AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಸ್ಲಮ್‌ನಲ್ಲಿ ವಾಸಿಸುವ 12 ವರ್ಷದ ಬಾಲಕನಿಗೆ ಐಎಎಸ್ ಅಧಿಕಾರಿಯಾಗುವಾಸೆ; ವಿಡಿಯೋ ವೈರಲ್​​

ಮಹಮ್ಮದ್​​ ಆಶಿಕ್​​ ಎಂಬ ಸೋಶಿಯಲ್​ ಮೀಡಿಯಾ ಪ್ರಭಾವಿ ಈಪುಟ್ಟ ಬಾಲಕನ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ "ಪುಟ್ಟ ಗುಡಿಸಲಿನಲ್ಲಿ ವಾಸಿಸುತ್ತಿದ್ದರೂ, ಯಾವುದೇ ಬೇಸರವಿಲ್ಲ, ಮುಂದೊಂದು ದಿನ ಐಎಎಸ್​​ ಅಧಿಕಾರಿಯಾಗಿ ದೊಡ್ಡ ಮನೆ ಕಟ್ಟುವೇ, ಬಡವರಿಗೆ ಸಹಾಯ ಮಾಡುವೇ" ಎಂದು ಬಾಲಕ ಹೇಳಿಕೊಂಡಿದ್ದಾನೆ.

ಬೆಂಗಳೂರಿನ ಸ್ಲಮ್‌ನಲ್ಲಿ ವಾಸಿಸುವ 12 ವರ್ಷದ ಬಾಲಕನಿಗೆ ಐಎಎಸ್ ಅಧಿಕಾರಿಯಾಗುವಾಸೆ; ವಿಡಿಯೋ ವೈರಲ್​​
ನಾಗರಾಜ್​​
ಅಕ್ಷತಾ ವರ್ಕಾಡಿ
|

Updated on: Mar 20, 2024 | 3:08 PM

Share

ಭವಿಷ್ಯದಲ್ಲಿ ಐಎಎಸ್‌ ಅಧಿಕಾರಿಯಾಗುವ ಕನಸು ಹೊತ್ತಿರುವ ಬೆಂಗಳೂರಿನ ಸ್ಲಮ್‌ನಲ್ಲಿ ವಾಸಿಸುತ್ತಿರುವ 12 ವರ್ಷದ ಬಾಲಕ ನಾಗರಾಜ್​​ನ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಗುಡಿಸಲಿನಲ್ಲಿ ವಾಸಿಸುತ್ತಿದ್ದರೂ ಬಾಲಕನ ಐಎಎಸ್‌ ಅಧಿಕಾರಿಯಾಗುವ ಆಸೆ ನೆಟ್ಟಿಗರ ಮನಗೆದ್ದಿದೆ. ಪ್ರಸ್ತುತ ಆರನೇ ತರಗತಿಯಲ್ಲಿ ಓದುತ್ತಿರುವ ನಾಗರಾಜ ಕಲಿಕೆಯಲ್ಲಿ ಮುಂದಿದ್ದು, ಈ ವಯಸ್ಸಿನಲ್ಲೇ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರ ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಜೀವನದ ಭಾಗವನ್ನಾಗಿಸಿದ್ದಾನೆ.

ಮಹಮ್ಮದ್​​ ಆಶಿಕ್​​ ಎಂಬ ಸೋಶಿಯಲ್​ ಮೀಡಿಯಾ ಪ್ರಭಾವಿ ಈಪುಟ್ಟ ಬಾಲಕನ ಕುರಿತ ವಿಡಿಯೋವನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ “ಪುಟ್ಟ ಗುಡಿಸಲಿನಲ್ಲಿ ವಾಸಿಸುತ್ತಿದ್ದರೂ, ಯಾವುದೇ ಬೇಸರವಿಲ್ಲ, ಮುಂದೊಂದು ದಿನ ಐಎಎಸ್​​ ಅಧಿಕಾರಿಯಾಗಿ ದೊಡ್ಡ ಮನೆ ಕಟ್ಟುವೇ, ಬಡವರಿಗೆ ಸಹಾಯ ಮಾಡುವೇ” ಎಂದು ಬಾಲಕ ಹೇಳಿಕೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸ್ವಾತಂತ್ರ್ಯಪೂರ್ವದಲ್ಲೇ ಜುನಾಗಡ್ ನವಾಬನ ನಾಯಿ ಮದುವೆಗೆ ಆದ ಖರ್ಚು 2 ಕೋಟಿ ರೂ

ಈ ವಿಡಿಯೋವನ್ನು ಮಾರ್ಚ್​​ 16ರಂದು ಹಂಚಿಕೊಳ್ಳಲಾಗಿದ್ದು, 4 ದಿನಗಳಲ್ಲಿ 12.7 ಮಿಲಿಯನ್​​ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಬಡತನದಲ್ಲೂ ಬಾಲಕ ಕಲಿಕೆಯ ಆಸಕ್ತಿ ಕಂಡು, ಐಎಎಸ್​​ ಆಗುವ ಕನಸು ಕಂಡು ‘ಶೀಘ್ರದಲ್ಲೇ ಕನಸು ನನಸಾಗಲಿ’ ಎಂದು ಸಾಕಷ್ಟು ನೆಟ್ಟಿಗರು ಹಾರೈಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!