್ ಎಗರಿಸಲು ಬಂದ ಕಳ್ಳ ಬಸ್​​​ನಲ್ಲೇ ಲಾಕ್, ವಿಡಿಯೋ ವೈರಲ್
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: May 27, 2024 | 2:23 PM

ಕಳ್ಳತನ ಮಾಡುವುದು ಅಪರಾಧ ಎಂದು ಗೊತ್ತಿದ್ರೂ ಇದನ್ನೇ ವೃತ್ತಿಯಾಗಿಸಿಕೊಂಡವರು ಹಲವರಿದ್ದಾರೆ. ಹೀಗಾಗಿ ಹೆಚ್ಚು ಜನರು ಸೇರಿದ ಸ್ಥಳಗಳಲ್ಲಿ,ಬಸ್ಸಿನಲ್ಲಿ ಪ್ರಯಾಣಿಸುವಾಗ ಎಷ್ಟು ಜಾಗರೂಕರಾಗಿದ್ದರೂ ಸಾಲದು. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಬಸ್ಸಿನಲ್ಲಿ ಮಹಿಳೆಯರ ಪರ್ಸ್ ಎಗರಿಸಲು ಪ್ರಯತ್ನಿಸಿದ್ದು ಕೊನೆಗೆ ತನ್ನ ಪ್ರಯತ್ನವು ವಿಫಲವಾಗಿ ಸಿಕ್ಕಿಬಿದ್ದಿದ್ದಾನೆ.

ಸದ್ಯಕ್ಕೆ ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಯಾಣಿಕನಂತೆ ಬಸ್ಸು ಹತ್ತಿದ ವ್ಯಕ್ತಿಯು ಅಲ್ಲೇ ಕುಳಿತಿದ್ದ ಮಹಿಳೆಯರ ಕದಿಯಲು ಯತ್ನಿಸಿದ್ದಾನೆ.  ಆದರೆ ಮೊದಲ ಪ್ರಯತ್ನದಲ್ಲಿದ್ದು ವಿಫಲವಾಗುತ್ತಿದ್ದಂತೆ ಆ ವೇಳೆ ಅಕಸ್ಮಾತ್ ಕೈ ತಾಗಿದಂತೆ ನಟಿಸಿದ್ದಾನೆ. ಆದರೆ ಎರಡನೇ ಬಾರಿ ಪರ್ಸ್ ಎಳೆದುಕೊಂಡು ಬಸ್ಸಿನಿಂದ ಓಡಿಹೋಗಲು ಯತ್ನಿಸುತ್ತಿದ್ದಂತೆ ಇದನ್ನು ಅರಿತ ಬಸ್ ಚಾಲಕ ಬಾಗಿಲು ಹಾಕಿದ್ದಾನೆ. ಆದರೆ ಈ ಚಾಲಕನು ಮಾತ್ರ ಬಸ್ಸನ್ನು ನಿಲ್ಲಿಸದೆಯೇ ಅಲ್ಲೇ ಇದ್ದ ಕೋಲಿನಿಂದ ಆ ಕಳ್ಳನನ್ನ ಮನಬಂದಂತೆ ಬಾರಿಸಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ಪೊಲೀಸರು ಬಂದಿದ್ದು ಕಳ್ಳನನ್ನು ಬಂಧಿಸಿ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ವೃದ್ಧಾಶ್ರಮದಲ್ಲಿ ಅರಳಿದ ಪ್ರೀತಿ, 102 ವರ್ಷ ವಯಸ್ಸಿನ ಅಜ್ಜಿಯನ್ನು ವರಿಸಿದ 100ರ ಅಜ್ಜ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

‘non aesthetic things’ ಎನ್ನುವ ಹೆಸರಿನ ಖಾತೆಯಲ್ಲಿ  ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಪರ್ಸ್ ಕದಿಯಲು ಯತ್ನಿಸಿ ವಿಫಲನಾಗಿದ್ದಾನೆ ಎಂದು ಬರೆದುಕೊಳ್ಳಲಾಗಿದೆ. ಈಗಾಗಲೇ ಈ ವಿಡಿಯೋವೊಂದು 4.9 ಮಿಲಿಯನ್ಸ್ ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗನೊಬ್ಬನು, ‘ಈ ಜನ್ಮದಲ್ಲಿ ದೇವರು ಕೆಟ್ಟ ಕರ್ಮದ ಫಲವನ್ನು ನೀಡುತ್ತಾನೆ’ ಎಂದು ಕಾಮೆಂಟ್ ಮಾಡಿದ್ದಾನೆ. ಇನ್ನು ಕೆಲವರು, ‘ನಾವು ರೋಗಕ್ಕೆ ಚಿಕಿತ್ಸೆ ನೀಡಬೇಕೇ ಹೊರತು ರೋಗಿಗೆ ಚಿಕಿತ್ಸೆ ನೀಡಬಾರದು’ ಎಂದು ಸರ್ಕಾರವನ್ನು ದೂಷಿಸಸುವ ಮೂಲಕ ಕಾಮೆಂಟ್ ಸುರಿಮಳೆಗೈದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು